ಉತ್ತರ ಪ್ರದೇಶ | ರಾಹುಲ್ ಯಾತ್ರೆಯಲ್ಲಿ ಭಾರೀ ಜನಸಮೂಹ; ಗಾಂಧಿಗೆ ಇರಾನಿ ಸವಾಲು

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಸೋಮವಾರ ಉತ್ತರ ಪ್ರದೇಶದ ಅಮೇಥಿಗೆ ತಲುಪಿದೆ. ಈ ಹಿಂದೆ, ರಾಹುಲ್‌ ಗಾಂಧಿ ಪ್ರತಿನಿಧಿಸಿದ್ದ ಮತ್ತು ಕಳೆದ ಚುನಾವಣೆಯಲ್ಲಿ ಸೋಲನುಭವಿದ್ದ ಕ್ಷೇತ್ರದಲ್ಲಿ ರಾಹುಲ್‌ ಯಾತ್ರೆಗೆ ಭಾರೀ ಜನಸಮೂಹ ಭಾಗಿಯಾಗಿತ್ತು. ಅಮೇಥಿಯ ಲಾಲ್‌ಗಂಜ್‌ನಲ್ಲಿ ಭಾಷಣ ಮಾಡಿದ ರಾಹುಲ್‌ ಗಾಂಧಿ, ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ದಲಿತರು, ಹಿಂದುಳಿದವರು ಹಾಗೂ ರಾಷ್ಟ್ರಪತಿಯನ್ನೂ ಸಹ ‘ಆಹ್ವಾನಿಸದ’ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

“ಕೈಗಾರಿಕೋದ್ಯಮಿಗಳು ಮತ್ತು ಅಮಿತಾಭ್ ಬಚ್ಚನ್ ಅವರನ್ನು ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಆಹ್ವಾನಿಸುವ ಮೂಲಕ ದೇಶದ 73% ಜನರಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ. ರಾಷ್ಟ್ರಪತಿ ಅವರನ್ನೂ ಆಹ್ವಾನಿಸಿಲ್ಲ. ಇದು ಅವರಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದ್ದಾರೆ.

“ಈಗ ಈ ದೇಶ ನಿಮ್ಮದಾಗಿಲ್ಲ. ಇದು ಬಿಜೆಪಿಗರ ಭಾರತವಾಗಿದೆ. ನೀವು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಬೇಕಷ್ಟೇ. ಆದರೆ, ಬಿಜೆಪಿಗರು ಮಾಡುವುದೆಲ್ಲ ಹೆಲಿಕಾಪ್ಟರ್ ಸವಾರಿ ಮತ್ತು ಹಣ ಗಳಿಸುವುದು,” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರು ದೆಹಲಿಗೆ ಪ್ರವೇಶಿಸುವುದನ್ನು ತಡೆಯಲಾಗಿದೆ. ಮೋದಿ ಸರ್ಕಾರ ರೈತರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಿದೆ. ಬೃಹತ್ ಗೋಡೆಗಳನ್ನು ನಿರ್ಮಿಸಿದೆ. ಅವರು ಏನು ಕೇಳುತ್ತಿದ್ದಾರೆ. ಅವರು ಕೇಳುತ್ತಿರುವುದು MSP ಮಾತ್ರ; ಇದು ದೊಡ್ಡ ವಿಷಯವಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಎಂಎಸ್‌ಪಿಗೆ ಕಾನೂನಾತ್ಮಕ ಖಾತರಿ ಕೊಡುತ್ತೇವೆ” ಎಂದರು.

ನ್ಯಾಯ್ ಯಾತ್ರೆ ಅಮೇಥಿಯಲ್ಲಿದ್ದ ಸಮಯದಲ್ಲಿಯೇ ಅಮೇಥಿಯ ಬಿಜೆಪಿ ಸಂಸದೆ, ಸಚಿವೆ ಸ್ಮೃತಿ ಇರಾನಿ ಕೂಡ ಅದೇ ನಗರದಲ್ಲಿದ್ದರು. “ರಾಹುಲ್‌ ಗಾಂಧಿ ಅವರಿಗೆ ಗೆಲ್ಲುವ ವಿಶ್ವಾಸವಿದ್ದರೆ, ಅಮೇಥಿಯಿಂದ ಸ್ಪರ್ಧಿಸಲಿ” ಎಂದು ಸವಾಲು ಹಾಕಿದರು.

“2019ರಲ್ಲಿ ಅವರು (ರಾಹುಲ್ ಗಾಂಧಿ) ಅಮೇಥಿಯನ್ನು ಬಿಟ್ಟು ಹೋದರು. ಈಗ ಅವರಿಗೆ ಆತ್ಮವಿಶ್ವಾಸವಿದ್ದರೆ ವಯನಾಡಿಗೆ ಹೋಗದೆ ಅಮೇಥಿಯಲ್ಲೇ ಸ್ಪರ್ಧಿಸಲಿ. ಅಮೇಥಿಯಲ್ಲಿ ಸತತ ಮೂರು ಚುನಾವಣೆಗಳನ್ನು ಗೆದ್ದಿದ್ದರೂ, ಕ್ಷೇತ್ರಕ್ಕೆ ರಾಹುಲ್ ಗಾಂಧಿ ಕೊಡುಗೆ ತೀರಾ ಕಡಿಮೆ” ಎಂದು ಆರೋಪಿಸಿದರು.

2019ರಲ್ಲಿ ಮತದಾರರು ಬದಲಾವಣೆ ಬಯಸಿದರು. ಹೀಗಾಗಿ, ರಾಹುಲ್‌ ಗಾಂಧಿಯನ್ನು ಸೋಲಿಸಿದರು. ಅಮೇಥಿಯ ಜನರ ಮನಸ್ಥಿತಿಯನ್ನು ಗ್ರಹಿಸಿದ ಗಾಂಧಿ ಕುಟುಂಬವು 2024ರ ಚುನಾವಣೆಗೆ ಮುಂಚಿತವಾಗಿ ರಾಯ್ಬರೇಲಿಯಿಂದ ದೂರವಿರಲು ನಿರ್ಧರಿಸಿದೆ” ಎಂದರು.

ಅಂದಹಾಗೆ, ರಾಹುಲ್ ಈ ಬಾರಿ ಅಮೇಥಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಬೆಳವಣಿಗೆಗಳು ಸೂಚಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...