ಲೈಂಗಿಕ ಉದ್ದೇಶವಿಲ್ಲದೆ ಅಪ್ಪಿಕೊಳ್ಳುವುದು ಅಪರಾಧವಲ್ಲ ಎಂದ ಬ್ರಿಜ್ ಭೂಷಣ್ ಸಿಂಗ್

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದ ಆರೋಪಿಯಾಗಿರುವ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೆಹಲಿ ನ್ಯಾಯಾಲಯದಲ್ಲಿ ”ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ತಬ್ಬಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಪ್ರಕರಣ ಸಂಬಂಧ ಬುಧವಾರ(ಆಗಸ್ಟ್ 10) ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ಬ್ರಿಜ್ ಭೂಷಣ್ ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ನಿರಾಕರಿಸಿ ವಕೀಲರ ಮೂಲಕ ವಾದವನ್ನು ಮಂಡಿಸಿದ್ದಾರೆ. ಬ್ರಿಜ್ ಭೂಷಣ್ ಸಿಂಗ್ ಪರ ಹಿರಿಯ ವಕೀಲ ರಾಜೀವ್ ಮೋಹನ್ ವಕಾಲತ್ತು ವಹಿಸಿದ್ದಾರೆ.

ನ್ಯಾಯಮೂರ್ತಿ ಹರ್ಜಿತ್ಸಿಂಗ್ ಜಸ್ಬಾಲ್ ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ. ಕುಸ್ತಿ ಪಂದ್ಯಗಳು ಹೆಚ್ಚಾಗಿ ಪುರುಷ ತರಬೇತುದಾರರನ್ನೇ ಹೊಂದಿರುತ್ತವೆ ಎಂದು ಹೇಳಿದ ವಕೀಲರು, ‘ಆತಂಕದಿಂದ ಅಥವಾ ಉತ್ತಮ ಸಾಧನೆಗಾಗಿ ಆಟಗಾರನನ್ನು ಹುರಿದುಂಬಿಸುವ ಸಲುವಾಗಿ ಪುರುಷ ಕೋಚ್ ತಬ್ಬಿಕೊಂಡರೆ, ಅದು ಸಹಜ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಶಾಸಕನ ಸಹಾಯ; ವರದಿ ಮಾಡಿದ ಪತ್ರಕರ್ತನ ಮೇಲೆ ಗೂಂಡಾಗಳಿಂದ ಹಲ್ಲೆ

“ತಮ್ಮ ಕಕ್ಷಿದಾರರು ಅನೇಕ ವರ್ಷಗಳಿಂದ ಆಟಗಾರರಿಗೆ ತಿಳಿದಿರುವ ವ್ಯಕ್ತಿಯಾಗಿದ್ದರು ಮತ್ತು ಅವರಿಗೆ ಮಾರ್ಗದರ್ಶನ ನೀಡಿದ್ದಾರೆ. ಪದಕ ಗೆಲ್ಲುವುದು ದೇಶಕ್ಕೆ ಹೆಮ್ಮೆಯ ಕ್ಷಣವಾಗಿತ್ತು ಮತ್ತು ಆ ಅಪ್ಪುಗೆ ಅವರ ಸಂತೋಷದ ಅಭಿವ್ಯಕ್ತಿಯಾಗಿತ್ತು. ಆದ್ದರಿಂದಲೇ ಅವರಿಗೆ ಲೈಂಗಿಕ ಕಿರುಕುಳದ ಉದ್ದೇಶ ಇರಲಿಲ್ಲ ಎಂದು ನಾವು ಸಮರ್ಥಿಸಿಕೊಳ್ಳುತ್ತೇವೆ” ಎಂದು ನ್ಯಾಯಾಲಯಕ್ಕೆ ಬ್ರಿಜ್ ಭೂಷಣ್ ಪರ ವಕೀಲರು ತಿಳಿಸಿದರು.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 188 ರ ಪ್ರಕಾರ, ಕೇಂದ್ರ ಸರ್ಕಾರದ ಪೂರ್ವಾನುಮತಿ ಇಲ್ಲದೆ ತನ್ನ ಕಕ್ಷಿದಾರನ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸಲು ಸಾಧ್ಯವಿಲ್ಲ ಎಂದು ವಕೀಲ ರಾಜೀವ್ ಮೋಹನ್ ನ್ಯಾಯಾಲಯಕ್ಕೆ ತಿಳಿಸಿದರು. ಮ್ಯಾಜಿಸ್ಟ್ರೇಟ್ ಅಪರಾಧದ ಅರಿವನ್ನು ಮಾತ್ರ ತೆಗೆದುಕೊಳ್ಳಬಹುದು. ಆದರೆ ವಿಚಾರಣೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಕರ್ನಾಟಕದ ಬಳ್ಳಾರಿಯ ಘಟನೆಯೊಂದನ್ನು ಉದಾಹರಣೆ ನೀಡಿದ ವಕೀಲರು, ಸೆಕ್ಷನ್ 176 ರಿಂದ 188 ರವರೆಗಿನ ವಿಚಾರಣೆ ಅಥವಾ ವಿಚಾರಣೆಯ ಸ್ಥಳವು ಯಾವ ವಿಚಾರಣೆಯನ್ನು ನಡೆಸಬೇಕು ಎಂಬುದನ್ನು ನಿರ್ದಿಷ್ಟಪಡಿಸುತ್ತದೆ. ಅಪರಾಧವಾಗಿದ್ದರೆ ಎಲ್ಲಿ ಅಪರಾಧ ಮಾಡಲಾಗಿದೆ, ಕಿರುಕುಳ, ಅತ್ಯಾಚಾರ ಇತ್ಯಾದಿ ಅಪರಾಧಗಳನ್ನು ನಮೂದಿಸಬೇಕು ಎಂದು ವಾದ ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...