ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕ್ಕಾಗಿ ನೂರಾರು ಮರಕ್ಕೆ ಕೊಡಲಿ: ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ್ ಖಂಡ್ರೆ

Date:

ಸ್ಯಾಂಡಲ್‌ವುಡ್‌ ಸ್ಟಾರ್ ನಟ ಯಶ್ ನಟಿಸುತ್ತಿರುವ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣಕ್ಕಾಗಿ ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ನೂರಾರು ಮರಕ್ಕೆ ಕೊಡಲಿ ಏಟು ನೀಡಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಅಲ್ಲದೇ, ಮರ ಕಡಿದಿರುವ ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರ ಪ್ರದೇಶಕ್ಕೆ ಮಂಗಳವಾರ ಖುದ್ದಾಗಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರ ಕಡಿದಿರುವ ಬಗ್ಗೆ ಸಿನಿಮಾ ತಂಡದವರನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಖಂಡ್ರೆ, “ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ” ಎಂದು ಖಂಡ್ರೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ ಮೀಸಲು ಅರಣ್ಯ ಎಂದು ಗೆಜೆಟ್ ಅಧಿಸೂಚನೆ ಆಗಿದ್ದು, ಇದನ್ನು 1960ರ ದಶಕದಲ್ಲಿ ಡಿನೋಟಿಫಿಕೇಷನ್ ಮಾಡದೆ ಕಾನೂನು ಬಾಹಿರವಾಗಿ ಎಚ್.ಎಂ.ಟಿ. ಸಂಸ್ಥೆಗೆ ದಾನ, ಮಂಜೂರು ಹೆಸರಲ್ಲಿ ಹಸ್ತಾಂತರಿಸಲಾಗಿರುತ್ತದೆ. ಸುಪ್ರೀಂಕೋರ್ಟ್ ‘Once a forest is always a forest unless de-notified’ ಎಂದು ಹೇಳಿದ್ದು, ಡಿ ನೋಟಿಫಿಕೇಷನ್ ಆಗದ ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯವೇ ಆಗಿರುತ್ತದೆ. ಜೊತೆಗೆ ತನ್ನ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಎಚ್.ಎಂ.ಟಿ. ವಿವಿಧ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಿದ್ದು, ಇಲ್ಲಿ ಅರಣೇತರ ಚಟುವಟಿಕೆ ನಡೆಯುತ್ತಿರುತ್ತದೆ. ಈ ಅರಣ್ಯ ಪ್ರದೇಶದಲ್ಲಿ ಮರ ಗಿಡಗಳನ್ನು ಕಡಿದಿರುವುದು ಉಪಗ್ರಹ ಚಿತ್ರದಿಂದ ಗೋಚರಿಸುತ್ತಿದೆ ಎಂದು ತಿಳಿಸಿದ್ದಾರೆ.

WhatsApp Image 2024 10 29 at 4.27.35 PM
ಈಶ್ವರ್ ಖಂಡ್ರೆ ಪತ್ರ

ಎಚ್.ಎಂ.ಟಿ. ತನ್ನ ವಶದಲ್ಲಿರುವ ಅರಣ್ಯ ಭೂಮಿಯನ್ನು ಸಿನಿಮಾ ಚಿತ್ರೀಕರಣಕ್ಕೆ ಮತ್ತು ಖಾಲಿ ಜಾಗವನ್ನು ದಿನದ ಆಧಾರದ ಮೇಲೆ ಬಾಡಿಗೆಗೆ ನೀಡುತ್ತಿರುವುದನ್ನೂ ಗಮನಿಸಿದ್ದೇನೆ. ಇನ್ನು ಕೆನರಾ ಬ್ಯಾಂಕ್ ಗೆ ಎಚ್.ಎಂ.ಟಿ. ಮಾರಾಟ ಮಾಡಿದೆ ಎನ್ನಲಾದ ಅರಣ್ಯ ಭೂಮಿಯಲ್ಲಿ ಟಾಕ್ಸಿಕ್’ ಎಂಬ ಹೆಸರಿನ ಚಲನಚಿತ್ರಕ್ಕಾಗಿ ಹಲವು ತಿಂಗಳಿನಿಂದ ಚಿತ್ರೀಕರಣ ನಡೆಯುತ್ತಿದ್ದು, ಬೃಹತ್ ಸೆಟ್ ಹಾಕಲಾಗಿದೆ. ಇದಕ್ಕಾಗಿ ಇಲ್ಲಿದ್ದ ನೂರಾರು ಮರ -ಗಿಡ ಕಡಿಯಲಾಗಿದೆ. ನಿಯಮಾನುಸಾರ ಅನುಮತಿ ಇಲ್ಲದೆ ಇಲ್ಲದೆ ಮರ ಕಡಿಯುವುದು ಅದರಲ್ಲೂ ಅರಣ್ಯ ಭೂಮಿಯಲ್ಲಿ ಮರ ಗಿಡಗಳ ಅಕ್ರಮ ಕಡಿತಲೆ ದಂಡನೀಯ ಅಪರಾಧ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದಿಂದ ಹಿಂದಿನ ಮತ್ತು ಇಂದಿನ ಉಪಗ್ರಹ ಚಿತ್ರಗಳನ್ನು ಪಡೆದು, ಎಷ್ಟು ಮರ ಕಡಿಯಲಾಗಿದೆ? ಇದಕ್ಕೆ ನಿಯಮಾನುಸಾರ ಅನುಮತಿ ಪಡೆಯಲಾಗಿದೆಯೇ.. ಅನುಮತಿ ಕೊಟ್ಟಿದ್ದರೆ ಅರಣ್ಯ ಭೂಮಿಯಲ್ಲಿ ಮರ ಕಡಿತಲೆಗೆ ಅನುಮತಿ ನೀಡಿದ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು, ಅನುಮತಿ ಇಲ್ಲದೆ ಮರ ಕಡಿತಲೆ ಮಾಡಿದ್ದಲ್ಲಿ ಅದಕ್ಕೆ ಕಾರಣರಾದ ಎಲ್ಲರ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...