ನಾನೂ ರಾಮಭಕ್ತ, ಎಲ್ಲ ದೇವರುಗಳನ್ನು ಪೂಜಿಸುತ್ತೇನೆ; ರಾಜಕೀಯ ಬೇಡ: ರಾಮನಗರ ಶಾಸಕ ಇಕ್ಬಾಲ್ ಹುಸೇನ್

Date:

“ನಾನೂ ರಾಮನ ಭಕ್ತ. ರಾಮನ ಜೊತೆ ಎಲ್ಲ ದೇವರುಗಳನ್ನು ಪೂಜಿಸುತ್ತೇನೆ. ರಾಮನಗರದಲ್ಲಿ ಎಲ್ಲ ಪಕ್ಷದವರು, ಧರ್ಮದವರು ಸೇರಿ ರಾಮೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ” ಎಂದು ರಾಮನಗರ ಕಾಂಗ್ರೆಸ್ ಶಾಸಕ ಹೆಚ್ ಎ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದಾರೆ.

ರಾಮನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ವೇಳೆ ರಾಮಮಂದಿರದ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ದೇವೆ. ಅದನ್ನ ಭಕ್ತಿಪೂರ್ವಕವಾಗಿಯೇ ಮಾಡುತ್ತೇವೆ. ನಾನು ಕೂಡ ಮೊದಲಿನಿಂದಲೂ ರಾಮನ ಭಕ್ತ. ಬಿಜೆಪಿಯವರು ರಾಮನನ್ನು, ಧರ್ಮವನ್ನು ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಾರೆ. ಆದರೆ ಕಾಂಗ್ರೆಸ್ ಯಾವತ್ತೂ ರಾಜಕೀಯದಲ್ಲಿ ಧರ್ಮ ಬೆರೆಸುವುದಿಲ್ಲ, ಪಕ್ಷಕ್ಕೆ ತನ್ನದೇ ಆದ ಸಿದ್ಧಾಂತ, ಬದ್ಧತೆ ಮತ್ತು ಶಿಸ್ತು ಇದೆ” ಎಂದು ಹೇಳಿದರು.

“ನಾನು ವಿದ್ಯಾರ್ಥಿ ಜೀವನದಲ್ಲಿದ್ದಾಗಲೇ ಸರಸ್ವತಿ ಪೂಜೆ, ಲಕ್ಷ್ಮಿ ಪೂಜೆ, ಗಣೇಶನ ಪೂಜೆ ಜೊತೆ ರಾಮನ ಪೂಜೆಯೂ ಮಾಡಿದ್ದೇನೆ. ರಾಮನ ಹೆಸರಿನಲ್ಲಿ ಇಂದು ರಾಜಕಾರಣ ಮಾಡಲಾಗುತ್ತಿದೆ. ಜನರನ್ನು ಧರ್ಮದ ಆಧಾರದಲ್ಲಿ ಒಡೆಯಲಾಗುತ್ತಿದೆ. ಕಾಂಗ್ರೆಸ್ ಯಾವತ್ತೂ ರಾಜಕೀಯದಲ್ಲಿ ಧರ್ಮ ಬೆರೆಸುವುದಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮ ಅವರಿಗೆ ರಾಜಕೀಯ ವಸ್ತು ಅಲ್ಲ. ಆದರೆ ನಮಗಲ್ಲ. ಅವರು ರಾಜಕಾರಣಕ್ಕಾಗಿ ರಾಮನನ್ನು ಬಳಸಿಕೊಳ್ಳಬಹುದು. ಆದರೆ ನಾವು ಹಾಗಲ್ಲ. ತಾನು ಎಲ್ಲ ದೇವರುಗಳನ್ನು ಆರಾಧಿಸಿ ಪೂಜಿಸುತ್ತೇನೆ. ನಾವು ನಮ್ಮ ನಮ್ಮ ಊರಿನಲ್ಲಿ, ಮನೆಗಳಲ್ಲಿ ಮನೆ ದೇವರು ಅಂತ ಇಟ್ಟುಕೊಂಡಂತೆಯೇ ಮನೆಗಳಲ್ಲಿ ಪೂಜಾ ಸ್ಥಳ ಮತ್ತು ಪೂಜಾ ಕೋಣೆಯನ್ನು ವ್ಯವಸ್ಥೆ ಮಾಡಿಕೊಂಡಿದ್ದೇವೆ” ಎಂದು ಹೇಳಿದರು.

“ಲೋಕಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿಯವರು ರಾಮನ ವಿಚಾರ ಪ್ರಸ್ತಾಪಿಸುತ್ತಿದ್ದಾರೋ ಇಲ್ಲವೋ, ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರುವ ವಿಚಾರ. ಆದರೆ ನಾವು ರಾಮನನ್ನ ಮನೆ ದೇವರು ಅಂತ ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹುದು, ಆದರೆ ನಮಗೆ ಹೊಸದೇನಲ್ಲ. ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.

ಇದನ್ನು ಓದಿದ್ದೀರಾ? ಗೋಧ್ರಾ ಹೇಳಿಕೆ | ಬಿಕೆ ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಿ: ಸಂಸದ ನಳಿನ್ ಕುಮಾರ್ ಕಟೀಲ್

“ರಾಮನ ವಿಚಾರದಲ್ಲಿ ತನಗಿರುವಂತಹ ನಿಲುವೇ ಕಾಂಗ್ರೆಸ್‌ನ ಎಲ್ಲ ಶಾಸಕರುಗಳಿಗೆ ಇದೆ. ಎಲ್ಲರೂ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿರುತ್ತಾರೆ. ಅದರಂತೆಯೇ ನಡೆದುಕೊಳ್ಳುತ್ತೇವೆ” ಎಂದು ರಾಮನಗರ ಕಾಂಗ್ರೆಸ್ ಶಾಸಕ ಹೆಚ್ ಎ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...