ರಾಮನ ಹೇಳಿಕೆಗೆ ಬದ್ಧ, ರಾವಣನಾಗಲೂ ಸಿದ್ಧ: ಸಚಿವ ಕೆ. ಎನ್. ರಾಜಣ್ಣ

Date:

“ಬಾಬರಿ ಮಸೀದಿ ಬೀಳಿಸಿದಾಗ ನಾನೂ ಹೋಗಿದ್ದೆ. ಟೆಂಟ್‌ನೊಳಗೆ ಗೊಂಬೆ ಇಟ್ಟು ರಾಮ ಅಂದಿದ್ರು” ಎಂದಿರುವ ತನ್ನ ಹೇಳಿಕೆಯ ಬಗ್ಗೆ ಗಟ್ಟಿಯಾಗಿ ನಿಂತಿರುವ ಸಚಿವ ಕೆ ಎನ್ ರಾಜಣ್ಣ, “ರಾಮನ ವಿಚಾರವಾಗಿ ನನ್ನ ಹೇಳಿಕೆಗೆ ನಾನು ಬದ್ಧ. ಆ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ರಾಮನ ಕುರಿತು ವೇದಿಕೆಯೊಂದರಲ್ಲಿ ನೀಡಿದ್ದ ಹೇಳಿಕೆಗೆ ನಾನು ಬದ್ಧ. 90ರ ದಶಕದಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದಾಗ, ಭೇಟಿ ಕೊಟ್ಟಾಗ ನಾನು ಕಂಡ ಚಿತ್ರಣವನ್ನು ಅವತ್ತು ಹೇಳಿಕೊಂಡಿದ್ದೇನೆ ಅಷ್ಟೇ. ಬೊಂಬೆಯನ್ನ ದೇವರು ಅಂತಾ ಹೇಳಿದ್ರೆ ಏನು ತಪ್ಪು? ಬೊಂಬೆಯಲ್ಲಿ ದೈವತ್ವ ಇರೋದಿಲ್ಲವೇ? ಅಯೋಧ್ಯೆಗೆ ಭೇಟಿ ನೀಡಿದಾಗ ನನಗೆ ಕಂಡಿದ್ದನ್ನು, ನನ್ನ ಅನಿಸಿಕೆಯನ್ನು ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ನಾನು ಹೇಳಿದ ರೀತಿಯಲ್ಲಿ ಇರಲಿಲ್ಲ ಎಂಬುದನ್ನು ಬಿಜೆಪಿಯವರು ತಿಳಿಸಲಿ” ಎಂದು ಹೇಳಿದರು.

“ಬೊಂಬೆ ಅನ್ನೋ ಕಾರಣಕ್ಕೆ ಬಿಜೆಪಿಯವರು ತಿರಸ್ಕಾರ ಮನೋಭಾವದಿಂದ ಮಾತನಾಡುತ್ತಿದ್ದಾರಲ್ಲ, ಅದು ಸರೀನಾ? ಅವತ್ತಿನ ವಾತಾವರಣ ಟೂರಿಂಗ್ ಟಾಕೀಸ್ ರೀತಿಯೇ ಇತ್ತು. ಅದನ್ನ ಬಿಟ್ಟು ದೇವರನ್ನೇ ಟೂರಿಂಗ್ ಟಾಕೀಸ್ ಅಂದಿಲ್ಲ. ಹೊಲದಲ್ಲಿ ಸಗಣಿ ಮೂರ್ತಿ ಮಾಡಿ ಗರಿಕೆ ಹುಲ್ಲು ಇಟ್ಟು ಪೂಜೆ ಮಾಡುತ್ತೇವೆ. ಹೊಲದಲ್ಲಿ ಸಿಕ್ಕ ಬೆಣಚು ಕಲ್ಲಿಗೂ ಪೂಜೆ ಮಾಡುತ್ತಾರೆ. ಅದು ನಮ್ಮ ನಂಬಿಕೆ. ಅದನ್ನು ಗೌರವಿಸುತ್ತೇನೆ” ಎಂದು ತಮ್ಮ ಹೇಳಿಕೆಯ ಬಗ್ಗೆ ಉಂಟಾದದ ವಿವಾದದ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯವರು ನನಗೆ ರಾವಣ ಎಂದಿದ್ದಾರೆ. ನನಗೆ ಬೇಜಾರಿಲ್ಲ, ರಾವಣ ಎಂದು ಅನಿಸಿಕೊಳ್ಳಲು ನಾನು ಸಿದ್ಧನಿದ್ದೇನೆ. ರಾವಣನಂತ ದೈವ ಭಕ್ತ ಯಾರೂ ಇರಲಿಲ್ಲ. ಇವರೆಲ್ಲ ಡೋಂಗಿ ದೈವ ಭಕ್ತರು. ಹಿಂದೆ ತಮಿಳುನಾಡಿನ ಅಣ್ಣಾದೊರೈ ರಾಮಾಯಣಕ್ಕೆ ಬದಲಾಗಿ ರಾವಣಾಯಣ ನಾಟಕ ಆಡಿದ್ದರು. ಈ ನಾಟಕದಲ್ಲಿ ರಾವಣ ಸೀತೆ ಮೇಲೆ ಬಲಾತ್ಕಾರ ಮಾಡೋದಿಲ್ಲ. ಆತನ ತಂಗಿಯನ್ನು ಕಳುಹಿಸಿ, ಮನವೊಲಿಸಲು ಯತ್ನಿಸಿದ್ದ. ಇದು ರಾವಣನ ದೊಡ್ಡ ಗುಣ. ಆತ ಶಿವನ ಭಕ್ತನಾಗಿದ್ದ” ಎಂದರು.

ಇದನ್ನು ಓದಿದ್ದೀರಾ? ಒಳ ಮೀಸಲಾತಿ | ಹೊಣೆ ಕೇಂದ್ರದ ಹೆಗಲಿಗೆ ಹಾಕಿ ರಾಜ್ಯ ಸರ್ಕಾರದಿಂದ ರಾಜಕೀಯ: ದೇವೇಗೌಡ ಆರೋಪ

“ನಾನು ರಾಮ ಮತ್ತು ರಾವಣ ಇಬ್ಬರ ಪರನೂ ಇದ್ದೇನೆ. ನನ್ನ ಹೇಳಿಕೆಯನ್ನ ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ. ನನ್ನ ಹೇಳಿಕೆಯಿಂದ ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ. ನಾನು ಏನೆಲ್ಲ ಹೇಳಿಕೆ ಕೊಟ್ಟಿದ್ದೇನೋ ಅದರಿಂದ ಹಿಂದೆ ಸರಿಯುವ ಮಾತೇ ಇಲ್ಲ” ಎಂದು ಮತ್ತೊಮ್ಮೆ ಸಚಿವ ಕೆ ಎನ್ ರಾಜಣ್ಣ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...