ನಾನು ರಾಜೀನಾಮೆ ಕೊಡಲು ಸಿದ್ಧ, ಅಮಿತ್‌ ಶಾ ಕೊಡುತ್ತಾರಾ: ಸಿದ್ದರಾಮಯ್ಯ ಸವಾಲು

Date:

“ದೇಶದ ಗೃಹ ಸಚಿವ ಅಮಿತ್‌ ಶಾ ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡವೇ? ಸತ್ಯದ ತಲೆ ಮೇಲೆ ಒಡೆದಂತೆ ಸುಳ್ಳು ಹೇಳುತ್ತಾರೆ. ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದು ಸುಳ್ಳಾದರೆ ನಾನು ರಾಜೀನಾಮೆ ಕೊಡಲು‌ ಸಿದ್ಧ, ಅದು ಸತ್ಯವಿದ್ದರೆ ಅಮಿತ್ ಶಾ ರಾಜೀನಾಮೆ ಕೊಡುತ್ತಾರಾ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಮೈಸೂರಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅಲ್ಲಿಂದ ತಂಡವೂ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿದೆ” ಎಂದರು.

“ಅಕ್ಟೋಬರ್‌ನಲ್ಲೇ ಮೂರು ಮನವಿ ಸಲ್ಲಿಸಿದ್ದೇವೆ. ಇದಾದ ಮೇಲೆ ಕೇಂದ್ರದ ಅಧಿಕಾರಿಗಳ ತಂಡ ಬಂದು,  ಪರಿಶೀಲನೆ ನಡೆಸಿ ವರದಿ ಕೊಟ್ಟಿದೆ. ನಾನು ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಕೊಟ್ಟಿದ್ದೆ. ಅಮಿತ್ ಶಾ ಅವರನ್ನೂ ಭೇಟಿಯಾಗಿದ್ದೆ. ಇದಾಗಿ ನಾಲ್ಕು ತಿಂಗಳಾದರೂ ಪರಿಹಾರ ಬಂದಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವ್ಯಾಕೆ ಸುಳ್ಳು ಹೇಳೋಣ? ನಾವು ಕೇಂದ್ರಕ್ಕೆ ಮನವಿ ಕೊಟ್ಟಿದ್ದು, ಭೇಟಿ ಆಗಿದ್ದೆಲ್ಲವೂ ಸತ್ಯವಲ್ಲವೇ? ಡಿಸೆಂಬರ್ 23ಕ್ಕೆ ಸಭೆ ಕರೆದಿದ್ದೇನೆ, ಅಂದು ತೀರ್ಮಾನ ಮಾಡುತ್ತೇನೆ ಎಂದಿದ್ರಲ್ಲಾ ಅಮಿತ್‌ ಶಾ ಅವರು ಮಾಡಿದ್ರಾ? ಅನುದಾನ ಕೊಟ್ಟಿದ್ದೀರಾ? ಅದನ್ನೆಲ್ಲ ಸಾಬೀತುಪಡಿಸಲು ಸಿದ್ಧವಿದ್ದೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರಗಾಲಕ್ಕೆ ಬರಲಿಲ್ಲ, ಪರಿಹಾರ ಕೊಡಲಿಲ್ಲ, ಓಡೋಡಿ ಬರುತ್ತಿದ್ದಾರೆ ಓಟಿಗಾಗಿ!

“ಈಗಾಗಲೇ ಎಲ್ಲ ದಾಖಲೆಗಳನ್ನು ಸುಪ್ರೀಂ ಕೋರ್ಟ್‌ಗೇ ಕೊಟ್ಟಿದ್ದೇವೆ. ದಾಖಲೆಗಳು ಇಲ್ಲದಿದ್ದರೆ ಕೋರ್ಟ್‌ಗೆ ಹೋಗಲು ಆಗುತ್ತಾ? ಎನ್.ಡಿ.ಆರ್.ಎಫ್. ಅಡಿ ಬರ ಪರಿಹಾರ ಹಣ ಕೊಡಲೇಬೇಕು. ಇದು ಕೇಂದ್ರ ಸರ್ಕಾರದ ಹಣ ಅಲ್ಲ; ನಮ್ಮ ರಾಜ್ಯದ್ದು. ಆ ಹಣವನ್ನು ಈವರೆಗೂ ಕೊಡದ ಬಿಜೆಪಿಯವರಿಗೆ ಮತದಾರರು ಮತ ಹಾಕಬಾರದು” ಎಂದು ಕರೆ ನೀಡಿದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌‌.ಲಕ್ಷ್ಮಣ, ಪಕ್ಷದ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...