‘ನಾನು ಕ್ಷಮೆ ಕೇಳುತ್ತೇನೆ’: ಒತ್ತೆಯಾಳುಗಳ ಸಾವಿಗೆ ಇಸ್ರೇಲ್ ಪ್ರಧಾನಿ ಪ್ರತಿಕ್ರಿಯೆ

Date:

ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯ ಸುರಂಗದಲ್ಲಿ ಆರು ಇಸ್ರೇಲಿ ಒತ್ತೆಯಾಳುಗಳ ಶವಗಳು ಪತ್ತೆಯಾಗಿದ್ದು, ಅವರ ಜೀವ ಉಳಿಸಲು ಸಾಧ್ಯವಾಗದ ಕಾರಣಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಪ್ರಜೆಗಳಲ್ಲಿ ಕ್ಷಮೆ ಕೋರಿದ್ದಾರೆ.

ದಕ್ಷಿಣ ಗಾಜಾದ ರಾಫಾ ಪ್ರದೇಶದಲ್ಲಿರುವ ಭೂಗತ ಸುರಂಗದಲ್ಲಿ ಆರು ಒತ್ತೆಯಾಳುಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಶನಿವಾರ ಹೇಳಿದೆ.

ಮೃತದೇಹಗಳು ಗಾಜಾ ಗಡಿಯ ಸಮೀಪದಲ್ಲಿರುವ ಕಿಬ್ಬುಟ್ಜ್ ಪ್ರದೇಶದ ನಿವಾಸಿಗಳದ್ದು ಎಂದು ಗುರುತಿಸಲಾಗಿದೆ. ಅವರನ್ನು ಸಂಗೀತ ಉತ್ಸವ ಕಾರ್ಯಕ್ರಮದ ವೇಳೆ ಅಪಹರಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತದೇಹಗಳು ಪತ್ತೆಯಾದ ಬಗ್ಗೆ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿರುವ ಪ್ರಧಾನಿ ನೆತನ್ಯಾಹು, “ಅವರನ್ನು ಜೀವಂತವಾಗಿ ಮರಳಿ ತರದಿದ್ದಕ್ಕಾಗಿ ನಾನು ನಿಮ್ಮ ಕ್ಷಮೆಯನ್ನು ಕೇಳುತ್ತೇನೆ” ಎಂದು ಇಸ್ರೇಲಿ ಜನರಿಗೆ ತಿಳಿಸಿದ್ದಾರೆ. “ನಾವು ಅವರನ್ನು ರಕ್ಷಿಸಲು ಹತ್ತಿರದಲ್ಲಿದ್ದೆವು. ಆದರೆ, ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಲು ಸಾಧ್ಯವಾಗಲಿಲ್ಲ. ಅವರ ಸಾವಿಗೆ ಹಮಾಸ್ ಭಾರೀ ಬೆಲೆ ತೆರಬೇಕಾಗುತ್ತದೆ” ಎಂದು ನೆತನ್ಯಾಹು ಹೇಳಿದ್ದಾರೆ.

ಇಸ್ರೇಲ್‌ ಸೇನಾ ವಕ್ತಾರ ಡೇನಿಯಲ್ ಹಗರಿ, “ಎಲ್ಲ ಆರು ಮಂದಿಯನ್ನು ಅಕ್ಟೋಬರ್ 7ರ ಬೆಳಿಗ್ಗೆ ಜೀವಂತವಾಗಿ ಅಪಹರಿಸಲಾಗಿತ್ತು. ನಾವು ಅವರಿದ್ದ ಸ್ಥಳವನ್ನು ತಲುಪುವ ಸ್ವಲ್ಪ ಸಮಯದ ಮೊದಲು ಅವರನ್ನು ಹಮಾಸ್ ಬರ್ಬರವಾಗಿ ಹತ್ಯೆಗೈದಿದೆ” ಎಂದು ಹೇಳಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ರಾಜಕೀಯ ಲಾಭಕ್ಕಾಗಿ ಯುದ್ಧವನ್ನು ವಿಸ್ತರಿಸುತ್ತಿದ್ದಾರೆ ಎಂದು ಇಸ್ರೇಲ್‌ನ ವಿಮರ್ಶಕರು ಆರೋಪಿಸಿದ್ದಾರೆ. ಯುದ್ಧವನ್ನು ಅಂತ್ಯಗೊಳಿಸುವಂತೆ ಸಾವಿರಾರು ಇಸ್ರೇಲಿಗರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡ ‘ಇದು ಯುದ್ಧ ಕೊನೆಗೊಳ್ಳುವ ಸಮಯ’ ಎಂದು ಹೇಳಿದ್ದಾರೆ. ಪ್ಯಾಲೆಸ್ತೀನ್ ಮತ್ತು ಇಸ್ರೇಲ್‌ ನಡುವೆ ಕದನ ವಿರಾಮ ಘೋಷಿಸಲು ಮಧ್ಯಸ್ಥಿಕೆ ವಹಿಸಲು ಅಮೆರಿಕಾ ಪ್ರಯತ್ನಿಸುತ್ತಿದೆ.

ಕಳೆದ 11 ತಿಂಗಳಿನಿಂದ ಪ್ಯಾಲೆಸ್ತೀನ್ ಮತ್ತು ಇಸ್ರೇಲ್‌ ನಡುವೆ ಯುದ್ಧ ನಡೆಯುತ್ತಿದ್ದು, 40,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಕೊಂದಿದೆ ಎಂದು ವರದಿಯಾಗಿದೆ. ಮಾತ್ರವಲ್ಲದೆ, ಗಾಜಾ ಪಟ್ಟಿಯ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ಲಕ್ಷಾಂತರ ಪ್ಯಾಲೆಸ್ತೀನಿಯರು ನಿರಾಶ್ರಿತರಾಗಿದ್ದಾರೆ. ತಮ್ಮ ಬದುಕು ಮತ್ತು ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...