ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ನಾನು ಒತ್ತಾಯ ಮಾಡಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

ಸಿಎಂ ವಿರುದ್ಧದ ಹೈಕೋರ್ಟ್‌ ತೀರ್ಪಿನ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ, ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡುತ್ತಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ, ಅದೆಲ್ಲಾ ಮುಗಿದ ಮೇಲೆ ಮಾತಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ನಾಗಮಂಗಲದ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿ, “ಮೈಸೂರು ಪಾದಯಾತ್ರೆಗೆ ನಾನೂ ಹೋಗಿದ್ದೆ, ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ. ಬಿಜೆಪಿ ನಾಯಕರ ಜತೆ ಹೆಜ್ಜೆ ಹಾಕಿದ್ದೇನೆ” ಎಂದರು.

ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಿಲ್ಲ, ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ದೇಶದ ಕಾನೂನನಲ್ಲಿ ರಕ್ಷಣೆ ಕೊಡಲು ಸಂವಿಧಾನದಲ್ಲಿ ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ಏನು ತೀರ್ಪು ಬೇಕು ಅದು ನ್ಯಾಯಾಲಯ ಕೊಡುತ್ತದೆ. ಕಾನೂನಿನ ಒಳಗೆ ಇದ್ದರೆ ಏನು ಬೇಕಾದರೂ ಆಗಬಹುದು” ಎಂದು ಹೇಳಿದರು.

“ನಾನು ಸಿದ್ದರಾಮಯ್ಯ ಅವರಿಗೆ ಏನೂ ಹೇಳಲ್ಲ. ನನ್ನ ಅಭಿಪ್ರಾಯ ನಾನು ಹೇಳಲ್ಲ. ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು. ಗ್ರೇಟ್ ಪಾಲಿಟಿಷಿಯನ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ, ಮಾಡಲಿ, ಉತ್ತರ ಕೊಡುತ್ತೇನೆ. ಪ್ರಾಸಿಕ್ಯೂಷನ್ ಪ್ರಕರಣ ಕ್ಲಿಯರ್ ಆದ ಬಳಿಕ ಮಾತನಾಡುತ್ತೇನೆ” ಎಂದು ತಿಳಿಸಿದರು.

ಕೇಂದ್ರ ಸಚಿವನಾಗಿರುವುದನ್ನು ಸಹಿಸುತ್ತಿಲ್ಲ

“ಸಿಎಂ ನೈತಿಕ ಹೊಣೆ ಹೊರಲಿಲ್ಲ ಅಂದರೆ, ಹೊತ್ತುಕೊಳ್ಳಿ ಎಂದು ನಾನು‌ ಹೇಳಲು ಆಗುತ್ತಾ? ನನ್ನನ್ನು ಇಕ್ಕಟ್ಟಿಗೆ ಸಿಕ್ಕಿಸಲು ಹೋಗಿದ್ದಾರೆ. ನಾನು ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇನೆ. ನಾಲ್ಕೈದು ಮಂದಿ ಬಿಡಾಡಿ ಮಂತ್ರಿಗಳು ನನ್ನ ಮೇಲೆ ಆರೋಪ ಮಾಡಿದ್ದಾರೆ, ಅವರಿಗೆ ನಾನು ಉತ್ತರ ಕೊಡುವ ಅಗತ್ಯ ಇಲ್ಲ” ಎಂದರು.

“ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ಇನ್ನೂ ಅನುಮಾನ ಇದೆ. ನಾನು ಇದನ್ನು ಷಡ್ಯಂತ್ರ ಅನ್ನವುದಿಲ್ಲ, ಕುಮಾರಸ್ವಾಮಿ ಕೇಂದ್ರ ಸಚಿವನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ಜನರ ನಡುವೆ ಕಂದಕ ಸೃಷ್ಟಿ ಮಾಡಲು ಹೀಗೆ ಮಾಡುತ್ತಿದ್ದಾರೆ. ನನ್ನ ವಿರುದ್ಧ ಯಾವ ಬಿಡಾಡಿಗಳು ಏನೂ ಮಾಡಲು ಆಗಲ್ಲ. ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತಿದೇನೆ” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...