ಸುದೀಪ್‌ ಹಾಗೂ ನನ್ನದು ರಾಜಕೀಯ ಮೀರಿದ ಸಂಬಂಧ; ನನ್ನ ಪರ ಪ್ರಚಾರ ಮಾಡುತ್ತಾರೆ : ಸಿಎಂ

Date:

  • ಸುದೀಪ್ ಹಾಗೂ ನನ್ನದು ರಾಜಕೀಯ-ಪಕ್ಷ ಮೀರಿದ ಗೆಳೆತನ
  • ಬೊಮ್ಮಾಯಿ ಮಾಮ ಹಾಗೂ ನನ್ನ ಕೆಲ ಸ್ನೇಹಿತರ ಪರ ಪ್ರಚಾರ

ನಟ ಸುದೀಪ್‌ ಹಾಗೂ ನನ್ನದು ರಾಜಕೀಯವನ್ನೂ ಮೀರಿದ ಸಂಬಂಧ. ಆ ಹಿನ್ನೆಲೆಯಲ್ಲಿ ಅವರು ನನ್ನ ಪರ ಈ ಬಾರಿ ಚುನಾವಣೆಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಮೀರಿದ ಗೆಳೆತನ ಸಂಬಂಧವೂ ಇರುತ್ತದೆ. ಇಂತಹದ್ದೇ ಬಾಂಧವ್ಯ ಕಿಚ್ಚ ಸುದೀಪ್‌ ಹಾಗೂ ನನ್ನ ನಡುವೆ ಇದೆ ಎಂದರು.

ನಾನು ಯಾರ ಪರ ಪ್ರಚಾರ ಮಾಡಲು ಹೇಳುತ್ತೇನೆಯೋ ಅವರ ಪರ ಪ್ರಚಾರ ಮಾಡುತ್ತಾರೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಪೂರ್ಣ ಗೆಳೆತನದ ವಿಚಾರ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಟ ಸುದೀಪ್‌ ನಮ್ಮ ಪರ ಪ್ರಚಾರಕ್ಕೆ ಬಂದಿರುವುದು ಪಕ್ಷಕ್ಕೆ ಬಲ ತಂದಿದೆ. ಇದು ನಮಗೆ ಹೆಚ್ಚಿನ ಶಕ್ತಿ ನೀಡಿದೆ ಎಂದು ಬೊಮ್ಮಾಯಿ ತಿಳಿಸಿದರು.

ಬಳಿಕ ಮಾತನಾಡಿದ ನಟ ಸುದೀಪ್‌ ನಾನು ಬಿಜೆಪಿ ಸೇರುವುದಿಲ್ಲ, ಆದರೆ ಪಕ್ಷದಲ್ಲಿ ಗೆಳೆಯರಾಗಿರುವ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವೆ ಎಂದರು.

ನಾನು ಚಿತ್ರರಂಗಕ್ಕೆ ಅಡಿ ಇಡುವ ವೇಳೆ ಹಲವರ ಸಹಕಾರ ಪಡೆದಿರುವೆ. ಅವರೆಲ್ಲರ ಋಣ ತೀರಿಸುವ ಕಾರ್ಯ ಮಾಡುವೆ. ಅದಕ್ಕಾಗಿ ಈ ಬಾರಿ ಚುನಾವಣೆಯಲ್ಲಿ ನಾನು ನನ್ನ ಆತ್ಮೀಯರ ಪರ ಮತಯಾಚನೆ ಮಾಡುವೆ ಎಂದು ನಟ ಸುದೀಪ್ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನ್ನ ಮಾರ್ಗದರ್ಶಕರು. ಹೀಗಾಗಿ ನಾನು ನನ್ನ ಬೊಮ್ಮಾಯಿ ಮಾಮನನ್ನೂ ಒಳಗೊಂಡಂತೆ ಕೆಲ ಸ್ನೇಹಿತರ ಪರ ನಾನು ಪ್ರಚಾರ ಕೈಗೊಳ್ಳುವೆ ಎಂದು ಕಿಚ್ಚ ಸುದೀಪ್ ಹೇಳಿದರು.

ಸುದೀಪ್

ಈ ಸುದ್ದಿ ಓದಿದ್ದೀರಾ? : ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ: ಪ್ರಕಾಶ್‌ ರಾಜ್‌

ಬಳಿಕ ಮಾತನಾಡಿದ ಸಚಿವ ಸುಧಾಕರ್, ಸುದೀಪ್‌ ನಮ್ಮ ಗೆಳೆಯರು, ಅವರದ್ದೇ ವಿಚಾರ ಧಾರೆ ಮೇಲೆ ನಮ್ಮ ಪರ ಪ್ರಚಾರ ಮಾಡಲು ಬರುತ್ತಿದ್ದಾರೆ. ನಮಗದು ಖುಷಿಯ ವಿಚಾರ ಎಂದರು.

ನಟ ಸುದೀಪ್ ಜೊತೆಗೆ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಬೊಮ್ಮಾಯಿ, ಸಚಿವ ಆರ್ ಅಶೋಕ್, ಡಾ.ಸುಧಾಕರ್ ಉಪಸ್ಥಿತರಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...