ನನ್ನನ್ನ ಅಸಿಂಧುಗೊಳಿಸಲಾಗಿದೆಯೇ ಹೊರತು, ಅನರ್ಹಗೊಳಿಸಿಲ್ಲ: ಶಾಸಕ ಗೌರಿಶಂಕರ್ ಸ್ಪಷ್ಟನೆ

Date:

  • ನ್ಯಾಯಾಲಯವು 6 ವರ್ಷ ಚುನಾವಣೆಗೆ ನಿಲ್ಲಬಾರದು ಅಂತ ಹೇಳಿಲ್ಲ
  • ಅಸಿಂಧು ಆದೇಶ ಬಂದ ನಂತರ, ಮೊದಲ ಬಾರಿಗೆ ಕಾಣಿಸಿಕೊಂಡ ಶಾಸಕ

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಅವರನ್ನು ಕರ್ನಾಟಕ ಹೈಕೋರ್ಟ್ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದ ನಂತರ, ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡು, “ನ್ಯಾಯಾಲಯವು ನನ್ನನ್ನ ಅಸಿಂಧುಗೊಳಿಸಲಾಗಿದೆಯೇ ಹೊರತು, ಅನರ್ಹಗೊಳಿಸಿಲ್ಲ” ಎಂದು ಸ್ಪಷ್ಟನೆ ನೀಡಿದರು.

ತುಮಕೂರಿನ ಬಳಗೆರೆ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಗೌರಿಶಂಕರ್, “ನಿನ್ನೆ ಮೊನ್ನೆಯಿಂದ ಕೋರ್ಟ್ ಆದೇಶವನ್ನು ಇಟ್ಟುಕೊಂಡು ನನ್ನ ಮೇಲೆ ಇಲ್ಲಸಲ್ಲದ ಊಹಾಪೋಹಗಳನ್ನು ಹರಡಿಸಲಾಗುತ್ತಿದೆ. ಕೋರ್ಟ್ ಆದೇಶದಲ್ಲಿ ಸತ್ಯಾಂಶ ಏನಿದೆ ಎನ್ನುವುದನ್ನು ತಿಳಿಸಲು ಬಂದಿದ್ದೇನೆ” ಎಂದು ಹೇಳಿದರು.

“ಕೆಲವರು ನನ್ನನ್ನು ಶಾಸಕ ಸ್ಥಾನದಿಂದ ಅನೂರ್ಜಿತಗೊಳಿಸಬೇಕು ಎಂದು ದೂರು ದಾಖಲಿಸಿದ್ದರು. ಆದರೆ, ನ್ಯಾಯಾಲಯವು ನನ್ನ ಆಯ್ಕೆಯನ್ನು ಅಸಿಂಧುಗೊಳಿಸಿದೆಯೇ ಹೊರತು, ‌ಅನರ್ಹಗೊಳಿಸಿಲ್ಲ. ಕೆಲವರು ಸುಖಾ ಸುಮ್ಮನೆ ತೇಜೋವಧೆ ಮಾಡ್ತಿದ್ದಾರೆ” ಎಂದು ಕಿಡಿ ಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ; ವಿಚಾರಣೆ ಮುಂದೂಡಿಕೆ

“ನನ್ನ ಮೇಲೆ ಬಂದಿರುವ ತೀರ್ಪಿನಲ್ಲಿ ಮಂಜುನಾಥ್ ಎಂಬುವವರ ಹೆಸರು ಉಲ್ಲೇಖಿಸಲಾಗಿದೆ. ಆದರೆ, ಆ ವ್ಯಕ್ತಿ ಯಾರೆಂಬುದೇ ನನಗೆ ಗೊತ್ತಿಲ್ಲ, ನನಗೆ ಪರಿಚಯವೇ ಇಲ್ಲದ ವ್ಯಕ್ತಿ ನನ್ನ ಬಗ್ಗೆ ಹೇಗೆ ಪ್ರಚಾರ ಮಾಡುತ್ತಾರೆ, ಬಾಂಡ್ ಹೇಗೆ ಹಂಚುತ್ತಾರೆ” ಎಂದು ಪ್ರಶ್ನಿಸಿದರು.

“ನ್ಯಾಯಾಲಯವು ನಾನು 6 ವರ್ಷ ಚುನಾವಣೆಗೆ ನಿಲ್ಲಬಾರದು ಅಂತ ಎಲ್ಲಿಯೂ ಹೇಳಿಲ್ಲ. ಚುನಾವಣೆಗೆ ನಿಲ್ಲಲ್ಲು ಯಾವುದೇ ತೊಂದರೆ ಇಲ್ಲ, ನಮ್ಮ ಕಾರ್ಯಕರ್ತರು ಆತಂಕಪಡಬೇಕಿಲ್ಲ. ಮಾಧ್ಯಮದವರು 6 ವರ್ಷ ನಿಲ್ಲುವಂತಿಲ್ಲ ಅನ್ನೋದನ್ನು ಪ್ರಸಾರ ಮಾಡಬೇಡಿ” ಎಂದು ಮನವಿ ಮಾಡಿಕೊಂಡರು.

a1b8f011336c8b30aec8eb65b1fdef709a9ae9be2d3f6e92a0d93ac3d2ff3a42?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...