ಯಾವುದೇ ಷರತ್ತಿಲ್ಲದೆ ರಾಜಕೀಯ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ: ಸಿ ಪಿ ಯೋಗೇಶ್ವರ್

Date:

“ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ” ಎಂದು ಚನ್ನಪಟ್ಟಣ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯ ಬಳಿಕ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡ ಬಳಿಕ ಡಿಕೆಶಿ ಅವರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ, ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಯೋಗೇಶ್ವರ್, “ನನ್ನ ರಾಜಕೀಯ ಜೀವನವನ್ನು ಡಿ.ಕೆ. ಶಿವಕುಮಾ‌ರ್ ನೇತೃತ್ವದಲ್ಲಿ ಆರಂಭಿಸಿದ್ದೆ. ಹಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದ್ದೇನೆ. ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಜೆಡಿಎಸ್ ಜೊತೆ ಮೈತ್ರಿಯಾದ ಬಳಿಕ ನನ್ನ ರಾಜಕೀಯ ಬೆಳವಣಿಗೆಗೆ ಪೂರಕ ವಾತಾವರಣವಿಲ್ಲ ಅಂದುಕೊಂಡೆ. ಜೆಡಿಎಸ್ ಜೊತೆಗೆ ಮೈತ್ರಿಯಿಂದ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಹಾಗಾಗಿ, ಯಾವುದೇ ಷರತ್ತು ಇಲ್ಲದೇ ಮತ್ತೆ ಕಾಂಗ್ರೆಸ್ ಸೇರಿದ್ದೇನೆ” ಎಂದು ಪಕ್ಷ ಬದಲಾಯಿಸಿದ್ದಕ್ಕೆ ಸಮರ್ಥನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿ.ಕೆ. ಶಿವಕುಮಾ‌ರ್ ಅವರನ್ನು ಮಂಗಳವಾರ ರಾತ್ರಿ ಭೇಟಿಯಾಗಿ ಚರ್ಚಿಸಿದೆ ಎಂಬುದೆಲ್ಲಾ ಕೆಲವೊಂದು ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ್ದೇನೆ. ಅದೆಲ್ಲವೂ ಸುಳ್ಳು. ಇಂದು ಬೆಳಗ್ಗೆ ನೇರವಾಗಿ ಶಿವಕುಮಾರ್ ನಿವಾಸಕ್ಕೆ ತೆರಳಿದೆ. ನಂತರ ಮುಖ್ಯಮಂತ್ರಿ ನಿವಾಸಕ್ಕೂ ಹೋಗಿದ್ದೆ. ಆ ಮೂಲಕ, ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಬಂದಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ನಮ್ಮ ರಾಮನಗರ ಜಿಲ್ಲೆ ಹಾಗೂ ಚನ್ನಪಟ್ಟಣವನ್ನು ಮತ್ತಷ್ಟು ಅಭಿವೃದ್ಧಿ ಮಾಡುವುದೇ ಉದ್ದೇಶ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ಗೆ ಯೋಗೇಶ್ವರ್ ಸೇರ್ಪಡೆ; ಕೆಪಿಸಿಸಿ ಕಚೇರಿಯಲ್ಲಿ ಗರಿಗೆದರಿದ ಚಟುವಟಿಕೆಗಳು

“ಡಿ.ಕೆ ಶಿವಕುಮಾ‌ರ್, ರಾಮಲಿಂಗಾ ರೆಡ್ಡಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿಯಲ್ಲಿ ಪಾಲುದಾರನಾಗಬೇಕೆಂದು ಈ ನಿರ್ಧಾರ ಮಾಡಿದೆ. ಆನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಡಿ ಕೆ ಸುರೇಶ್ ಅವರು ಪ್ರಮುಖ ಕಾರಣರು” ಎಂದು ಯೋಗೇಶ್ವರ್ ತಿಳಿಸಿದರು.

ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಮಾತನಾಡಿ, “ಸಿ ಪಿ ಯೋಗೇಶ್ವರ್ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ಪಕ್ಷಕ್ಕೆ ಬಲ ಬಂದಿದೆ. ಜನರಲ್ಲಿ ಯೋಗೇಶ್ವರ್ ಬಗ್ಗೆ ಉತ್ತಮ ಅಭಿಪ್ರಾಯ ಇದೆ” ಎಂದರು.

ಸಚಿವರಾದ ಜಮೀರ್ ಅಹ್ಮದ್ ಖಾನ್ ಮಾತನಾಡಿ, “ಸಿ ಪಿ ವೈ ಪಕ್ಷ ಸೇರ್ಪಡೆಯಿಂದ ನಮಗೆ ಹಳೆ ಮೈಸೂರು ಭಾಗದಲ್ಲಿ ಆನೆ ಬಲ ಬಂದಂತಾಗಿದೆ. ಕಾರ್ಯಕರ್ತರು ಇದನ್ನು ಬಯಸುತ್ತಿದ್ದರು. ಇದು ಘರ್ ವಾಪ್ಸಿಯಾಗಿದೆ. ಹಳೆ ಮೈಸೂರು ಭಾಗದಲ್ಲಿ ಆನೆ ಬಲ ಬಂದಿದೆ” ಎಂದು ಖುಷಿ ವ್ಯಕ್ತಪಡಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...