ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ: ಎಚ್‌ ಡಿ ಕುಮಾರಸ್ವಾಮಿ

Date:

  • ಹಾಸನದಲ್ಲಿ ಗೊಂದಲಗಳಿಲ್ಲ ಎಂದ ಕುಮಾರಸ್ವಾಮಿ
  • ಮಂಡ್ಯದಲ್ಲಿ ಜೆಡಿಎಸ್‌ ಸೋಲಿಗೆ ಷಡ್ಯಂತ್ರ ನಡೆಯುತ್ತಿದೆ

ಬಹಳ ಮಂದಿ ನಾನು ಮುಖ್ಯಮಂತ್ರಿಯಾಗಲು ಕಷ್ಟಪಡುತ್ತಿದ್ದೇನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗುವ ಯಾವ ಉದ್ದೇಶವೂ ಇಲ್ಲ ಎಂದು ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದ ಕೆ ಆರ್‌ ಪೇಟೆಯಲ್ಲಿ ಮಾತನಾಡಿರುವ ಎಚ್‌ ಡಿ ಕುಮಾರಸ್ವಾಮಿ, “ಈಗಾಗಲೇ ನನಗೆ 2 ಬಾರಿ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. 3ನೇ ಬಾರಿಗೆ ಮುಖ್ಯಮಂತ್ರಿ ಆಗುವ ಉದ್ದೇಶ ನನಗಿಲ್ಲ” ಎಂದು ಭಾವನಾತ್ಮಕವಾಗಿ ನುಡಿದಿದ್ದಾರೆ.

“ನಾನು 3ನೇ ಬಾರಿಗೆ ಮುಖ್ಯಮಂತ್ರಿಯಾಗಲು ಕಷ್ಟಪಡುತ್ತಿದ್ದೇನೆ ಎಂದು ಬಹಳಷ್ಟು ಮಂದಿ ಭಾವಿಸಿದ್ದಾರೆ. ಎಷ್ಟು ಬಾರಿ ಮುಖ್ಯಮಂತ್ರಿಯಾದರೂ ಮಣ್ಣಿಗೆ ಹೋಗುವಾಗ ನಾನು ಮಾಜಿ ಮುಖ್ಯಮಂತ್ರಿಯೇ. ನನ್ನ ಹೋರಾಟ ಮುಖ್ಯಮಂತ್ರಿ ಹುದ್ದೆಗಾಗಿ ಅಲ್ಲ. ನನ್ನ ಹೋರಾಟ ಬಡವರ ಪರ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಗೆ ಜಾತಿ ವ್ಯಾಮೋಹ ಇಲ್ಲ ಎಂದಿರುವ ಕುಮಾರಸ್ವಾಮಿ, ಸಿಕ್ಕ ಅವಕಾಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದಿದ್ದಾರೆ.

ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಕುರಿತು ಮಂಗಳವಾರ ಮಾತನಾಡಿರುವ ಅವರು, “ನೆನ್ನೆ ಕೆ ಆರ್‌ ಪೇಟೆಯಲ್ಲಿ ಕಾರ್ಯಕ್ರಮ ಇದ್ದ ಕಾರಣ ಎರಡನೇ ಪಟ್ಟಿ ಬಿಡುಗಡೆಯಾಗಿಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ” ಎಂದಿದ್ದಾರೆ.

ಹಾಸನ ಟಿಕೆಟ್‌ ಗೊಂದಲದ ಬಗ್ಗೆ ಮಾತನಾಡಿ, “ಹಾಸನ ವಿಷಯದಲ್ಲಿ ಯಾವುದೇ ಸಮಸ್ಯೆಯಿಲ್ಲ” ಎಂದು ಹೇಳಿದ್ದಾರೆ.

ಭವಾನಿ ರೇವಣ್ಣ ಅವರ ಜಟಾಪಟಿ ವಿಚಾರದಲ್ಲಿ ಅನಿತಾ ಕುಮಾರಸ್ವಾಮಿ ಅವರ ಹೆಸರು ಕೇಳಿಬಂದಿದೆ. ‘ಸೊಸೆಯಂದಿರ ಜಗಳ’ ಎನ್ನುವ ಮಟ್ಟಿಗೂ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿವೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಟಿಕೆಟ್‌ ಆಕಾಂಕ್ಷಿಗಳ ತಲೆ ಬಿಸಿ; ಅಭ್ಯರ್ಥಿಗಳ ಪಟ್ಟಿ ಶಿಫಾರಸಿಗೆ ಇನ್ನಿಲ್ಲದ ಕಸರತ್ತು

ಈ ಕುರಿತು ಮಾತನಾಡಿದ ಕುಮಾರಸ್ವಾಮಿ, “ದೇವೇಗೌಡರ ಸೊಸೆಯಂದಿರ ನಡುವೆ ಹೊಡೆದಾಟ ಇಲ್ಲ. ಹಾಸನ ಜಿಲ್ಲಾ ರಾಜಕಾರಣವೇ ಬೇರೆ ನನ್ನ ಹೆಂಡತಿಯ ರಾಜಕಾರಣವೇ ಬೇರೆ. ಪಕ್ಷ ಉಳಿಸುವ ಉದ್ದೇಶದಿಂದ ಅನಿತಾ ಅವರನ್ನು ರಾಜಕೀಯಕ್ಕೆ ಕರೆತಂದೆವು. ಈ ಎರಡಕ್ಕೂ ತಾಳೆ ಹಾಕಬೇಕಿಲ್ಲ” ಎಂದು ಹೇಳಿದ್ದಾರೆ.

“ಅನಿತಾ ಅವರನ್ನು ಎರಡು ಮೂರು ಬಾರಿ ಪಕ್ಷದ ಅಭ್ಯರ್ಥಿ ಇಲ್ಲದೇ ಇದ್ದಾಗ ನಿಲ್ಲಿಸಲಾಗಿತ್ತಷ್ಟೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಕಾರ್ಯಕರ್ತರು ಮತ್ತು ದೇವೇಗೌಡರ ಸೂಚನೆ ಒತ್ತಡ ಮೇರೆಗೆ ಅನಿತಾ ಚುನಾವಣೆಗೆ ನಿಂತು ಗೆದ್ದರು” ಎಂದಿದ್ದಾರೆ.

“ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಈಗ ತಮ್ಮ ಕ್ಷೇತ್ರವನ್ನು ನಿಖಿಲ್‌ಗೆ ಬಿಟ್ಟುಕೊಟ್ಟು ಅವರು ದೂರ ಉಳಿದಿದ್ದಾರೆ” ಎಂದು ಹೇಳಿದ್ದಾರೆ.

“ಮಂಡ್ಯದಲ್ಲಿ ಜೆಡಿಎಸ್‌ ಸೋಲಿಸಲು ಕಾಂಗ್ರೆಸ್, ರೈತ ಸಂಘಗಳು ಒಟ್ಟಾಗುತ್ತಿವೆ ಇದನ್ನು ನೋಡುತ್ತಿದ್ದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಡಿದ ಷಡ್ಯಂತ್ರ ನೆನಪಾಗುತ್ತದೆ. ಈ ಬಾರಿ ಕೂಡ ಮುಂದುವರಿಸಿದ್ದಾರೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...