ಕಾಂಗ್ರೆಸ್ ಬಡವರಿಗಾಗಿ ಇರುವ ಪಕ್ಷ : ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Date:

ಸದಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಬಿಜೆಪಿಯವರ ಸಾಧನೆ ಏನು ಎಂದು ಹೇಳಲಿ. ಕಾಂಗ್ರೆಸ್ ಈ ದೇಶದಲ್ಲಿ ಏನು ಸಾಧನೆ ಮಾಡಿದೆ ಎಂಬ ಬಗ್ಗೆ ನನ್ನ ಬಳಿ ದಾಖಲೆ ಇದೆ. ಕಾಂಗ್ರೆಸ್ ಬಡವರಿಗಾದರೆ, ಬಿಜೆಪಿ ಶ್ರೀಮಂತರಿಗಾಗಿ ಇರುವ ಪಕ್ಷ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನ ಮಹಾರಾಣಿ ಕಾಲೇಜಿನ ಮೈದಾನದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಎಸ್‌ಸಿ, ಎಸ್‌​ಟಿ​ಗಳ ಶಿಕ್ಷಣ ಕೇವಲ 7% ಇತ್ತು. ನಾವು 60% ಮಾಡಿದ್ದೇವೆ. ಕಾಂಗ್ರೆಸ್ 50 ವರ್ಷದಲ್ಲಿ ಏನೂ ಮಾಡಿಲ್ಲ ಅಂತ ಬೊಬ್ಬೆ ಹೊಡೆಯುತ್ತಲೇ ಇದ್ದಾರೆ. ನಾವು ಮಾಡಿದ್ದು ಬಹಳ ಇದೆ. 1947ರ ಹಿಂದೆ 2 ಲಕ್ಷ ಪ್ರಾಥಮಿಕ ಶಾಲೆಗಳಿದ್ದವು. ಈಗ 8 ಲಕ್ಷ ಇದೆ. ನರೇಗಾ ನಾವು ತಂದಿದ್ದು, ಆಹಾರ ಭದ್ರತಾ ಕಾಯ್ದೆ ತಂದಿದ್ದು, ಅದಕ್ಕೆ ಉಚಿತ ಅನ್ನ ಭಾಗ್ಯವೂ ತಂದದ್ದು ಕಾಂಗ್ರೆಸ್. ಬಡವರಿಗಾಗಿ ನಾವು ಯೋಜನೆಗಳನ್ನು ಮಾಡಿದ್ದೇವೆ. ಆದರೆ ಅವರು ಶ್ರೀಮಂತರಿಗಾಗಿ ಇದ್ದಾರೆ. ಇಲ್ಲಿ ಮೋದಿ ಅಂತ ಹೇಳಿದರೆ ಕೇಸ್ ಹಾಕ್ತಾರೆ. ಮೋದಿ ಎಂದಿದ್ದಕ್ಕೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದರು. ಆದ್ರೆ ರಾಹುಲ್ ಯಾವುದಕ್ಕೂ ಹೆದರಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿ ರಾಹುಲ್ ಗಾಂಧಿ ಜನರ ಮಾತು ಆಲಿಸಿದ್ದಾರೆ. ಕೇಂದ್ರದ ಯಾವ ನಾಯಕ ಈ ರೀತಿ ಮಾಡಿದ್ದಾರೆ. ಕಾಂಗ್ರೆಸ್ ವಾಗ್ದಾನ ಮಾಡಿದ್ದನ್ನು ಪೂರೈಸಿದೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಅದನ್ನೇ ನಾನು ಕೂಡ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಈಗಾಗಲೇ 4 ಗ್ಯಾರಂಟಿ ಅನುಷ್ಠಾನಕ್ಕೆ ಬಂದಿವೆ. ಯುವನಿಧಿ ಯೋಜನೆ ಒಂದು ಮಾತ್ರ ಬಾಕಿ ಇದೆ ಎಂದು ತಿಳಿಸಿದರು.

ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು. ಚುನಾವಣೆ ಮುಂಚೆ ನಾವು ಗ್ಯಾರಂಟಿ ಘೋಷಣೆ ಮಾಡಿದಾಗ, ಕೇಂದ್ರದ ಬಿಜೆಪಿ ನಾಯಕರು ಟೀಕೆ ಮಾಡುತ್ತಲೇ ಇದ್ದರು. ಇದರಿಂದ ಆರ್ಥಿಕತೆ ಕುಸಿಯುತ್ತದೆ. ಬೋಗಸ್ ಎಂದಿದ್ದರು. ಆದರೆ ಈಗ ನಾವು ಇದನ್ನು ಮಾಡಿ ತೋರಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...