ಕ್ಷೇತ್ರಕ್ಕೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋತಿದ್ದೆ: ಸಚಿವ ಎಚ್ ಸಿ ಮಹದೇವಪ್ಪ

Date:

  • ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಹಾಲಿ ಸಚಿವ ಮಹದೇವಪ್ಪ
  • ನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬಹುದು ಎಂದ ಎಚ್‌ಸಿಎಂ

ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ. ಜೊತೆಗೆ ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ನಾನು ಪ್ರಚಾರ ಪಡೆಯದೇ ಇದ್ದದ್ದೂ ನನ್ನ ಸೋಲಿಗೆ ಮತ್ತೊಂದು ಕಾರಣ ಎಂದು ಸಚಿವ ಎಚ್ ಸಿ ಮಹದೇವಪ್ಪ ಹೇಳಿದರು.

ಮೈಸೂರಿನ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಮಹದೇವಪ್ಪ ಇದುವರೆಗೆ ನಾನು 6 ಬಾರಿ ಗೆದ್ದಿದ್ದೇನೆ, ಮೂರು ಬಾರಿ ಸೋತಿದ್ದೇನೆ. ಮೂರು ಬಾರಿಯೂ ನನ್ನಿಂದ ನಾನೇ ಸೋತಿದ್ದೇನೆ ಎಂದರು.

ಗೆದ್ದಾಗ ಮಂತ್ರಿಯಾಗುತ್ತಿದ್ದೆ. ರಾಜ್ಯದ ಜನರಿಗೆ ಸಮಯ ಕೊಡುವ ಭರದಲ್ಲಿ ನನ್ನ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡುತ್ತಿರಲಿಲ್ಲ. ನನ್ನ ಕಾರ್ಯಕರ್ತರಿಂದ ದೂರವಾಗಿದ್ದ ಕಾರಣ ಸೋಲಾಯಿತು ಅಷ್ಟೆ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ ಎಂದವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದ ಮುಂದೆ ನಾನೆಂದೂ ಟಿಕೆಟ್ ಗೆ ಬೇಡಿಕೆ ಇಟ್ಟಿಲ್ಲ. ನನ್ನ ಹೋರಾಟ ನೋಡಿಯೇ ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕದಂತೆ, ಯಾರು ಬೇಕಾದರೂ ನೋಡಬಹುದು ಎಂದರು. ಮುಂದುವರಿದು ಮಾತನಾಡಿದ ಅವರು ನನ್ನ ಅವಧಿಯಲ್ಲಿ ಎಲ್ಲವನ್ನೂ ಕ್ರೋಡೀಕರಿಸಿ ಉತ್ತಮ ದಸರಾ ಮಾಡಿದ್ದೇನೆ. ನಿಜವಾದ ವೈಚಾರಿಕತೆ ಹಾಗೂ ಸಾಂವಿಧಾನಿಕ ದಸರಾ ಆಚರಣೆ ಮಾಡಿದ್ದೇನೆ ಎಂದರು.

ಈ ಸುದ್ದಿ ಓದಿದ್ದೀರಾ?:ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ: ಸಂಸದ ಡಿ ಕೆ ಸುರೇಶ್

ಇನ್ನು ಕೇಂದ್ರ ಸರ್ಕಾರದ ಅಕ್ಕಿ ಪೂರೈಸುವ ವಿಚಾರದಲ್ಲಿನ ತಾರತಮ್ಯದ ಬಗ್ಗೆ ಮಾತನಾಡಿದ ಮಹದೇವಪ್ಪ, ಹೆಚ್ಚುವರಿ ಅಕ್ಕಿ ಕೇಳಿದರೆ ಚುನಾವಣೆಗೂ ಮುನ್ನ ನಮ್ಮನ್ನು ಕೇಳಿದ್ದಿರಾ ಎಂದು ಪ್ರಶ್ನಿಸುತ್ತಾರೆ? ನಮ್ಮ ಪ್ರಣಾಳಿಕೆ ಬಗ್ಗೆ ಇನ್ನೊಂದು ಪಕ್ಷದ ಜೊತೆ ಚರ್ಚಿಸಲು ಆಗುತ್ತಾ..? ಇವರೆಂತಹ ರಾಜಕಾರಣ ಮಾಡುತ್ತಾರೋ ಎಂದು ಮಹದೇವಪ್ಪ ಬಿಜೆಪಿ ವಿರುದ್ಧ ಚಾಟಿ ಬೀಸಿದರು.

ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ

ಇದೇ ವೇಳೆ ಮುಖ್ಯಮಂತ್ರಿ ಅವಧಿ ಹಂಚಿಕೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಹದೇವಪ್ಪ, ‘ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ’ ಎಂದು ಹೇಳುವ ಮೂಲಕ ಸಿದ್ದರಾಮಯ್ಯನವರೇ ಪೂರ್ಣವಧಿ ಸಿಎಂ ಎನ್ನುವುದನ್ನು ಪರೋಕ್ಷವಾಗಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...