ಪಾಕಿಸ್ತಾನವನ್ನು ಶತ್ರುರಾಷ್ಟ್ರ ಎಂದು ಘೋಷಿಸಲಿ: ಬಿಜೆಪಿಗೆ ಬಿ ಕೆ ಹರಿಪ್ರಸಾದ್‌ ಸವಾಲು

Date:

ಬಿಜೆಪಿಗೂ ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ, ಆವೇಷ ಇದ್ದರೆ ‘ಶತ್ರುರಾಷ್ಟ್ರ’ ಎಂದು ಘೋಷಿಸಲಿ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಸವಾಲು ಹಾಕಿದ್ದಾರೆ.

ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಒಕ್ಕೂಟ ಭಾರತವನ್ನು ಇಬ್ಭಾಗ ಮಾಡಿದ ಮೊಹಮ್ಮದ್ ಅಲಿ ಜಿನ್ನಾಗೆ ಜಾತ್ಯತೀತ ನಾಯಕ ಎಂದು ಬಿರುದು ನೀಡಿ, ಸಮಾಧಿ ಎದುರು ಕಣ್ಣೀರು ಸುರಿಸಿದ ಲಾಲ್ ಕೃಷ್ಣ ಅಡ್ವಾನಿ ಯಾವ ಪಕ್ಷದವರು? ಭಯೋತ್ಪಾದನೆಗೆ ತಲೆ ಬಾಗುವುದಿಲ್ಲ ಎಂದು ಚುನಾವಣೆಯ ವೇಳೆ ಭಾಷಣ ಬೀಗಿದ್ದ ನರೇಂದ್ರ ಮೋದಿಯವರು, ಪಾಕಿಸ್ತಾನದ ಪ್ರಧಾನಿಯ ಮೊಮ್ಮಗಳ ಮದುವೆಗೆ ಆಹ್ವಾನವೇ ಇಲ್ಲದೆ, ರಹಸ್ಯವಾಗಿ ಬಿರಿಯಾನಿ ತಿಂದು ಬಂದಿದ್ದು ನೆಂಟಸ್ತನ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ಸಂಸತ್ತಿನಲ್ಲಿ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಮಂಡಿಸಿದ್ದ ಖಾಸಗಿ ಮಸೂದೆಯನ್ನು ವಾಪಸ್ ಪಡೆದಿದ್ದು ಯಾಕೆ? 56 ಇಂಚಿನ ಎದೆಯಲ್ಲಿ ಧೈರ್ಯವೇ ಇರಲಿಲ್ವೇ? ಯಾರ ಒತ್ತಡದಿಂದ ಮಸೂದೆ ವಾಪಸ್ ಪಡೆಯಲಾಯಿತು?” ಎಂದು ಬಿ ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಕಿಸ್ತಾನದಿಂದ ಆಮದು ಮಾಡಿಕೊಳ್ಳುತ್ತಿರುವ ಸಕ್ಕರೆ ಸೇರಿದಂತೆ ಎಲ್ಲ ವ್ಯವಹಾರವನ್ನು ನಿಲ್ಲಿಸಲು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಧೈರ್ಯ ಇದೆಯಾ? ಬೀದಿಯಲ್ಲಿ ನಿಂತು ಬೊಬ್ಬೆ ಹಾಕುತ್ತಿರುವ ಬಿಜೆಪಿ, ಪಾಕಿಸ್ತಾನದ ನಂಟಸ್ತನದಿಂದ ರಾಜಕೀಯ ಬೇಳೆ ಬೆಳೆಸುತ್ತಿರುವುದು ಪುಲ್ವಾಮ ದಾಳಿಯಲ್ಲೇ ಸಾಬೀತಾಗಿದೆ. ರಾಜ್ಯದ ಜನರನ್ನ ಮೂರ್ಖರನ್ನಾಗಿ ಮಾಡಲು ಹೋಗಿ, ಮುಖವಾಡ ಬಯಲಾಗುತ್ತಿರುವುದು ಸ್ಪಷ್ಟವಾಗಿದೆ” ಎಂದು ಕುಟುಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...