ಬಿಜೆಪಿ ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ: ಚಲುವರಾಯಸ್ವಾಮಿ ಲೇವಡಿ

Date:

ಬಿಜೆಪಿ ಹೇಳಿದರೆ ಎಚ್‌ ಡಿ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ, ದತ್ತ ಮಾಲೆ ಸಹ ಹಾಕಿಕೊಳ್ಳುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾತನಾಡಿದ ಅವರು, “ಕುಮಾರಸ್ವಾಮಿಗೆ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ. ಕುಮಾರಸ್ವಾಮಿ ಯಾವತ್ತೂ ಜನರ ಸಮಸ್ಯೆ ಬಗ್ಗೆ ಮಾತನಾಡಿಲ್ಲ. ಎರಡು ಮೂರು ತಿಂಗಳಿನಿಂದ ನಾಲಿಗೆ ಮೇಲೆ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಕುಮಾರಸ್ವಾಮಿ ಮಾತನಾಡುವುದು ಸರಿ ಅಂದರೆ ನಾನು ಅವರಪ್ಪನ ರೀತಿ ಮಾತಾಡುತ್ತೇನೆ. ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಪೆನ್‌ಡ್ರೈವ್ ಬಿಡುಗಡೆ ಮಾಡಿ ಅಂತ ಹೇಳಿದ್ದೆವು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತ ಹೇಳಿದ್ದಾರೆ ಎನ್ನುತ್ತಾರೆ. ಅದ್ಯಾವ ಮಂತ್ರಿ ಅಂತ ಹೇಳಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ನಾವು ಜಾತ್ಯತೀತ ಅಂದರು. ಮುಸ್ಲಿಂ, ದಲಿತ, ಹಿಂದುಳಿದವರ ಪರ ಎಂದು ಜಾತ್ಯತೀತ ಅಂತ ಹೆಸರಿಟ್ಟುಕೊಂಡಿದ್ದರು. ಈಗ ದತ್ತ ಮಾಲೆ ಹಾಕುತ್ತೀನಿ ಎನ್ನುತ್ತಾರೆ. ಯಾವುದನ್ನು ಹಾಕಿಕೊಳ್ಳುತ್ತಾರೋ ಯಾರ ಪರ, ಯಾವ ಸಮಾಜದ ಪರ ನಿಲ್ಲುತ್ತಾರೋ ಆ ದೇವರೇ ಬಲ್ಲ” ಎಂದು ಕುಟುಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹಾನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

“ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದೆ.
ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಕೇಂದ್ರ ಸರ್ಕಾರದ ಹಣ ಬಿಡುಗಡೆ ಮಾಡುವುದು ತಡವಾದರೆ, ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ” ಎಂದರು.

“ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುತ್ತೇವೆ‌. ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತದೆ. ಕೇಂದ್ರ ತಂಡ ಬೆಳೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಜನರ ಪರ ಕೆಲಸ ಮಾಡುತ್ತದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...