ಕಾಂಗ್ರೆಸ್‌ ಹೀಗೆಯೇ ನಿರ್ಲಕ್ಷಿಸಿದರೆ ನನ್ನ ಬಳಿ ಬೇರೆ ಆಯ್ಕೆಗಳಿವೆ: ಶಶಿ ತರೂರ್‌ ಮಾತಿನ ಮರ್ಮವೇನು?

Date:

ಕಾಂಗ್ರೆಸ್‌ನಲ್ಲಿ ತಮ್ಮನ್ನು ಇದೇ ರೀತಿ ನಿರ್ಲಕ್ಷ್ಯ ಮಾಡುತ್ತಾ ಹೋದರೆ ನನ್ನ ಬಳಿ ಬೇರೆ ಆಯ್ಕೆಗಳೂ ಇವೆ ಎಂದು ಕೇಂದ್ರದ ಮಾಜಿ ಸಚಿವ ಶಶಿ ತರೂರ್‌ ಎಚ್ಚರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ ತೊರೆಯುವ ಮುನ್ಸೂಚನೆಯನ್ನು ತರೂರ್‌ ನೀಡಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಶಶಿ ತರೂರ್ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಕೇರಳದ ಪಿಣರಾಯಿ ವಿಯಜನ್ ನೇತೃತ್ವದ ಎಲ್‌ಡಿಫ್ ಸರ್ಕಾರವನ್ನು ಹೊಗಳಿರುವ ಅವರು, ಪಕ್ಷಾಂತರದ ಬಗ್ಗೆ ಸ್ಪಷ್ಟ ನಿರಾಕರಣೆ ಮಾಡಿದ್ದಾರೆ. “ಬೇರೆ ಪಕ್ಷಗಳತ್ತ ಹೋಗುವ ಬಗ್ಗೆ ನಂಬಿಕೆ ಇಲ್ಲ. ಹಾಗಂತ ಬೇರೆ ಆಯ್ಕೆಗಳ ಬಗ್ಗೆ ಯಾವುದೇ ಕೊರತೆಯೂ ಇಲ್ಲ” ಎಂದಿದ್ದಾರೆ.

“ನನ್ನ ಬಳಿ ಪುಸ್ತಕಗಳಿವೆ, ಭಾಷಣಗಳಿವೆ, ಇಡೀ ವಿಶ್ವದಿಂದ ಭಾಷಣಕ್ಕಾಗಿ ಕರೆಯುತ್ತಾರೆ” ಎಂದು ಹೇಳುವ ಮೂಲಕ ತರೂರ್ ರಾಜಕೀಯ ನಿವೃತ್ತಿ ಬಗ್ಗೆಯೂ ಮನದ ಇಂಗಿತ ವ್ಯಕ್ತಪಡಿಸಿದ್ದಾರಾ? ಒಟ್ಟಾರೆ ಕಾಂಗ್ರೆಸ್ ಮೇಲೆ ಅವಲಂಬಿತ ಆಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2024ರ ಲೋಕಸಭಾ ಚುನಾವಣೆಗಳಲ್ಲಿ ಗೆಲುವುಗಳ ನಂತರ ಕಾಂಗ್ರೆಸ್ ಸತತ ವಿಧಾನಸಭಾ ಚುನಾವಣೆಯ ಸೋಲುಗಳನ್ನು ಎದುರಿಸುತ್ತಿರುವಾಗ, ಪಕ್ಷವು ತನ್ನ ಬದ್ದ ಮತದಾರರ ನೆಲೆಯನ್ನು ಮೀರಿ ಜನರನ್ನು ಸೆಳೆಯುವ ಅಗತ್ಯವಿದೆ. ಕಾಂಗ್ರೆಸ್ ತನ್ನ ನೆಲೆಯನ್ನು ವಿಸ್ತರಿಸಲು ಪ್ರಯತ್ನಿಸದಿದ್ದರೆ, ಮುಂದಿನ ವರ್ಷದ ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ, ಕಾಂಗ್ರೆಸ್ ತನ್ನ ಬದ್ಧತೆಯ ಮತಗಳ ನೆಲೆಯಿಂದ ಮಾತ್ರ ಗೆಲ್ಲಲು ಸಾಧ್ಯವಿಲ್ಲ. ಇದು ವಾಸ್ತವ. ರಾಷ್ಟ್ರಮಟ್ಟವನ್ನು ನೋಡಿದರೆ, ಕಾಂಗ್ರೆಸ್ ಮತಗಳು ಸುಮಾರು 19% ರಷ್ಟಿದ್ದವು. ಇಷ್ಟು ಸಾಕೆ? ನಾವು 26-27% ಹೆಚ್ಚುವರಿ ಪಡೆದರೆ ಮಾತ್ರ ನಾವು ಅಧಿಕಾರಕ್ಕೆ ಬರಬಹುದು. ಆದ್ದರಿಂದ, ಕಳೆದ ಎರಡು ಚುನಾವಣೆಗಳಲ್ಲಿ ನಮ್ಮನ್ನು ಬೆಂಬಲಿಸದವರ ಅಗತ್ಯವಿದೆ” ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ಪ್ರಧಾನಿ ಮೋದಿ ಹೊಗಳಿದ್ದ ಶಶಿ ತರೂರ್

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ, ಟ್ರಂಪ್ ಜೊತೆಗಿನ ಮಾತುಕತೆ ಹಾಗೂ ವ್ಯಾಪಾರ ಒಪ್ಪಂದಗಳ ಬಗ್ಗೆ ಶಶಿ ತರೂರ್ ಹೊಗಳಿ ಮಾತನಾಡಿ, “ಒಳ್ಳೆಯದನ್ನು ಹೊಗಳಲು ಮತ್ತು ಕೆಟ್ಟದ್ದನ್ನು ತೆಗಳಲು ನನಗೆ ಯಾರ ಅನುಮತಿಯೂ ಬೇಕಿಲ್ಲ” ಎಂದು ಹೇಳಿದ್ದರು.

ಅಲ್ಲದೆ ಶಶಿ ತರೂರ್ ಅವರು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಬಗ್ಗೆಯೂ, ಅದರ ನಿರ್ಧಾರಗಳನ್ನು ತೆಗೆದುಕೊಳ್ಳುವ ರೀತಿಯ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದರು. ಉತ್ತಮ ನಿರ್ಧಾರಗಳನ್ನು, ಪ್ಲ್ಯಾನ್‌ಗಳನ್ನು ಮಾಡುವ ಬದಲು 100 ಜನ ಇರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಮಾವೇಶದ ರೀತಿ ನಡೆಯುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

2026 ರಲ್ಲೇ ಕೇರಳ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿವಾಗಿವುದರಿಂದ ಪಕ್ಷವನ್ನು ಅಲರ್ಟ್ ಮಾಡುವ ಬಗ್ಗೆ ತರೂರ್ ಹೇಳಿಕೆ ಭಾರೀ ಮಹತ್ವ ಪಡೆದಿದೆ.

ಏ 8, 9ಕ್ಕೆ ಅಹಮದಾಬಾದ್‌ನಲ್ಲಿ ಎಐಸಿಸಿ ಅಧಿವೇಶನ

ಗುಜರಾತಿನ ಅಹಮದಾಬಾದ್‌ನಲ್ಲಿ ಏಪ್ರಿಲ್ 8 ಮತ್ತು 9 ರಂದು ಎಐಸಿಸಿ ಅಧಿವೇಶನ ನಡೆಸುವುದಾಗಿ ಕಾಂಗ್ರೆಸ್‌ ಪಕ್ಷ ಭಾನುವಾರ ಘೋಷಿಸಿದೆ. ಬಿಜೆಪಿಯ ಜನ ವಿರೋಧಿ ನೀತಿಗಳು, ಚುನಾವಣೆಗಳು, ಪಕ್ಷದ ಭವಿಷ್ಯದ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚಿಸಲಾಗುವುದು ಎಂದಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದು, “ಈ ಮಹತ್ವದ ಸಭೆಯು ದೇಶಾದ್ಯಂತ ಎಐಸಿಸಿ ಪ್ರತಿನಿಧಿಗಳನ್ನು ಒಗ್ಗೂಡಿಸಲಿದೆ. ಜನ ವಿರೋಧಿ ನೀತಿಗಳಿಂದ ಎದುರಾಗಿರುವ ಸವಾಲುಗಳು, ಸಂವಿಧಾನ ಮತ್ತು ಅದರ ಮೌಲ್ಯಗಳ ಮೇಲೆ ಬಿಜೆಪಿ ನಿರಂತರ ದಾಳಿಯ ಕುರಿತು ಚರ್ಚಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಪಕ್ಷದ ಭವಿಷ್ಯದ ಮಾರ್ಗಸೂಚಿ ಬಗ್ಗೆ ಚರ್ಚಿಸುತ್ತೇವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...