ಸಂಸತ್‌ ದಾಳಿ | ಮಗ ಕೆಟ್ಟದು ಮಾ‌ಡಿದ್ರೆ ಗಲ್ಲಿಗೇರಿಸಲಿ: ಮೈಸೂರಿನ ಮನೋರಂಜನ್ ತಂದೆ ದೇವರಾಜೇಗೌಡ

Date:

ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಏಕಾಏಕಿ ಇಬ್ಬರು ಯುವಕರು ನುಗ್ಗಿದ ಘಟನೆಗೆ ಸಂಬಂಧಿಸಿ ಈವರೆಗೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.

ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ನುಗ್ಗಿದ ಇಬ್ಬರಲ್ಲಿ ಒಬ್ಬ ಯುವಕನನ್ನು ಮೈಸೂರಿನ ಮನೋರಂಜನ್‌ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆಯುತ್ತಿದ್ದಂತೆಯೇ ಇತ್ತ ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್​​ ನಿವಾಸಕ್ಕೆ ಪೊಲೀಸರು ದೌಡಾಯಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಪಿಐ ಸುರೇಶ್ ಭೇಟಿ‌ ನೀಡಿ ಮನೋರಂಜನ್ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮನೋರಂಜನ್ ತಂದೆ ದೇವರಾಜೇಗೌಡ, ​”ಮನೋರಂಜನ್ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ 2014ರಲ್ಲಿ ಬಿಇ ಮುಗಿಸಿದ್ದ, ಮಗನಿಗೆ ಬಿಇ ಸೀಟನ್ನು  ಎಚ್.ಡಿ.ದೇವೇಗೌಡರು ಕೊಡಿಸಿದ್ದರು. ಕೆಲಸ ಇರಲಿಲ್ಲ. ತೋಟಕ್ಕೆ ಬರ್ತಿದ್ದ, ಖರ್ಚಿಗೆ ಬೇಕಾದಾಗ ಕಾಸು ಈಸ್ಕೋತಿದ್ದ. 34 ವ‍ರ್ಷ ಆಯ್ತು, ಮದುವೆಯಾಗು ಅಂತಿದ್ದೆ, ಇರಪ್ಪ, ನಾನೇನೋ ಮಾಡಬೇಕು ಅಂತ ಹೇಳ್ತಿದ್ದ. ಯಾವಾಗಲೂ ವಿವೇಕಾನಂದ, ಭಗತ್ ಸಿಂಗ್ ಅಂಥವರ ಪುಸ್ತಕಗಳನ್ನು ಓದ್ತಿದ್ದ. ದೆಹಲಿ, ಬೆಂಗಳೂರಿಗೆ ಓಡಾಡುತ್ತಿದ್ದ. ಹೋಗೋನು, ಬರೋನು. ಆದರೆ ಎಲ್ಲಿಗೆ ಹೋಗ್ತಿದ್ದ ಅಂತ ಗೊತ್ತಿಲ್ಲ. ನಾವು ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆದರೆ ಪ್ರತಾಪ್ ಸಿಂಹಗೆ ಓಟು ಹಾಕಿದ್ದೇವೆ. ಅವನು ಮನೆಯಲ್ಲಿ, ಸಮಾಜದಲ್ಲಿ, ಸ್ನೇಹಿತರಲ್ಲಿ ಯಾರಿಗೂ ಕೆಟ್ಟದು ಮಾಡಿದೋನಲ್ಲ. ಈಗ ಯಾಕೆ ಈ ರೀತಿ ಮಾಡಿದ್ದಾನೆ ಎಂದು ಗೊತ್ತಿಲ್ಲ. ಅನ್ಯಾಯ ಮಾಡಿದ್ದಾನೆ ಅಂದ್ರೆ ಅವನು‌ ನನ್ನ ಮಗನೇ ಅಲ್ಲ” ಎಂದರು.

“ಮಗ ಈ ಥರ ಮಾಡ್ತಾನೆ ಅಂತ ನನಗೆ ಗೊತ್ತಿರಲಿಲ್ಲ. ಅವನೇನಾದ್ರೂ ಒಳ್ಳೆಯದು ಮಾಡಿದ್ರೆ ದೇವರು ಕಾಪಾಡಲಿ. ಕೆಟ್ಟದ್ದನ್ನು ಮಾಡಿದ್ರೆ ನಾನು ಖಂಡಿಸುತ್ತೇನೆ. ಸಮಾಜಕ್ಕೆ ಅನ್ಯಾಯ ಮಾಡಿದ್ದಾನೆಂದರೆ ಆತ ನನ್ನ ಮಗನೇ ಅಲ್ಲ. ಯಾರೇ ಆಗಿರಲಿ, ಸಮಾಜಕ್ಕೆ ಒಳ್ಳೆಯದನ್ನಷ್ಟೇ ಮಾಡಬೇಕು. ತಪ್ಪು ಮಾಡಿದ್ದಾನೆಂದರೆ ಆತನನ್ನು ಗಲ್ಲಿಗೇರಿಸಲಿ” ಎಂದು ಬೇಸರದಿಂದ ದೇವರಾಜೇಗೌಡ ನುಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...