ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರೆ ಇಂದೇ ರಾಜಕೀಯ ನಿವೃತ್ತಿ ಪಡೆಯುವೆ: ಡಿ ಕೆ ಶಿವಕುಮಾರ್

Date:

ನಾನು ಸಂವಿಧಾನ ಬದಲಿಸುತ್ತೇನೆ ಎಂದು ಹೇಳಿದ್ದರೆ ಇಂದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ನನ್ನ ಹೇಳಿಕೆ ತೆಗೆಸಿ ನೋಡಲಿ. ಬಿಜೆಪಿ ಅವರ ಆರೋಪದಲ್ಲಿ ಯಾವ ಅರ್ಥವೂ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನ ಕುಮಾರಪಾರ್ಕ್‌ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಸುದ್ದಿಗಾರರು, “ಸಂವಿಧಾನ ಬದಲಾವಣೆ ವಿಚಾರವಾಗಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ಕೇಳಿದಾಗ ಉತ್ತರಿಸಿದ ಅವರು, “ನನಗೆ ತಲೆಕೆಟ್ಟಿಲ್ಲ. ನಾನು ಸಂದರ್ಶನದಲ್ಲಿ ಸತ್ಯ ಮಾತನಾಡಿರುವುದನ್ನು ಹಾಗೂ ನನ್ನ ರಾಜಕೀಯ ನಿಲುವನ್ನು ನೋಡಿ ಬಿಜೆಪಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ನಾನು ಸಂವಿಧಾನ ಬದಲಿಸುತ್ತೇನೆ ಎಂದು ಎಲ್ಲಿ ಹೇಳಿದ್ದೇನೆ” ಎಂದು ಪ್ರಶ್ನಿಸಿದರು.

“ಸಂವಿಧಾನ ಜಾರಿಗೆ ತಂದವರು ನಾವು, ನಾವು ಅದನ್ನು ರಕ್ಷಣೆ ಮಾಡುತ್ತಿದ್ದೇವೆ. ಬಿಜೆಪಿಯವರು ತಮ್ಮ ಹುಳುಕುಗಳನ್ನು ಮುಚ್ಚಿಹಾಕಲು ಈ ವಿಚಾರ ಪ್ರಸ್ತಾಪಿಸಿದ್ದಾರೆ. ನಮ್ಮ ನಾಯಕರು ದಡ್ಡರಲ್ಲ, ನಾನು ಏನು ಮಾತನಾಡಿದ್ದೇನೆ ಎಂದು ಅವರು ನೋಡಿದ್ದಾರೆ. ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಬಿಜೆಪಿ ಪಕ್ಷದ ನಾಯಕರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಕೆದಾಟು : ನ್ಯಾಯ ಸಿಗಲಿದೆ

ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂಬ ತಮಿಳುನಾಡು ಸಚಿವ ದೊರೈ ಮುರುಗನ್ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ನೀರು ನಮ್ಮ ಹಕ್ಕು. ಅವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ಈ ಹಿಂದೆ ಅನೇಕ ಬಾರಿ ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಹೋಗಿ ಮಾತುಕತೆ ಮಾಡಲಾಗಿತ್ತು. ನಾವು ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ. ನ್ಯಾಯಾಲಯದ ತೀರ್ಪಿಗೆ ಯಾರೂ ಅಡ್ಡಿ ಮಾಡಲು ಸಾಧ್ಯವಿಲ್ಲ. ಅವರು ತಮ್ಮ ವಾದ ಮಾಡಲಿ, ನಾವು ನಮ್ಮ ವಾದ ಮಂಡಿಸುತ್ತೇವೆ. ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಡಿಪಿಆರ್ ಸಲ್ಲಿಕೆ ಮಾಡಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ಈ ಯೋಜನೆ ಜಾರಿಗೆ ನಾವು ಬದ್ಧವಾಗಿದ್ದೇವೆ. ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿದ್ದು, ನ್ಯಾಯಾಲಯದಲ್ಲಿಯೂ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ತಮಿಳುನಾಡು ಸಿಎಂ ನಿಮ್ಮ ಸ್ನೇಹಿತರು, ಅವರನ್ನು ಒಪ್ಪಿಸಿ ಈ ಯೋಜನೆ ಜಾರಿ ಮಾಡಿ ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, “ತಮಿಳುನಾಡಿನವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಕೈ ಹಿಡಿದು ಒಪ್ಪಿಗೆ ಕೊಡಿಸುವುದಾಗಿ ಹೇಳಿದ್ದರು. ಅವರು ಯಾಕೆ ಕೊಡಿಸುತ್ತಿಲ್ಲ. ರಾಜಕೀಯದಲ್ಲಿ ಅನೇಕ ಒತ್ತಡಗಳಿರುತ್ತವೆ. ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಸಮುದ್ರಕ್ಕೆ ವ್ಯರ್ಥವಾಗಿ ಹೋಗುತ್ತಿರುವ ನೀರನ್ನು ಸಂಗ್ರಹಿಸಲು ನೆರವಾಗಲಿದೆ. ಹೀಗಾಗಿ ಈ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿನವರಿಗೆ ಮನವಿ ಮಾಡುತ್ತೇನೆ. ಕೃಷ್ಣಾ ನೀರು ಸಂಬಂಧ ಆಂಧ್ರ ಪ್ರದೇಶ ಸಿಎಂ ಜತೆ ಚರ್ಚೆಗೆ ದಿನಾಂಕ ಕೇಳಿದ್ದು, ಅವರು ದಿನಾಂಕ ನಿಗದಿ ಮಾಡಿದ ಬಳಿಕ ಹೋಗಿ ಭೇಟಿ ಮಾಡುವೆ” ಎಂದು ತಿಳಿಸಿದರು.

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಪ್ರಕರಣದ ಸಿಬಿಐ ವರದಿ ಏನಾಯ್ತು?

ಫೋನ್ ಟ್ಯಾಪಿಂಗ್ ವಿಚಾರ ಮತ್ತೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ನಾನು ಜೈಲಲ್ಲಿ ಇದ್ದಾಗ, ನಮ್ಮ ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿದೆ ಎಂಬ ಸುದ್ದಿ ಓದಿದ್ದೆ. ಅದಾದ ನಂತರ ತನಿಖೆ, ಏನೇನೋ ನಡೆಯಿತು. ಈ ವಿಚಾರವಾಗಿ ಸಿಬಿಐ ತನಿಖೆ ಮಾಡಿತ್ತು. ಬಿಜೆಪಿಯವರು ಸಿಬಿಐ ವರದಿಯನ್ನು ಪ್ರಕಟಿಸಲಿ, ಆಮೇಲೆ ಮಿಕ್ಕ ವಿಚಾರ ಮಾತನಾಡೋಣ” ಎಂದರು.

ಸಿಎಂ, ಗೃಹಮಂತ್ರಿಗಳಿಂದ ಎಲ್ಲರಿಗೂ ನ್ಯಾಯ

ರಾಜಣ್ಣ ಅವರು ಹನಿಟ್ರ್ಯಾಪ್ ವಿಚಾರವಾಗಿ ಗೃಹ ಮಂತ್ರಿಗೆ ದೂರು ನೀಡಲು ಮುಂದಾಗಿದ್ದಾರಲ್ಲ ಎಂದು ಕೇಳಿದಾಗ, “ಗೃಹ ಸಚಿವರು ಬಹಳ ಹಿರಿಯರು. ಅವರಿಗೆ ಪಕ್ಷ ನಡೆಸಿ, ಜತೆಗೆ ಸರ್ಕಾರದಲ್ಲೂ ಅನುಭವವಿದೆ. ಅವರು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ತನಿಖೆ ನಡೆಸುವುದಾಗಿ ಸದನದಲ್ಲಿ ಹೇಳಿದ್ದು, ರಾಜಣ್ಣ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಯಾವ ರೀತಿ ನ್ಯಾಯ ಒದಗಿಸಬೇಕೋ ಒದಗಿಸುತ್ತಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...