ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೂಡ ಮರ್ಯಾದೆ ಕೊಡುವೆ: ಡಿ.ಕೆ. ಶಿವಕುಮಾರ್

Date:

“ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

“ನೀವು ಕೊಟ್ಟಿರುವ ಚರ್ಚೆಯ ಸವಾಲನ್ನು ಕುಮಾರಸ್ವಾಮಿ ಅವರು ಸ್ವೀಕರಿಸುತ್ತಿಲ್ಲ ಯಾಕೆ” ಎಂದು ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಈ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರರಹಿತ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುತ್ತೇವೆ. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ. ನಮ್ಮಂತಹವರನ್ನು, ಅಂದರೆ ಸಮುದಾಯವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಮುದಾಯಕ್ಕಾಗಿ ನಾನು ಅವರಿಗೆ ಗೌರವ ಕೊಟ್ಟು ಅವರು ಏನೇ ಅಂದರೂ ಸಹಿಸಿಕೊಂಡಿದ್ದೇನೆ. ಅವರು ಸವಾಲು ಸ್ವೀಕರಿಸಿದ್ದರೆ ಚುನಾವಣೆ ನಂತರ ಅಧಿವೇಶನದಲ್ಲಿ ಮಾತನಾಡೋಣ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ನುಡಿಮುತ್ತು ಮರೆಮಾಚಲು ನನ್ನ ಮೇಲೆ ಆರೋಪ

ಎನ್ ಒಸಿ ನೀಡಲು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆ ಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು. ನಾನು ಆ ವಿಚಾರ ಬಿಡುತ್ತೇನೆ. ಆದರೆ ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ. ಇದು ರಾಜ್ಯದ ವಿಚಾರವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೂ ಇದಕ್ಕೂ ಸಂಬಂಧವಿಲ್ಲ. ಇದು ಮಹಿಳೆಯರು ಹಾಗೂ ಅವರ ಸ್ವಾಭಿಮಾನದ ವಿಚಾರ. ಇವರ ವಿಚಾರ ಬಿಡಿ. ನಮ್ಮ ಗುರಿ ಬಿಜೆಪಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟರು ಸರಿ, ಬಿಜೆಪಿಯವರು ಯಾಕೆ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಯಡಿಯೂರಪ್ಪ, ಅಶೋಕ್ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?” ಎಂದು ಡಿ ಕೆ ಶಿವಕುಮಾರ್ ಕೇಳಿದರು.

ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ:

ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ವಿಚಾರವಾಗಿ ಕೇಳಿದಾಗ, “ರಾಹುಲ್ ಗಾಂಧಿ ಅವರು ನಾಳೆ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅವರು ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...