ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

Date:

  • ಸಾಮಾಜಿಕ ಶಾಂತಿ ಸುವ್ಯವಸ್ಥೆ ಕದಡದಂತೆ ಕಟ್ಟೆಚ್ಚರದ ಕ್ರಮ
  • ಸಂಚಾರ ದಟ್ಟಣೆ, ಸೈಬರ್ ಕ್ರೈಮ್ ನಿಯಂತ್ರಣಕ್ಕೆ ಆದ್ಯತೆ ನೀಡಿ

ರಾಜ್ಯದಲ್ಲಿನ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ಕಾರ್ಯೋನ್ಮುಖರಾಗಬೇಕು. ಒಂದು ವೇಳೆ ಈ ವಿಚಾರದಲ್ಲಿ ಎಡವಿದರೆ ಅವರನ್ನೇ ಅದರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಡಿಸಿಎಂ ಶಿವಕುಮಾರ್ ಜೊತೆಗೂಡಿ ಸಭೆ ನಡೆಸಿದ ಅವರು ಅಗತ್ಯ ಕಿವಿಮಾತುಗಳನ್ನು ಹೇಳಿದರು.

ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದ ಅವರು ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ?: ಈ ದಿನ ಸಂಪಾದಕೀಯ | ತೃತೀಯ ರಂಗಕ್ಕೆ ಶಕ್ತಿ ತುಂಬಲಿದೆಯೇ ಕರ್ನಾಟಕದ ಗೆಲುವು?

ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್ ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...