ಜನ ಹಸಿವಿನಿಂದ ಬಳಲುತ್ತಿಲ್ಲ ಎಂದಾದರೆ 83ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಕೆ ಯಾಕಾಗಿ? : ಪರಕಾಲ ಪ್ರಭಾಕರ

Date:

“ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಸಿವಿನಿಂದ ಜನರು ಕಂಗಾಲಾಗಿದ್ದಾರೆ. ಆದರೆ ಜನರ ಕಷ್ಟ ಕೇಳುವ ಮನಸ್ಥಿತಿ ಸರ್ಕಾರಕ್ಕೆ ಇಲ್ಲ. ಹಸಿವಿನ ಸೂಚ್ಯಂಕದಲ್ಲಿ ಭಾರತ 142ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಈ ದೇಶದಲ್ಲಿ ಯಾರೂ ಹಸಿವಿನಿಂದ ಬಳಲುತ್ತಿಲ್ಲ ಎಂದು ಕೇಂದ್ರ ಸರ್ಕಾರದ ಸಚಿವರೇ ಹೇಳುತ್ತಾರೆ. ಜನ ಹಸಿದಿಲ್ಲ ಎಂದ ಮೇಲೆ 83 ಕೋಟಿ ಜನರಿಗೆ ತಿಂಗಳಿಗೆ ಐದು ಕೇಜಿಯಷ್ಟು ಆಹಾರ ಧಾನ್ಯ ಪೂರೈಸುತ್ತಿರುವುದು ಯಾಕಾಗಿ” ಎಂದು ಖ್ಯಾತ ಆರ್ಥಿಕ ತಜ್ಞ ಪರಕಾಲ ಪ್ರಭಾಕರ ಪ್ರಶ್ನಿಸಿದರು.

ಶುಕ್ರವಾರ ಬೆಂಗಳೂರಿನಲ್ಲಿ ʼಸಂವಿಧಾನದ ಹಾದಿಯಲ್ಲಿʼ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ದೇಶದ ಧ್ವನಿ’ ಉಪನ್ಯಾಸ ನೀಡಿದರು.

ಸರ್ಕಾರದ ಜವಾಬ್ದಾರಿಯುತ ಸಚಿವರೊಬ್ಬರು ಹಸಿವಿನ ಸೂಚ್ಯಂಕದ ವರದಿಯ ಬಗ್ಗೆ ಲಘುವಾಗಿ ಮಾತನಾಡಿದ್ದರು. ಅವರು ತಮ್ಮ ದಿನಚರಿಯ ಉದಾಹರಣೆ ಕೊಡುತ್ತಾ, ನಿರಂತರ ಪ್ರಯಾಣದಿಂದಾಗಿ ಊಟ ಮಾಡಿರಲಿಲ್ಲ. ಯಾರೋ ಫೋನ್‌ ಮಾಡಿ ಹಸಿದಿದ್ದೀರಾ ಎಂದು ಕೇಳುತ್ತಾರೆ, ಹೌದು ಹಸಿದಿದ್ದೇನೆ ಎಂದು ಹೇಳುತ್ತೇನೆ. ಈ ರೀತಿ ಜಾಗತಿಕ ಹಸಿವಿನ ಸೂಚ್ಯಂಕ ಸಿದ್ಧಪಡಿಸಲಾಗುತ್ತದೆ ಎಂದು ವ್ಯಂಗ್ಯವಾಡಿದ್ದರು. ಐದು ಕೇಜಿ ಅಕ್ಕಿ ಬಡವರಿಗೆ ಕೊಟ್ಟು, ಐದು ವಿಮಾನ ನಿಲ್ದಾಣಗಳನ್ನು ಗೆಳೆಯರಿಗೆ ಕೊಡುವುದು ಇಂದಿನ ಆಡಳಿತದ ವಿಚಿತ್ರ “ಆರ್ಥಿಕ ತತ್ವಶಾಸ್ತ್ರ” ಎಂದು ಅವರು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕ ಸ್ಥಿತಿ ನಾಶವಾಗಿದೆ. ಈ ಸರ್ಕಾರ ಸಮಾನತೆಗೆ ಯಾವುದೇ ಪ್ರಾಮುಖ್ಯತೆ ಕೊಟ್ಟಿಲ್ಲ. ಇತ್ತೀಚಿಗೆ ಬಂದ ಅಸಮಾನತೆಯ ಕುರಿತ ಜಾಗತಿಕ ಸಮೀಕ್ಷೆಯ ಪ್ರಕಾರ ದೇಶದ 1% ಜನಸಂಖ್ಯೆಯ ಬಳಿ 40% ಆಸ್ತಿ ಇದೆ. ಕಳೆದ ಹತ್ತು ವರ್ಷಗಳಲ್ಲಿ ಅಸಮಾನತೆಯ ಅಂತರ ಗಣನೀಯವಾಗಿ ಹೆಚ್ಚಿದೆ. ಈ ಅಸಮಾನತೆ ದೇಶದ ಗಂಭೀರ ಸಮಸ್ಯೆ ಎಂದರು.

ಒಂದು ಕಡೆ ಪ್ರಧಾನಿ ಮೋದಿ ಅವರು ಭಾರತ ಬ್ರಿಟನ್‌ ದೇಶವನ್ನು ಹಿಂದಿಕ್ಕಿ ಐದನೇ ಅರ್ಥವ್ಯವಸ್ಥೆಯಾಗಿ ಬೆಳೆದಿದೆ ಎನ್ನುತ್ತಾರೆ. ಇನ್ನೊಂದೆಡೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 2027ರವರೆಗೆ ಕಾಯಬೇಕು ಎನ್ನುತ್ತಾರೆ. ದೇಶದ ಸಾಲದ ಪ್ರಮಾಣ ಶೇ 40 ಇದೆ. ಉಳಿತಾಯ ಶೇ 5 ಇದೆ. ಇಂತಹ ಸ್ಥಿತಿಯಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಹೇಗೆ ಸಾಧ್ಯ ಎಂಬ ಪ್ರಶ್ನೆಗೆ ಅವರ ಬಳಿ ಉತ್ತರವೇ ಇಲ್ಲ. ಉದ್ಯಮಿಗಳು ನಂಬಿಕೆ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ 1.50 ಲಕ್ಷ ಭಾರತೀಯರು ಪೌರತ್ವ ತ್ಯಜಿಸುತ್ತಿದ್ದಾರೆ ಎಂದು ಹೇಳಿದರು

ಈಗಿನ ಯುವಕರು ಬಿಲ್‌ಗೇಟ್ಸ್‌, ಮಾರ್ಕ್‌ ಜುಕರ್‌ ಬರ್ಗ್‌ ಆಗಲು ಬಯಸಲ್ಲ, ಅವರು ಬುದ್ಧಿವಂತರಾಗಲು  ಬಯಸುತ್ತಿದ್ದಾರೆ. ಅವರು ಚರ್ಚೆ ಮಾಡಲು ಬಯಸುತ್ತಾರೆ. ಇದೇ ಅವರಿಗೆ ದೊಡ್ಡ ಸಮಸ್ಯೆ ಎಂದು ವ್ಯಂಗ್ಯವಾಡಿದರು.

ಈ ಚುನಾವಣೆಯಲ್ಲಿ ಜನ ಎಚ್ಚೆತ್ತುಕೊಳ್ಳದಿದ್ದರೆ, ಎಲ್ಲ ರಾಜ್ಯಗಳೂ ಮಣಿಪುರವಾಗಲಿದೆ ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟದ 28 ಸಂಸದರ ಐದು ವರ್ಷಗಳ ರಿಪೋರ್ಟ್‌ ಕಾರ್ಡ್‌ ಬಿಡುಗಡೆ ಮಾಡಲಾಯಿತು. ಅಂಕಣಕಾರ ಆಕಾರ್‌ ಪಟೇಲ್‌, ಸಾಮಾಜಿಕ ಚಿಂತಕ ಸಲೀಲ್‌ ಶೆಟ್ಟಿ, ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಸಂಶೋಧಕಿ ಎ ಎಆರ್‌ ವಾಸವಿ, ಚಿಂತಕಿ ಜಾನಕಿ ನಾಯರ್‌ ಅಭಿಪ್ರಾಯ ಹಂಚಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...