ಪ್ರತಾಪ್‌ ಸಿಂಹ ಮೊಬೈಲ್‌ ಎಸ್‌ಐಟಿಗೆ ಕೊಟ್ಟರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಖಚಿತ: ಕಾಂಗ್ರೆಸ್‌ ಮುಖಂಡ ಎಂ ಲಕ್ಷ್ಮಣ್

Date:

ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್‌ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವಿಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ಹೊಸ ಬಾಂಬ್ ಸಿಡಿಸಿದ್ದಾರೆ.

ಮಡಿಕೇರಿಯಲ್ಲಿ ಮಾತಾನಾಡಿದ ಅವರು, 2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವಿಡಿಯೋಗಳು ಕಂಡು ಬಂದಿದ್ದವು. ಇದನ್ನು ನೋಡಿದ ಅಮಿತ್ ಶಾ ಅವರೇ ದಿಗ್ಭ್ರಮೆಗೊಂಡಿದ್ದರು. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ರೀತಿಯಲ್ಲಿಯೇ ಪ್ರತಾಪ್ ಸಿಂಹ ಅವರ ಮೊಬೈಲ್‌ನಲ್ಲಿ ವಿಡಿಯೋಗಳಿವೆ. ಅಂತಹ ವಿಡಿಯೋ ಇರುವುದಕ್ಕೆ ಗೃಹ ಸಚಿವರು ಪ್ರತಾಪ್ ಸಿಂಹ ಮೊಬೈಲ್ ಸೀಜ್‌ ಮಾಡಿಸಿದ್ದರು. ಪ್ರತಾಪ್ ಸಿಂಹ ಅಶ್ಲೀಲ ವಿಡಿಯೋಗಳು ನನ್ನ ಮೊಬೈಲ್‌ನಲ್ಲೇ ಇವೆ, ಮೊಬೈಲ್‌ನಲ್ಲಿರುವ ವಿಡಿಯೋಗಳನ್ನು ನೋಡಿದ ನಂತರವೇ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ನೀಡಬಾರದು ಎಂಬ ನಿರ್ಧಾರ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

ಇಂತಹ ಪ್ರತಾಪ್ ಸಿಂಹಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಪ್ರದೀಪ್ ಈಶ್ವರ್ ಸೇರಿದಂತೆ ಹಲವಾರು ನಾಯಕರಿಗೆ ಬೈಯೋದೆ ಇವನ ಕೆಲಸವಾಗಿದೆ‌. ದೆಹಲಿಯಲ್ಲಿ ಇವರಿಗೆ ಬ್ಲೂ ಬಾಯ್‌ ಎನ್ನುತ್ತಾರೆಂದು ಎಂ ಲಕ್ಷ್ಮಣ್ ಲೇವಡಿ ಮಾಡಿದ್ದಾರೆ.

ಪ್ರತಾಪ್‌ ಸಿಂಹಗೆ ಕಾಂಗ್ರೆಸ್ ಪಕ್ಷ ಹಾಗೂ ತನ್ನ ಕುಟುಂಬದ ಬಗ್ಗೆ ಟೀಕಿಸುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ ಲಕ್ಷ್ಮಣ್‌ 2024ರ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟಿದ್ದರೆ ನಾನು 3 ಲಕ್ಷ ಅಂತರದಲ್ಲಿ ಗೆಲುವು ಸಾಧಿಸುತ್ತಿದ್ದೆ. ಇನ್ನು ಮುಂದೆ ಪ್ರತಾಪ್‌ ಸಿಂಹ ಎಲ್ಲಿ ನಿಂತರೂ ನಾನು ಅದೇ ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...