ರಮೇಶ್‌ ಕುಮಾರ್‌ ಮತ್ತು ನಾನು ಒಂದಾದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಗೆಲುವು ಖಚಿತ: ಸಚಿವ ಮುನಿಯಪ್ಪ

Date:

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ ಬೇಡ, ಇವರಿಗೂ ಬೇಡ ಎಂಬ ಧೋರಣೆಯಿಂದ ಮೂರನೆಯವರನ್ನು ಕಣಕ್ಕಿಳಿಸಿದರೆ ಯಾರೂ ಕೆಲಸ ಮಾಡುವುದಿಲ್ಲ. ಅಲ್ಲದೇ ಅಭ್ಯರ್ಥಿಯಾಗಿ ಬಂದವರು ಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲ” ಎಂದು ಕಡ್ಡಿ ಮುರಿದಂತೆ ತಿಳಿಸಿದರು.

“ಇತ್ತೀಚಿನ ಬೆಳವಣಿಗೆಗಳಿಂದ ನನಗೆ ನೋವಾಗಿದೆ. ಇದನ್ನೂ ಮೀರಿ ನನಗೆ ಪಕ್ಷ ಮುಖ್ಯ. ಇಲ್ಲಿ ನಾವಿಬ್ಬರೂ ಒಂದಾಗದಿದ್ದರೆ ಮೂರನೇ ವ್ಯಕ್ತಿ ಅಭ್ಯರ್ಥಿಯಾಗಿ ಬಂದರೂ ಗೆಲುವು ಕಷ್ಟ. ರಮೇಶ್‌ ಕುಮಾರ್‌ ಮತ್ತು ನನ್ನನ್ನು ಮೊದಲು ಒಂದು ಮಾಡಿ, ನಂತರ ಚುನಾವಣೆ ಮಾಡಿ ಎಂದಿದ್ದೇನೆ” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

ರಮೇಶ್‌ ಕುಮಾರ್‌ ಜೊತೆ ಸಮಸ್ಯೆ ಪರಿಹರಿಸಿ

“ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಲವರು ಕಾಂಗ್ರೆಸ್‌ ಪಕ್ಷಕ್ಕೆ ಬಂದರು. ಪಕ್ಷ ಗೆಲ್ಲಬೇಕು ಎಂಬ ಕಾರಣಕ್ಕೆ ನಾನು ಯಾರನ್ನೂ ವಿರೋಧಿಸಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಯಾರ ವಿರುದ್ಧವೂ ಕೆಲಸ ಮಾಡಿಲ್ಲ. ರಮೇಶ್‌ ಕುಮಾರ್‌ ಮತ್ತು ನನ್ನ ಮಧ್ಯೆ ಸಮಸ್ಯೆ ಪರಿಹರಿಸುವಂತೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಮನವಿ ಮಾಡಿರುವೆ” ಎಂದು ಹೇಳಿದರು.

“ನಾನು ಕೂಡ ಒಬ್ಬ ಅಭ್ಯರ್ಥಿಯ ಹೆಸರು ಹೇಳಿದ್ದೇನೆ. ಮೂರನೇ ಅಭ್ಯರ್ಥಿಯ ಹೆಸರನ್ನು ನಾನು ಹೇಳಿಲ್ಲ. ನಮ್ಮ ಕುಟುಂಬದ ಚಿಕ್ಕಪೆದ್ದಣ್ಣ ಅವರಿಗೇ ಟಿಕೆಟ್‌ ಕೊಡುವಂತೆ ನಾನು ಕೇಳಿದ್ದೇನೆ. ಗೌತಮ್‌ ಹೆಸರನ್ನು ನಾನು ಹೇಳಿಲ್ಲ. ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ” ಎಂದು ತಿಳಿಸಿದರು.

ನಾವಿಬ್ಬರೂ ಒಂದಾದರೆ ಗೆಲುವು ಖಚಿತ

ರಮೇಶ್‌ ಕುಮಾರ್‌ ಮತ್ತು ನನ್ನನ್ನು ಒಂದು ಮಾಡಿದರೆ ಕೋಲಾರ, ಚಿಕ್ಕಬಳ್ಳಾಪುರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇವೆ. ರಮೇಶ್‌ ಕುಮಾರ್‌ ಅವರ ಜತೆ ಚರ್ಚಿಸಲು ಪ್ರಯತ್ನಿಸಿದೆ. ನಾನೇ ಅವರ ಮನೆ ಬಳಿ ಹೋಗಿದ್ದೆ. ಆದರೆ, ಅವರು ಮನೆಯಲ್ಲಿರಲಿಲ್ಲ. ಕಾಂಗ್ರೆಸ್‌ ಕಚೇರಿಯಲ್ಲಿ ಅವರ ಜತೆ ಮಾತನಾಡಿದೆ. ಎಲ್ಲವನ್ನೂ ಬಿಟ್ಟುಬಿಡೋಣ ಎಂದು ಅವರೇ ಹೇಳಿದ್ದರು” ಎಂದರು.

“ನಾನು ಮತ್ತೊಮ್ಮೆ ಮನವಿ ಮಾಡುತ್ತೇನೆ. ನಾನು ಹೇಳಿದ ಅಭ್ಯರ್ಥಿಗೆ ಟಿಕೆಟ್‌ ಕೊಟ್ಟರೆ ಖಂಡಿತವಾಗಿಯೂ ಗೆಲ್ಲಿಸಿಕೊಂಡು ಬರುತ್ತೇನೆ. ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್‌ ಕೊಡುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಬಳಿಯೂ ಹೇಳಿದ್ದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಮನವರಿಕೆ ಮಾಡಿದ್ದೆ. ಈಗಲೂ ಕಾಲ ಮಿಂಚಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...