ಸರ್ಕಾರಕ್ಕೆ ಎದೆಗಾರಿಕೆ ಇದ್ದರೆ ಭ್ರಷ್ಟಾಚಾರ ನಿಲ್ಲಿಸಲಿ: ಎಚ್‌ ಡಿ ಕುಮಾರಸ್ವಾಮಿ ಸವಾಲು

Date:

ಸರ್ಕಾರಕ್ಕೆ ಈ ಭ್ರಷ್ಟಾಚಾರ ನಿಲ್ಲಿಸುವ ಎದೆಗಾರಿಕೆ ಇದ್ದರೆ ನಿಲ್ಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಸವಾಲು ಹಾಕಿದರು.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಕ್ಸೆಲ್‌ ಶೀಟ್ ನಾನು ತಯಾರಿಸಿದ್ದಲ್ಲ. ನಾನು ಕೇವಲ ಇರುವ ವಾಸ್ತವ ಪ್ರಸ್ತಾಪ ಮಾಡಿದ್ದೇನೆ ಅಷ್ಟೇ. ಸರಿಪಡಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ” ಎಂದರು.

“ಯಾವ್ಯಾವ ಇಲಾಖೆಗೆ ಎಷ್ಟು ಹಣ ಪಡೆಯುತ್ತಿದ್ದರು ಎಂದು ಇವರೇ ಜಾಹೀರಾತು ಕೊಡಲಿಲ್ಲವೇ? ಹಿಂದಿನ ಸರ್ಕಾರದ ಪಟ್ಟಿಯನ್ನು ಮಾಡಿಕೊಟ್ಟಿದ್ದು ಯಾರು? ಇಲಾಖೆಗಳಲ್ಲಿ ಮಧ್ಯವರ್ತಿಗಳು ಹೆಚ್ಚು ಮಂದಿ ಇದ್ದಾರೆ” ಎಂದು ಮಾರ್ಮಿಕವಾಗಿ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೋಟೆಲ್‌ನಲ್ಲಿ ಅಡ್ಡ ಮಾಡಿಕೊಂಡಿದ್ದೆ ಎಂದು ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಆದರೆ, ನಾನು ಅವರು ಹೇಳುವ ರೀತಿ ಅಡ್ಡ ಮಾಡಿಕೊಂಡಿರಲಿಲ್ಲ. ಬದಲಿಗೆ ವಿಶ್ರಾಂತಿಗಾಗಿ ಮಾತ್ರ ಅಲ್ಲಿಗೆ ಹೋಗುತ್ತಿದ್ದೆ” ಎಂದು ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದರು.

“ಭ್ರಷ್ಟಾಚಾರಕ್ಕೆ ಜಾತಿ ವ್ಯವಸ್ಥೆ ಇದೆಯಾ? ಭ್ರಷ್ಟಾಚಾರ ಬಹಿರಂಗ ಮಾಡಿದರೆ ಜಾತಿ ಬಣ್ಣ ಕಟ್ಟುತ್ತಾರೆ. ಭ್ರಷ್ಟಾಚಾರ ವ್ಯವಸ್ಥೆ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇನೆ, ಮುಂದೆಯೂ ಮಾಡುತ್ತೇನೆ. ಈಗ ಅಧಿಕಾರಿಗಳು ಪೋಸ್ಟಿಂಗ್ ಪಡೆಯಲು ಹಣ ಕೊಡುತ್ತಿದ್ದಾರೆ. ಮುಂದೆ ಇದೇ ಅಧಿಕಾರಿಗಳು ಅಂತಿಮವಾಗಿ ಜನರ ಜೇಬಿಗೆ ಕೈ ಹಾಕುತ್ತಾರೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಅಭದ್ರತೆಯಿಂದ ವರ್ಗಾವಣೆ ದಂಧೆ ಆರೋಪ ಹರಿಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

“ನನ್ನ ವಿರುದ್ಧ 150 ಕೋಟಿ ರೂಪಾಯಿ ಹಗರಣದ ಆರೋಪ ಮಾಡಿದ್ದರು. ಈ ಹಗರಣದ ಆರೋಪವನ್ನು ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಬೇರೆ ರೀತಿಯೇ ಆಯಿತು. ನಾನು ತಪ್ಪು ಮಾಡಿಲ್ಲ, ಮಾಡಿದ್ದರೆ ಶಿಕ್ಷೆ ಅನುಭವಿಸಲು ಸಿದ್ಧ” ಎಂದರು.

“ನಾನು ಮಾಡಿದ ಆರೋಪಕ್ಕೆ ದಾಖಲೆ ಕೊಡಿ ಎಂದರೆ ಹಣ ಕೊಡಲು ಸಾಧ್ಯವೆ? ಪೆನ್ ಡ್ರೈವ್ ಬೇರೆ ವಿಚಾರ, ಪೆನ್ ಡ್ರೈವ್ ಖಾಲಿ ಇಲ್ಲ. ಆಪರೇಷನ್ ಮಾಡಿದ ಸಿಡಿ ತರ ಅಲ್ಲ. ಈ ಪೆನ್ ಡ್ರೈವ್ ಬೇರೆಯದ್ದು. ಕಾಂಗ್ರೆಸ್‌ನವರಿಗೆ ಇಷ್ಟು ಆತುರ ಏಕೆ. ಇನ್ನೂ ಕಾದು ನೋಡಿ ಹಲವು ಬರ್ತವೆ” ಎಂದು ಹೇಳಿದರು.

“ನಾನು ಪ್ರಚೋದನೆಗೆ ಒಳಗಾಗುವವನಲ್ಲ. ಈ ದೇಶದ ವ್ಯವಸ್ಥೆ ನೋಡಿದ್ದೇನೆ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಯಾರಿಂದಲೂ ನಾನು ಸರ್ಟಿಫಿಕೇಟ್ ಪಡೆಯಬೇಕಿಲ್ಲ” ಎಂದು ತಿರುಗೇಟು ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...