ರಾಮನಗರ ಜಿಲ್ಲೆ ಹೆಸರು ಬದಲಾದರೆ ಮುಂದೆ ನಾನು ಕಿತ್ತೆಸೆಯುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

Date:

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿ, “ಇವರು ಈಗ ಜಿಲ್ಲೆಯ ಹೆಸರು ಬದಲಾವಣೆ ಮಾಡಬಹುದು. ಮತ್ತೆ ನಾನು ರಾಜ್ಯದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇನೆ. ಆಗ ಇವರು ಇಟ್ಟಿರುವ ಹೆಸರನ್ನು ಕಿತ್ತೆಸೆಯುತ್ತೇನೆ” ಎಂದು ಗುಡುಗಿದರು.

“ಕಾಂಗ್ರೆಸ್ ಸರಕಾರ ಬಂದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ಇದನ್ನು ಯಾಕೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೆ ಹಣವನ್ನು ತುಂಬಿಸಿಕೊಳ್ಳಬಹುದು ಎಂಬ ಉದ್ದೇಶ ಇರಬಹುದು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ರಾಮನಗರದ ನಾಲ್ಕೂ ತಾಲೂಕುಗಳನ್ನು ಬೆಂಗಳೂರಿಗೆ ಸೇರಿಸುತ್ತೇನೆ. ಭೂಮಿ ಮಾರಾಟ ಮಾಡಬೇಡಿ ಎಂದು ಹೇಳಿದ್ದರು” ಎಂದು ಕುಮಾರಸ್ವಾಮಿ ಅವರು ಹೆಸರು ಹೇಳದೆಯೇ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ರಾಮದೇವರಿಗೆ ಅಪಚಾರ

“ರಾಮನಗರ ಜಿಲ್ಲೆ ಮಾಡಿದ್ದ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ? ರಾಮನ ಹೆಸರು ಇರುವುದು ಒಂದು ಭಾಗ. ಈ ಜಿಲ್ಲೆಗೆ ತನ್ನದೇ ಆದ ಒಂದು ಇತಿಹಾಸ ಇದೆ. ಪುರಾಣ ಐತಿಹ್ಯವಿದೆ. ಈ ಹೆಸರಲ್ಲಿ ರಾಮನ ಹೆಸರು ಇದೆ. ರಾಮದೇವರಿಗೆ ಇವರು ಅಪಚಾರ ಮಾಡಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಲ್ಲಿ ಇವರು ಯಾವ್ಯಾವ ಬೆಲೆ ಏರಿಕೆ ಮಾಡಿದ್ದಾರೆ ನೋಡಿದ್ದೇವೆ. ಭೂಮಿ ಲಪಟಾಯಿಸಿ ಯಾವುದರ ಬೆಲೆ ಏರಿಕೆ ಮಾಡಿದ್ದಾರೆ ಎನ್ನುವುದು ಕೂಡ ಗೊತ್ತಿದೆ. ಇದೆಲ್ಲ ಬಿಟ್ಟು ಅಭಿವೃದ್ಧಿ ಮಾಡುವುದನ್ನು ಅವರು ಕಲಿಯಲಿ. ನಾನು ಅಧಿಕಾರದಲ್ಲಿದ್ದಾಗ ರಾಮನಗರ ಜಿಲ್ಲೆ ಮಾಡಿದ್ದೆ. ಅದನ್ನು ತೆಗೆಯಬೇಕು ಎನ್ನುವುದು ಅವರ ಉದ್ದೇಶ. ದೇವೇಗೌಡರು, ನಾನು ಏನು ಅಭಿವೃದ್ಧಿ ಮಾಡಿದ್ದೇವೆ ಜನರಿಗೆ ಗೊತ್ತಿದೆ. ಅದಕ್ಕೆ ಇವರ ಸರ್ಟಿಫಿಕೇಟ್ ಬೇಕಿಲ್ಲ. ಹಿಂದೆ ಕನಕಪುರ, ಸಾತನೂರು ಹೇಗಿದ್ದವು, ಆಗ ಇವರು ಯಾರದೋ ಸೇವೆ ಮಾಡಿಕೊಂಡಿದ್ದರು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಈಗ ರಾಮನಗರ ಹೆಸರು ಬದಲಾಯಿಸಿದರೂ ಮುಂದೆ ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇನೆ. ಆ ವಿಶ್ವಾಸ ನನಗೆ ಇದೆ. ನಾಲ್ಕು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಎಂದು ಮಾಡಲು ಹೊರಟಿದ್ದಾರೆ. ಈಗಾಗಲೇ ಬೆಂಗಳೂರು ದಕ್ಷಿಣ ಕ್ಷೇತ್ರ ಎಂದು ಇದೆ. ಹೆಸರು ಬದಲಾವಣೆ ಮಾಡಿದರೆ ಏನು ಸಿಗುತ್ತದೆ ಎಂಬುದನ್ನು ಅವರು ಜನರಿಗೆ ಹೇಳಬೇಕು. ಹೆಸರು ಬದಲಾವಣೆ ಮಾಡಿದರೆ ಎಲ್ಲ ಸರ್ಕಾರಿ ದಾಖಲೆಗಳಿಗೆ ತೊಂದರಯಾಗಲಿದೆ. ಜನರು ಕಚೇರಿಗಳಿಗೆ ಅಲೆಯಬೇಕಾಗುತ್ತದೆ” ಎಂದರು.

ರಾಮನಗರ-ಚನ್ನಪಟ್ಟಣ ಅವಳಿ ನಗರ

“ಜಿಲ್ಲೆಗೆ ಹೆಸರು ಬದಲಾಯಿಸುವುದು ಅನಗತ್ಯ ಎಂದು ಒತ್ತಿ ಹೇಳಿದ ಅವರು; ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡಿದ್ದರೆ ಒಂದು ಹೆಸರು ಅವರಿಗೆ ಬಂದಿರುತ್ತಿತ್ತು. ಅದರ ಬದಲು ಜಿಲ್ಲೆಯ ಹೆಸರನ್ನೇ ಅಳಿಸಿ ಹಾಕಲು ಹುನ್ನಾರ ನಡೆಸಿದ್ದಾರೆ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...