ಬಿಜೆಪಿಯಲ್ಲಿ ಗಂಡಸರಿದ್ದರೆ ಅನ್ಯಾಯದ ವಿರುದ್ಧ ದನಿ ಎತ್ತಲಿ: ಮಾಗಡಿ ಶಾಸಕ ಎಚ್‌ ಸಿ ಬಾಲಕೃಷ್ಣ

Date:

“ಬಿಜೆಪಿಯಲ್ಲಿ ಗಂಡಸರಿದ್ದರೆ ಅನ್ಯಾಯದ ವಿರುದ್ಧ ದನಿ ಎತ್ತಲಿ. ನಮ್ಮ ಪಾಲಿನ ಅನುದಾನಕ್ಕಾಗಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ನೋಡಿಯಾದರೂ ಭಾಗಿಯಾಗಲಿ” ಎಂದು ಮಾಗಡಿ ಶಾಸಕ ಎಚ್‌ ಸಿ ಬಾಲಕೃಷ್ಣ ಸವಾಲು ಹಾಕಿದರು.

ರಾಮನಗರ ತಾಲ್ಲೂಕಿನ ನಾಗರಕಲ್ಲುದೊಡ್ಡಿ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಸಚಿವರು ಹಾಗೂ ಸಂಸದರು, ದೆಹಲಿಗೆ ಹೋಗಿ ಟಿ.ಎ ಮತ್ತು ಡಿ.ಎ ತಗೊಂಡು ಬರ್ತಾರಷ್ಟೆ. ಇವರೆಲ್ಲಾ ಷೋ ಪೀಸ್‌ಗಳು. ತಮ್ಮ ಹಕ್ಕಿಗಾಗಿ ತಮಿಳುನಾಡು ಸಂಸದರು ಹೇಗೆ ದನಿ ಎತ್ತುತ್ತಾರೆ ಎಂಬುದನ್ನು ನೋಡಿ ಕಲಿಯಲಿ” ಎಂದು ಕುಟುಕಿದರು.

“ಬಿಜೆಪಿಯವರು ದನಿ ಕಳೆದುಕೊಂಡಿರುವುದರಿಂದ ಅನುದಾನಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇದರ ಅರ್ಥ ಬಿಜೆಪಿಯಲ್ಲಿ ಗಂಡಸರಿಲ್ಲ ಎಂದರ್ಥ. ಅನುದಾನದ ವಿಷಯದಲ್ಲಿ ಅನ್ಯಾಯ ಸರಿಪಡಿಸದಿದ್ದರೆ ಪ್ರತ್ಯೇಕ ದೇಶದ ದನಿ ಎಳುತ್ತದೆ ಎಂದು ಸಂಸದ ಡಿ ಕೆ ಸುರೇಶ್ ಹೇಳಿರುವುದನ್ನು, ಬಿಜೆಪಿಯವರು ತಿರುಚಿದ್ದಾರೆ ಅಷ್ಟೇ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದಾರೆ, ಅವರು ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

“ಕೇಂದ್ರಕ್ಕೆ ಹೆಚ್ಚು ತೆರಿಗೆ ಪಾವತಿಸುವ ದೇಶದ ಎರಡನೇ ರಾಜ್ಯ ನಮ್ಮದು. ಹೀಗಿದ್ದರೂ, ನಮಗೆ ಕೊಡಬೇಕಾದ ಅನಯದಾನ ಕೊಡುತ್ತಿಲ್ಲ. ರಾಜ್ಯದ ಬಿಜೆಪಿ ಸಚಿವರು ಮತ್ತು ಸಂಸದರಿಗೆ ಪ್ರಧಾನಿ ಮೋದಿ ಅವರ ಮುಂದೆ ನಿಲ್ಲುವುದಕ್ಕೂ ಆಗುವುದಿಲ್ಲ. ವೈಯಕ್ತಿಕ ವರ್ಚಸ್ಸಿಲ್ಲದ ಅವರು, ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ” ಎಂದು ಟೀಕಿಸಿದರು.

“ನಮಗಾಗಿರುವ ಅನ್ಯಾಯಕ್ಕೆ ಹೋರಾಟ ಮಾಡಬೇಕಿದೆ. ಈ ವಿಷಯದಲ್ಲಿ ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ” ಎಂದು ಸವಾಲು ಹಾಕಿದರು.

“ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದಲ್ಲಿ ಸುರೇಶ್ ಅವರನ್ನು ಎದುರಿಸುವಂತಹ ಅಭ್ಯರ್ಥಿ ಇಲ್ಲ. ಅವರ ವಿರುದ್ಧ ಮೈತ್ರಿ ತಂತ್ರ ಫಲ ನೀಡುವುದಿಲ್ಲ. ಬೇಕಿದ್ದರೆ ಎಚ್‌.ಡಿ. ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಮಾಡಲಿ. ಆನಂತರ ಮಾತನಾಡೋಣ. ಸಂಸದರು ಜನಸಾಮಾನ್ಯರ ಜೊತೆ ಬೆರೆತು ಹೇಗೆ ಕೆಲಸ ಮಾಡಬಹುದು ಎಂಬುದನ್ನು ಸುರೇಶ್ ತೋರಿಸಿ ಕೊಟ್ಟಿದ್ದಾರೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...