ದಿಂಗಾಲೇಶ್ವರ ಶ್ರೀಗಳಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ: ಪ್ರಲ್ಹಾದ್‌ ಜೋಶಿ

Date:

ಫಕೀರ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.

ಪ್ರಲ್ಹಾದ್‌ ಜೋಶಿ ಲಿಂಗಾಯತರನ್ನು ತುಳಿದಿದ್ದಾರೆ ಅನ್ನೋ ದಿಂಗಾಲೇಶ್ವರ ಸ್ವಾಮೀಜಿ ಆರೋಪದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಏನಾದರೂ ತಪ್ಪು ಮಾಡಿದ್ದರೆ ನೇರವಾಗಿ ಹೇಳಲಿ ಕ್ಷಮೆ ಕೇಳುತ್ತೇನೆ, ಸ್ವಾಮೀಜಿ ಏನು ಹೇಳಿದರೂ ನನಗೆ ಆಶಿರ್ವಾದ. ಈ ಸಂದರ್ಭದಲ್ಲಿ ನಾನು ಹೆಚ್ಚೇನೂ ಮಾತಾಡಲ್ಲ. ಸ್ವಾಮೀಜಿ ಸಮಯ ಕೊಟ್ಟರೆ ಅವರ ಜೊತೆ ಮಾತನಾಡಲು ನಾನು ಸಿದ್ಧ” ಎಂದು ಹೇಳಿದರು.

“ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಬೇಜಾರಾಗುವಂತೆ ನಾನು ನಡೆದುಕೊಂಡಿಲ್ಲ. ನಾನು ಲೋಕಸಭಾ ಸದಸ್ಯನಾದ ಮೇಲೆ ಕ್ಷೇತ್ರದಲ್ಲಿ ಎಂಟರಲ್ಲಿ ಏಳು ಜನ ಲಿಂಗಾಯತರಿಗೆ ಟಿಕೆಟ್ ಕೊಡಲಾಗಿದೆ. ಎಲ್ಲಾ ಸಮುದಾಯಕ್ಕೂ ನಾವು ಅವಕಾಶ ಕೊಟ್ಟಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಂಗಾಲೇಶ್ವರ ಸ್ವಾಮೀಜಿ ಮಾಡಿದ್ದ ಆರೋಪವೇನು?

“ಬಹುಸಂಖ್ಯಾತ ಲಿಂಗಾಯತ ನಾಯಕರು ತುಳಿತಕ್ಕೊಳಗಾಗಿದ್ದಾರೆ. ಮಹಿಳಾ ಜನಪ್ರತಿನಿಧಿಗಳು ಅವಮಾನಕ್ಕೆ ಒಳಗಾಗಿದ್ದಾರೆ. ಪ್ರಲ್ಹಾದ್‌ ಜೋಶಿಯವರಿಂದ ವೀರಶೈವ ಲಿಂಗಾಯತ ನಾಯಕರಿಗೆ ಅನ್ಯಾಯವಾಗಿದ್ದು, ಲಿಂಗಾಯತರಿಂದ ಆರಿಸಿ ಬಂದಿರುವ ಇವರು ಲಿಂಗಾಯತ ನಾಯಕ ಬೇಕು ಎಂಬ ಹಿನ್ನೆಲೆಯಲ್ಲಿ ಇಂದು ತೀರ್ಮಾನ ಕೈಗೊಳ್ಳಲಾಗಿದ್ದು, ನಮ್ಮ ಸಮಾಜದ ಮೇಲೆ ಚುನಾವಣೆ ಬಂದಾಗ ಮಾತ್ರ ಇವರಿಗೆ ಪ್ರೀತಿ ಯಾಕೆ ಬರುತ್ತದೆ? ಇವರಿಗೆ ಅಧಿಕಾರದ ಮದ ಬಂದಿದೆ. ಧಾರವಾಡ ಮತ ಕ್ಷೇತ್ರದಿಂದ ಜೋಶಿಯವರನ್ನು ದಿ. 31ರೊಳಗೆ ಬದಲಾವಣೆ ಮಾಡದಿದ್ದಲ್ಲಿ ಏ.2 ರಂದು ಮಠಾಧಿಪತಿಗಳು ಮತ್ತೆ ಸಭೆ ಸೇರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...