ಜಾತಿಗಣತಿ ವರದಿ ಬಗ್ಗೆ ಚರ್ಚೆಯಾಗದಿದ್ದರೆ ಸರ್ಕಾರದ‌ ಮೇಲೆಯೇ ಆಪಾದನೆ: ಸಚಿವ ಪರಮೇಶ್ವರ್

Date:

ಜಾತಿಗಣತಿ ವರದಿಯಲ್ಲಿ ಏನು ಬಂದಿದೆ ಎಂಬುದು ಜನಸಮುದಾಯಕ್ಕೆ ಗೊತ್ತಾಗಬೇಕು. ಇದು ಚರ್ಚೆಯಾಗದಿದ್ದರೆ, ವರದಿಯನ್ನೇ ಮುಚ್ಚಿಹಾಕಿದರು ಎಂಬ ಆಪಾದನೆಗಳು ಸರ್ಕಾರದ‌ ಮೇಲೆ ಬರುತ್ತವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ‌ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಾತಿಗಣತಿ ವರದಿಯನ್ನು ಸಚಿವ‌ ಸಂಪುಟದ ಮುಂದೆ ತಂದು, ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು. ತದನಂತರ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ‌” ಎಂದರು.

“ಜಾತಿಗಣತಿ ವರದಿಗೆ 160 ಕೋಟಿ ರೂ. ಖರ್ಚು ಮಾಡಿ, ಜನಸಮುದಾಯದ ಮುಂದೆ ಇಡದೇ ಹೋದರೆ ಹಣ ಖರ್ಚು ಮಾಡಿರುವುದು ಪ್ರಯೋಜನವಾಗುವುದಿಲ್ಲ. ವರದಿಯಲ್ಲಿ ಏನು ಬಂದಿದೆ ಎಂಬುದರ ಕುರಿತಾದರು ಜನರಿಗೆ ಗೊತ್ತಾಗಬೇಕು. ಇಲ್ಲವಾದರೆ ಮುಚ್ಚಿ ಹಾಕಿದರು ಅಂತೆಲ್ಲ ಸರ್ಕಾರದ ಬಗ್ಗೆ ಆಪಾದನೆಗಳು ಬರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾತಿಗಣತಿ ವರದಿ ಜಾರಿ ಮಾಡುವುದು ಬೇರೆ ವಿಚಾರ. ಅದರ ಮಾಹಿತಿ ಹೊರಗಡೆ ಬರಬೇಕಲ್ಲವೇ? ಜಾರಿ ಮಾಡಲು ಆಗುವ ತೀರ್ಮಾನಗಳು ಬೇರೆ‌ ಬೇರೆ ರೀತಿಯಲ್ಲಿ ಆನಂತರ ಆಗುತ್ತವೆ. ಯಾರು ಕೂಡ ಇದರ ಬಗ್ಗೆ ಆತಂಕ‌ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

“ಪಂಚಮಸಾಲಿ, ಒಳ ಮೀಸಲಾತಿ ಮತ್ತು ಜಾತಿಗಣತಿ ವರದಿ ಕುರಿತು ಪ್ರತಿಕ್ರಿಯಿಸಿ, ಎಲ್ಲವನ್ನು ನಿಭಾಯಿಸುವ ಸಾಮಾರ್ಥ್ಯ ಕಾಂಗ್ರೆಸ್ ಪಕ್ಷದ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ. ನಾವೆಲ್ಲರು ಸಹ ಜನಸಮುದಾಯದ ವಿಚಾರಧಾರೆಗಳನ್ನು ಯಾವ ರೀತಿ ತೀರ್ಮಾನ ಮಾಡಬೇಕು ಎಂಬುದರ ಕುರಿತು ಚರ್ಚೆ ಮಾಡಿ, ತೀರ್ಮಾನ ಕೈಗೊಳ್ಳುತ್ತೇವೆ” ಎಂದರು.

“ಮೀಸಲಾತಿ ಶೇ.50 ಮೀರಿ ಹೋಗಬಾರದು ಎಂಬ ಆದೇಶವಿದೆ. ಕೆಲ ರಾಜ್ಯಗಳಲ್ಲಿ ಶೇ.50ರಷ್ಟು ಮೀರಿ ಹೋಗಿದ್ದಾರೆ. ತಮಿಳುನಾಡಿನವರು ಶೇ. 69 ಮೀಸಲಾತಿಯನ್ನು ಕಾನೂನಾತ್ಮಕವಾಗಿ ಮಾಡಿದ್ದಾರೆ. ಸಂವಿಧಾನದ ಶೆಡ್ಯೂಲ್ಡ್ 9ಕ್ಕೆ ಸೇರಿಸಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸಹ ಬೇರೆಬೇರೆ ಸಮುದಾಯಗಳು ಮೀಸಲಾತಿ ಕೇಳುತ್ತಿವೆ. ಅದನ್ನೆಲ್ಲ ಮಾಡಬೇಕಾದರೆ ಶೇ.50ರಷ್ಟು ಮೀರಿ ಹೋಗಬೇಕಾಗುತ್ತದೆ” ಎಂದು ಹೇಳಿದರು.

“ಸಿ‌.ಪಿ.ಯೋಗೇಶ್ವರ್ ಪಕ್ಷಕ್ಕೆ ಬರುವ ವಿಚಾರ ಮಾಹಿತಿ ನನಗೆ ಇಲ್ಲ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ‌ ಗೆಲ್ಲಲು ರಣನೀತಿ ಮಾಡುತ್ತಿದ್ದೇವೆ. ಸಿ.ಪಿ.ಯೋಗೇಶ್ವರ್ ನನಗೆ ಆತ್ಮೀಯ ಸ್ನೇಹಿತ. ಹಿಂದೆ ನಮ್ಮ ಪಕ್ಷದಲ್ಲಿದ್ದಾಗ ಒಳ್ಳೆ ಕೆಲಸಗಳನ್ನು ಮಾಡಿದ್ದಾರೆ. ಅವರು ಪಕ್ಷ ಸೇರ್ಪಡೆ ಆಗುವುದು ಕೆಪಿಸಿಸಿ ಅಧ್ಯಕ್ಷರು ಮತ್ತು ಹೈಕಮಾಂಡ್‌ಗೆ ಬಿಟ್ಟಿರುವ ವಿಚಾರ. ಡಿ.ಕೆ.ಸುರೇಶ್ ಅವರಿಗೆ ಸ್ಪರ್ಧಿಸುವಂತೆ ನಾವೆಲ್ಲ ಒತ್ತಾಯಿಸಿದ್ದೇವೆ. ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡುತ್ತದೆ ಎಂಬುದನ್ನು ನೋಡಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...