ಇಂತಹ ಕೇಂದ್ರ ಸರ್ಕಾರವಿದ್ದರೆ ರಾಜ್ಯಗಳಿಗೆ ಪಂಗನಾಮ: ಸಿದ್ದರಾಮಯ್ಯ ವಾಗ್ದಾಳಿ

Date:

ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತಿರುವುದು ಗುಡ್ ಎಕನಾಮಿಕ್ಸ್. ನಾನು ಗುಡ್ ಎಕನಾಮಿಕ್ಸ್‌ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಉತ್ತರ ನೀಡಿದರು.

“15ನೇ ಹಣಕಾಸು ಆಯೋಗ ರಾಜ್ಯಕ್ಕೆ ಒಟ್ಟಾರೆ 11,495 ಕೋಟಿ ರೂ. ಶಿಫಾರಸ್ಸು ಮಾಡಿದ್ದನ್ನು ರಾಜ್ಯಕ್ಕೆ ಒತ್ತಾಯಿಸಿ ತನ್ನಿ ಎಂದು ಅಂದಿನ ಸರ್ಕಾರಕ್ಕೆ ತಿಳಿಸಿದ್ದೆ. ಕೇಂದ್ರದ ಬಜೆಟ್ 2023-24 ರಲ್ಲಿ ಭದ್ರಾ ಮೇಲ್ದಂಡೆಗೆ 5300 ಕೋಟಿ ರೂ. ನೀಡಲಾಗುವುದು ಎಂದು ಹೇಳಿ ಇದಕ್ಕೆ ಯಾವುದೇ ಷರತ್ತುಗಳನ್ನು ಆಗ ಉಲ್ಲೇಖಿಸಿರಲಿಲ್ಲ. ಈ ಬಗ್ಗೆ ಆ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರೂ ಉಲ್ಲೇಖಿಸಿದ್ದಾರೆ. ಆದರೆ ಈ ವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಹೀಗಾಗಿ ಕೇಂದ್ರದಿಂದ 5300 ಕೋಟಿ ಸಹಾಯಧನವನ್ನು ಬೊಮ್ಮಾಯಿಯವರು ಕೊಡಿಸಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ.50 ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಈಗ ನಾವು ಕಟ್ಟುವ ಪ್ರತಿ ನೂರು ರೂ.ಗೆ 12-13 ರೂ ಮಾತ್ರ ವಾಪಾಸ್ ಬರುತ್ತಿದೆ. ಈ ಅನ್ಯಾಯಗಳ ಬಗ್ಗೆ ಸಂಸದರು ಬಾಯಿಯನ್ನೇ ಬಿಡುವುದಿಲ್ಲ. ಗಢಗಢ ನಡುಗುತ್ತಾರೆ” ಎಂದು ವ್ಯಂಗ್ಯವಾಡಿದರು.

“ಇಂತಹ ಕೇಂದ್ರ ಸರ್ಕಾರವಿದ್ದರೆ ರಾಜ್ಯಗಳು ಪಂಗನಾಮ ಹಾಕಿಕೊಳ್ಳಬೇಕಷ್ಟೇ. ಮೊದಲು ಶೇ.50 ರಾಜ್ಯದ ಪಾಲು ನೀಡಲಿಲ್ಲ ಎನ್ನುತ್ತಿದ್ದ ವಿರೋಧಪಕ್ಷದವರು, ಈಗ ಸರಿಯಾದ ನಮೂನೆ ಸಲ್ಲಿಸಿಲ್ಲ ಎಂದು ನೆಪ ಹೇಳುತ್ತಿದ್ದಾರೆ. ಇದು ಭಂಡತನದ ವಾದ” ಎಂದರು.

ವಿಶೇಷ ಅನುದಾನ

“ಬಜೆಟ್‌ನಲ್ಲಿ ಘೋಷಿಸದ ಅನುದಾನ ಕೇಳಿದರೆ ಸಂಘರ್ಷ ಎನ್ನುತ್ತಾರೆ. ರಾಜ್ಯದ ಜನರ ಪರವಾಗಿ , ರಾಜ್ಯಕ್ಕೆ ನ್ಯಾಯ ಕೋರುವುದು ನಮ್ಮ ಧರ್ಮ. ಇಲ್ಲದಿದ್ದರೆ ಅವರಿಗೆ ದ್ರೋಹ ಬಗೆದಂತೆ” ಎಂದು ಹೇಳಿದರು.

“ಮಧ್ಯಂತರ ವರದಿಯಲ್ಲಿ 5,495 ಕೋಟಿ ರೂ. ಉಲ್ಲೇಖಿಸಲಾಗಿದ್ದು, ಅಂತಿಮ ವರದಿಯಲ್ಲಿ ಇದು ಇಲ್ಲವಾಗಿರುವುದಕ್ಕೆ ಹಣ ನೀಡಿಲ್ಲ ಎಂಬ ವಿವೇಚನೆಯಿಲ್ಲದ ಉತ್ತರವನ್ನು ವಿರೋಧಪಕ್ಷದವರು ನೀಡುತ್ತಿದ್ದಾರೆ. ಇದನ್ನು ಡಬಲ್‌ ಸ್ಟ್ಯಾಂಡರ್ಡ್‌ ಎನ್ನಬೇಕಾಗುತ್ತದೆ” ಎಂದು ಲೇವಡಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

“ಫೆರಿಫೆರಲ್ ರಿಂಗ್ ರೋಡ್ ಹಾಗೂ ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ ಘೋಷಿಸಿದ್ದ 6000 ಕೋಟಿ ರೂ.ಗಳನ್ನೂ ನೀಡಿಲ್ಲ. ಕೇಂದ್ರದಲ್ಲಿ ಮೋದಿ ಪ್ರಧಾನಿಯಾದ ಮೇಲೆ, ಕಾರ್ಪೊರೇಟ್ ತೆರಿಗೆಯನ್ನು 30% ರಿಂದ 22% ಕ್ಕೆ ಇಳಿಸಿದರು. ಆದರೆ ಜನ‌ಸಾಮಾನ್ಯರು ಕಟ್ಟುವ ತೆರಿಗೆಯ ಪಾಲು ಏರಿಕೆಯಾಗಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ರಸಗೊಬ್ಬರ ದರ ಏರಿಕೆಯಾಗಿದೆ. ಜತೆಗೆ ತೆರಿಗೆಯೂ ಹೆಚ್ಚಾಗಿದೆ” ಎಂದು ವಿವರಿಸಿದರು.

“ಎಸ್ ಸಿ ಪಿ-ಟಿಎಸ್ ಪಿ ಕಾನೂನು ತಂದಿದ್ದು ಕಾಂಗ್ರೆಸ್ ನವರು. ಈ ಬಾರಿ ಎಸ್ ಸಿ ಎಸ್ ಟಿ ಗೆ 39 ಸಾವಿರ ಕೋಟಿ ನೀಡಿದ್ದು. ಎಸ್ ಸಿ ಪಿ-ಟಿಎಸ್ ಪಿ ಕಾನೂನನ್ನು ಕೇಂದ್ರದವರು ರಾಷ್ಟ್ರ ಮಟ್ಟದಲ್ಲಿ ಜಾರಿ ಮಾಡಲಿ ನೋಡೋಣ” ಎಂದು ಸವಾಲು ಹಾಕಿದದರು.

“ಕರ್ನಾಟಕ ರಾಜ್ಯದಲ್ಲಿ , ಮುಂಬಡ್ತಿಯಲ್ಲಿ ಮೀಸಲಾತಿ ತಂದಿದ್ದು ನಾವು. ಗುತ್ತಿಗೆದಾರರಿಗೆ ಮೀಸಲಾತಿ ಕಾನೂನು ತಂದಿದ್ದು ನಾವು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗದೆ ಅದರಂತೆ ನಡೆದುಕೊಳ್ಳಲಿ” ಎಂದರು.

“223 ತಾಲ್ಲೂಕುಗಳಲ್ಲಿ ಬರ ಘೋಷಣೆ ಆಗಿದೆ. ಕೇಂದ್ರಕ್ಕೆ 2 ಮನವಿ ನೀಡಿದೆವು. ಕೇಂದ್ರದ ಸಚಿವರುಗಳನ್ನು ನಾವೆಲ್ಲಾ ಭೇಟಿ ಮಾಡಿದರೆ ಯಾವುದೇ ಸ್ಪಂದನೆ ಇಲ್ಲ. ಇದು ಮಲತಾಯಿ ಧೋರಣೆ. ಬರಪರಿಹಾರ 18,171 ಕೋಟಿ ರೂ. ಕೇಳಿದ್ದೇವೆ. 35 ಸಾವಿರ ಕೋಟಿ ರೂ. ಬೆಳೆ ನಷ್ಟ, ಬೆಲೆ ಏರಿಕೆಯ ನಡುವೆಯೂ ಪರಿಹಾರ ಇಲ್ಲ” ಎಂದು ಹೇಳಿದರು.

ಸಂವಿಧಾನದ ವಿರೋಧಿ ಬಿಜೆಪಿ

“ಕೇಂದ್ರ ಸರ್ಕಾರ ರೈತರ , ದಲಿತರ, ಬಡವರ , ಅಲ್ಪಸಂಖ್ಯಾತರ , ಮಹಿಳೆಯರ, ಕಾರ್ಮಿಕರ , ಸಂವಿಧಾನದ ವಿರೋಧಿಯಾಗಿದೆ. ಅದ್ದರಿಂದ ನಾವು ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದ್ದೇವೆ. ನಾವು ಮನುವಾದದಲ್ಲಿ ನಂಬಿಕೆ ಇಟ್ಟಿಲ್ಲ, ಸಂವಿಧಾನದಲ್ಲಿ ನಂಬಿಕೆಯಿಟ್ಟಿರುವವರು ನಾವು. ಸರ್ವಜನಾಂಗದ ಶಾಂತಿಯ ತೋಟ ಎಂಬ ಮಾತಲ್ಲಿ ನಾವು ನಂಬಿಕೆಯಿರಿಸಿದ್ದೇವೆ. ಅದ್ದರಿಂದ ಎಲ್ಲ ವರ್ಗಗಳಿಗೆ ಶಕ್ತಿ ಸಲ್ಲಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...