ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

Date:

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು, ಪಾಕಿಸ್ತಾನ ಬೆಂಬಲಿತರು, ಟಿಪ್ಪು ಸಿದ್ಧಾಂತವಾದಿಗಳು ಹೆಚ್ಚಿದ್ದಾರೆ. ಭಯೋತ್ಪಾದನೆ ಹಾಗೂ ಬಾಂಬ್‌ ಸ್ಫೋಟದಂತಹ ಘಟನೆಗಳು ನಡೆಯುತ್ತಿರುವುದು ಬಹಳ ಆತಂಕಕಾರಿ” ಎಂದರು.

“ಇಡೀ ದೇಶದಲ್ಲಿ ಶ್ರೀರಾಮ ನವಮಿ ಆಚರಣೆ ಮಾಡಲಾಗಿದೆ. ನನ್ನ ಮನೆಯಲ್ಲೂ ರಾಮನವಮಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಜೈ ಶ್ರೀರಾಮ್‌ ಹೇಳಬಾರದು ಅಲ್ಲಾಹು ಅಕ್ಬರ್‌ ಎನ್ನಬೇಕು ಎಂದು ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳಿಗೆ ಬೆಂಗಳೂರಿನಲ್ಲಿ ಕೊಲೆ ಬೆದರಿಕೆ ಹಾಕಿದ್ದಾರೆ. ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಶುರುವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಇಸ್ಲಾಮಿಕ್‌ ಮೂಲಭೂತವಾದಿಗಳ ಕೈಗೆ ಧಾರೆ ಎರೆದುಕೊಟ್ಟಿದ್ದಾರೆ. ಹಿರಿಯ ನಾಯಕ ಲಕ್ಷ್ಮಣ ಸವದಿ ಭಾರತಮಾತೆಗೆ ಜೈ ಎನ್ನಲು ಅನುಮತಿ ಕೇಳುತ್ತಾರೆ. ಡಿ.ಕೆ.ಸುರೇಶ್‌ ಅವರು ಮನೆಯಲ್ಲಿ ರಾಮನ ಪೂಜೆ ಮಾಡಲ್ಲ ಎನ್ನುತ್ತಾರೆ. ಅವರು ಕಲ್ಲು ಬಂಡೆಯನ್ನೇ ಪೂಜೆ ಮಾಡಲು ಇಟ್ಟುಕೊಳ್ಳಬಹುದು. ರಾಮ ಇಲ್ಲದೆ ಹನುಮನಿಲ್ಲ, ಹನುಮ ಇಲ್ಲದೆ ರಾಮನಿಲ್ಲ. ಇಡೀ ದೇಶದಲ್ಲಿ ಎಲ್ಲ ಕಡೆ ಹನುಮನ ದೇವಸ್ಥಾನವಿದೆ. ಈ ರೀತಿ ಹಿಂದೂಗಳನ್ನು ಅವಹೇಳನ ಮಾಡಿ ಈಗ ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ” ಎಂದು ಆರೋಪಿಸಿದರು.

“ಹಿಂದೂಗಳು ಕರ್ನಾಟಕದಲ್ಲಿ ಭಯದಿಂದ ಬದುಕುವ ವಾತಾವರಣ ಸೃಷ್ಟಿಯಾಗಿದೆ. ಚಿಕ್ಕಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರು ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ನಿಮ್ಮನ್ನು ರಕ್ಷಣೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಸರ್ಕಾರ ಮೂಲಭೂತವಾದಿಗಳಿಗೆ ತಿಳಿಸಿದ್ದಾರೆ. ಆದ್ದರಿಂದಲೇ ಹಿಂದೂಗಳನ್ನು ಬಹಿರಂಗವಾಗಿ ಬೆದರಿಸಲಾಗುತ್ತಿದೆ. ಬಹುಸಂಖ್ಯಾತರನ್ನು ಸರ್ಕಾರ ಕಡೆಗಣಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ರೀತಿ ಬೆದರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಕಾಟಾಚಾರಕ್ಕೆ ಪ್ರಕರಣ ದಾಖಲಿಸಿ ನಂತರ ಬಿಡುಗಡೆ ಮಾಡಲಾಗುತ್ತಿದೆ. ಮತಬ್ಯಾಂಕ್‌ಗಾಗಿ ಇಂಥವರನ್ನು ಕಾಪಾಡುವುದು ಮುಂದಿನ ದಿನಗಳಲ್ಲಿ ದೊಡ್ಡ ಅಪಾಯವಾಗಿ ಪರಿಣಮಿಸಲಿದೆ. ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿ ಇರಬೇಕೆಂದೇ ನಾವು ಬಯಸುತ್ತೇವೆ” ಎಂದರು.

ರಾಜ್ಯಕ್ಕೆ ದರಿದ್ರ ಬಂದಿದೆ

“ಸಿಎಂ ಸಿದ್ದರಾಮಯ್ಯ ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಆದರೆ ಡಿ.ಕೆ.ಸುರೇಶ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಏನು ಮಾತಾಡಿದ್ದಾರೆ ಎಂದು ನೋಡಲಿ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದರಿದ್ರ ಬಂದಿದೆ. ಮೂರು ತಿಂಗಳಿಂದ ಗ್ಯಾರಂಟಿ ಹಣ ಕೊಟ್ಟಿಲ್ಲ, ಆರು ತಿಂಗಳಿಂದ ವಿದ್ಯಾರ್ಥಿವೇತನ ಕೊಟ್ಟಿಲ್ಲ, ಜೂನ್‌ ನಂತರ ಸಂಬಳ ಕೊಡಲೂ ಸರ್ಕಾರದಲ್ಲಿ ದುಡ್ಡಿಲ್ಲ” ಎಂದು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...