‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

Date:

“ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ ತಂದೆಯನ್ನೂ ತಮ್ಮವರು ಎನ್ನುವುದಿಲ್ಲ. ಮೋದಿ-ಯೋಗಿಗಿಂತ ದೊಡ್ಡವರು ಇದ್ದಾರೆ ಎನ್ನುವವರು ದೇಶದ್ರೋಹಿಗಳು” ಎಂದು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಶರ್ಮಾ, ನೋಯ್ಡಾದ ಬುಲಂದ್‌ಶಹರ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿರು. “ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗಿಂತ ದೊಡ್ಡವರು ಯಾರಾದರೂ ಇದ್ದಾರೆ ಎಂದು ಯಾರಾದರೂ ನಂಬಿದ್ದರೆ, ಅವರು ದೇಶದ್ರೋಹಿಗಳು” ಎಂದು ಹೇಳಿದ್ದಾರೆ.

“ಮೋದಿ ಮತ್ತು ಯೋಗಿಯನ್ನು ತಮ್ಮವರೆಂದು ಪರಿಗಣಿಸದವರು ತಮ್ಮ ತಂದೆಯನ್ನು ತಮ್ಮವರೆಂದು ಪರಿಗಣಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಭಾಷಣದ ವೀಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವಾರು ನೆಟ್ಟಿಗರು ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ವ್ಯಂಗ್ಯವಾಡಿದ್ದಾರೆ.

ವಿಡಿಯೋವನ್ನು ಹಂಚಿಕೊಂಡಿರುವ ಅರುಣ್‌ ಖಾನ್ ಎಂಬವರು, “ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಇಂತಹ ಹೇಳಿಕೆಯನ್ನು ನೀಡಲು ಅನುಮತಿ ಇದೆಯೇ” ಎಂದು ಪ್ರಶ್ನಿಸಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ಚುನಾವಣಾ ಆಯೋಗವನ್ನು ಟ್ಯಾಗ್‌ ಮಾಡಿದ್ದಾರೆ.

 

“ಮೋದಿ ಮತ್ತು ಯೋಗಿಗಿಂತ ದೊಡ್ಡ ಹಿತೈಷಿಗಳಿದ್ದಾರೆ ಎಂದು ಯಾರಾದರೂ ನಂಬಿದರೆ ಅವರು ದೇಶದ್ರೋಹಿ ಎಂದು ಬಿಜೆಪಿಯ ನೋಯ್ಡಾ ಸಂಸದ ಮಹೇಶ್ ಶರ್ಮಾ ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ. ಹಲೋ ಚುನಾವಣಾ ಆಯೋಗ ಇಂತಹ ಭಾಷಣವನ್ನು ಅನುಮತಿಸುವಿರೇ?” ಎಂದು ಅವರು ಕೇಳಿದ್ದಾರೆ.

ಮತ್ತೊಬ್ಬ ನೆಟ್ಟಿಗ ದಿಗ್ಯಾಂಶು ಎಂಬವರು ಶರ್ಮಾ ಅವರನ್ನು ‘ಮೋಟರ್‌ಮೌತ್’ ಎಂದು ಕರೆದಿದ್ದಾರೆ. “ನಾನು ಪ್ರಧಾನಿ ಮತ್ತು ನಮ್ಮ ಮುಖ್ಯಮಂತ್ರಿಯನ್ನು ಗೌರವಿಸುತ್ತೇನೆ. ಆದರೆ, ಅವರು ನನ್ನ ದಿವಂಗತ ತಂದೆಯ ಸ್ಥಾನ ಪಡೆಯಲು ಸಾಧ್ಯವಿಲ್ಲ. ಮಹೇಶ್ ಶರ್ಮಾ ಅವರ ಹೇಳಿಕೆಯಿಂದ ತೀವ್ರ ನಿರಾಶೆಗೊಂಡಿದ್ದೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...