ನೀವು ಬೆರಳು ತೋರಿಸಿದರೆ, ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ; ಹರಿಯಾಣದಲ್ಲಿ ಮುಂದುವರೆದ ದ್ವೇಷ ಭಾಷಣ

Date:

ಹರಿಯಾಣ ರಾಜ್ಯದಲ್ಲಿ ಹಿಂದುತ್ವ ಸಂಘಟನೆಯೊಂದರ ಬೃಹತ್ ಸಮಾವೇಶಕ್ಕೆ ಅನುಮತಿ ನೀಡುವಾಗ “ದ್ವೇಷದ ಭಾಷಣ ಮಾಡಬಾರದು” ಎಂಬ ಷರತ್ತು ವಿಧಿಸಿದ ಹೊರತಾಗಿಯೂ ಪಲ್ವಾಲ್ ಜಿಲ್ಲೆಯಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ ಹಾಕಿದ್ದಾರೆ.

ದ್ವೇಷದ ಭಾಷಣ ಮಾಡದಂತೆ ಭಾಷಣಕಾರರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಸಂಘಟಕರು ಹೇಳುತ್ತಿದ್ದಾರೆ, ಆದರೆ ಕೆಲವು ಭಾಷಣಕಾರರು ಅದನ್ನು ನಿರ್ಲಕ್ಷಿಸಿದ್ದಾರೆ.

ಒಬ್ಬ ಭಾಷಣಕಾರ, “ನೀವು ಬೆರಳು ತೋರಿಸಿದರೆ, ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ” ಎಂದು ಹೇಳುವುದು ಕೇಳಿಸಿದೆ. ಆದರೆ ಇನ್ನೊಬ್ಬ ಭಾಷಣಕಾರ ರೈಫಲ್‌ಗಳಿಗೆ ಪರವಾನಗಿ ನೀಡುವಂತೆ ಒತ್ತಾಯಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ವಾರಗಳ ಹಿಂದೆ ಹರಿಯಾಣ ರಾಜ್ಯದ ನೂಹ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಆರು ಜನರು ಸಾವನ್ನಪ್ಪಿದ ನಂತರ ಸಂಘಟನೆಯೊಂದು ಸಭೆ ನಡೆಸುತ್ತಿದೆ.

ಕಳೆದ ತಿಂಗಳು ನೂಹ್‌ನಲ್ಲಿ ದಾಳಿಗೊಳಗಾದ ವಿಶ್ವ ಹಿಂದೂ ಪರಿಷತ್‌ನ ಧಾರ್ಮಿಕ ಮೆರವಣಿಗೆಯನ್ನು ಪೂರ್ಣಗೊಳಿಸುವ ಕುರಿತು ಚರ್ಚಿಸಲು ಇಂದು(ಆಗಸ್ಟ್ 13) ಹಿಂದುತ್ವ ಸಂಘಟನೆಯೊಂದು ಮಹಾಪಂಚಾಯತ್ ಅನ್ನು ನೂಹ್‌ನಲ್ಲಿ ನಡೆಸಲು ಯೋಜಿಸಿತ್ತು. ಆದರೆ, ಪೊಲೀಸರಿಂದ ಅನುಮತಿ ನಿರಾಕರಿಸಿದ ನಂತರ ಅದನ್ನು 35 ಕಿಮೀ ದೂರದ ಪಲ್ವಾಲ್‌ಗೆ ಸ್ಥಳಾಂತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಸಿಎಂ ತವರು ಜಿಲ್ಲೆಯ ಆಸ್ಪತ್ರೆಯಲ್ಲಿ ಮರಣ ಮೃದಂಗ; 12 ಗಂಟೆಯಲ್ಲಿ 17 ರೋಗಿಗಳು ಸಾವು

ಮಹಾಪಂಚಾಯತ್ ಈಗ ಪಲ್ವಾಲ್-ನೂಹ್ ಗಡಿಯಲ್ಲಿರುವ ಪೊಂಡ್ರಿ ಗ್ರಾಮದಲ್ಲಿ ನಡೆಯುತ್ತಿದೆ.ಕೇವಲ 500 ಜನರಿಗೆ ಮಾತ್ರ ಅವಕಾಶ ಒಳಗೊಂಡು ಹಲವು ಷರತ್ತುಗಳ ಮೇಲೆ ಅನುಮತಿ ನೀಡಲಾಗಿದೆ ಎಂದು ಪಲ್ವಾಲ್ ಪೊಲೀಸ್ ವರಿಷ್ಠಾಧಿಕಾರಿ ಲೋಕೇಂದ್ರ ಸಿಂಗ್ ಹೇಳಿದ್ದಾರೆ.

“ಯಾರೊಬ್ಬರು ದ್ವೇಷಪೂರಿತ ಭಾಷಣಗಳನ್ನು ಮಾಡುವುದಿಲ್ಲ. ಯಾರಾದರೂ ಮಾಡಿದರೆ ತಕ್ಷಣವೇ ಪ್ರಕರಣವನ್ನು ದಾಖಲಿಸಲಾಗುತ್ತದೆ. ಯಾರೂ ಆಯುಧಗಳು, ದೊಣ್ಣೆಗಳು, ಲಾಠಿಗಳನ್ನು ಅಥವಾ ಯಾವುದೇ ದಹಿಸುವ ವಸ್ತುವನ್ನು ತರುವಂತಿಲ್ಲ. ಮಧ್ಯಾಹ್ನ 2 ಗಂಟೆಗೆ ಮುಗಿಯಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿತ್ತು” ಎಂದು ಲೋಕೇಂದ್ರ ಸಿಂಗ್ ತಿಳಿಸಿದ್ದಾರೆ.

ನೂಹ್‌ನಲ್ಲಿ ಕೆಲವು ದಿನಗಳ ಹಿಂದೆ ಗಲಭೆ ಉಂಟಾದ ನಂತರ ಸಾರ್ವಜನಿಕ ಸಮಾರಂಭ ಆಯೋಜಿಸುವಾಗ ಸಿಸಿಟಿವಿ, ಭದ್ರತಾ ವ್ಯವಸ್ಥೆ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು.

ಅಲ್ಲದೆ ಇದೇ ವಿಷಯ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಸಹ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...