ಮುಸ್ಲಿಮರು ಭಾರತದಲ್ಲಿರಬೇಕಾದರೆ ಮೋದಿ-ಯೋಗಿ ಹೇಳಿದಂತೆ ಕೇಳಬೇಕು : ನಾಲ್ವರನ್ನು ಕೊಂದ ಕಾನ್‌ಸ್ಟೆಬಲ್

Date:

  • ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್
  • ‘ಟಿವಿ ನಿರೂಪಕರು, ಬಿಜೆಪಿ ನಾಯಕರ ಮುಸ್ಲಿಂ ವಿರೋಧಿ ದ್ವೇಷ ಭಾಷಣ’ದ ಪರಿಣಾಮ ಎಂದ ರಾಣಾ ಅಯ್ಯೂಬ್

‘ನೀವು(ಮುಸ್ಲಿಮರು) ಭಾರತದಲ್ಲಿ ಜೀವಿಸಬೇಕಾದರೆ ಮೋದಿ ಹಾಗೂ ಯೋಗಿ ಹೇಳಿದಂತೆ ಕೇಳಬೇಕು’ ಎಂದು ಜೈಪುರ – ಮುಂಬೈ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಕೊಂದ ಬಳಿಕ ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಆರೋಪಿ, ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್, ಜೈಪುರ – ಮುಂಬೈ ರೈಲಿನಲ್ಲಿ ಸೋಮವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ತನ್ನ ಸ್ವಯಂಚಾಲಿತ ರೈಫಲ್‌ನಿಂದ ಗುಂಡು ಹಾರಿಸಿ, ಮತ್ತೊಬ್ಬ ಆರ್‌ಪಿಎಫ್ ಸಹೋದ್ಯೋಗಿ ಎಎಸ್‌ಐ ಟಿಕಾ ರಾಮ್ ಮೀನಾ ಹಾಗೂ ರೈಲಿನಲ್ಲಿ ಮುಂಬೈಗೆ ತೆರಳುತ್ತಿದ್ದ ಮೂವರು ಪ್ರಯಾಣಿಕರನ್ನು ಕೊಂದು, ಬಳಿಕ ಪರಾರಿಯಾಗಿದ್ದನು. ಆ ನಂತರ ಘಟನೆಯ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಆರೋಪಿಯನ್ನು ಶಸ್ತಾಸ್ತ್ರ ಸಮೇತ ಪೊಲೀಸರು ಬಂಧಿಸಿದ್ದರು.

ಘಟನೆಯ ಬಳಿಕ ರೈಲಿನೊಳಗಿನ ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಪತ್ರಕರ್ತ, ಆಲ್ಟ್‌ ನ್ಯೂಸ್‌ನ ಮುಹಮ್ಮದ್ ಝುಬೇರ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೊಲ್ಲಲ್ಪಟ್ಟ ಮೂವರಲ್ಲಿ ಇಬ್ಬರನ್ನು ಅಬ್ದುಲ್ ಕದಿರ್, ಅಸ್ಗರ್ ಕೈ ಎಂದು ಗುರುತಿಸಲಾಗಿದೆ. ಇನ್ನೊಬ್ಬ ವ್ಯಕ್ತಿಯ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಝುಬೇರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಜೈಪುರ – ಮುಂಬೈ ರೈಲಿನಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದ ಆರ್‌ಪಿಎಫ್‌ ಸಿಬ್ಬಂದಿ

ವಿಡಿಯೋದಲ್ಲಿ ಇನ್ನೊಂದು ಬೋಗಿಯಲ್ಲಿದ್ದ ಮೂವರನ್ನು ಕೊಂದ ಬಳಿಕ ಚೇತನ್ ಸಿಂಗ್ ನೀಡಿರುವ ಮುಸ್ಲಿಂ ವಿರೋಧಿ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನೊಂದು ಬೋಗಿಯಲ್ಲಿದ್ದ ಮುಸ್ಲಿಂ ವ್ಯಕ್ತಿಯನ್ನು ಕೊಂದ ಬಳಿಕ ಹಿಂದಿಯಲ್ಲಿ ಹೇಳಿಕೆ ನೀಡಿರುವ ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್, ”ಹಮಾರೆ ದೇಶ್ ಕಿ ಮೀಡಿಯಾ ಯೆ ಖಬರೇ ದಿಖಾ ರಹೀ ಹೇ, ಪತಾ ಚಲ್ ರಹಾ ಹೈ ಉನ್ಕೊ, ಸಬ್ ಪತಾ ಚಲ್ ರಹಾ ಹೈ, ಇಂಕೆ ಆಕಾ ಹೆ ವಹಾ. ಅಗರ್ ಹಿಂದುಸ್ತಾನ್ ಮೆ ರೆಹನಾ ಹೈ ತೊ ಮೆ ಕೆಹೆತಾ ಹೂ ಮೋದಿ ಔರ್ ಯೋಗಿ, ಏ ದೋನೋಂ, ಔರ್ ಆಪ್‌ಕೆ ಥ್ಯಾಕ್‌ರೆ (ನಮ್ಮ ದೇಶದ ಮಾಧ್ಯಮಗಳು ಎಲ್ಲ ವಾರ್ತೆಗಳನ್ನು ತೋರಿಸುತ್ತಿದ್ದಾರೆ, ಅವರಿಗೆ ಗೊತ್ತಾಗುತ್ತಿದೆ, ಅವರಿಗೆ ಎಲ್ಲವೂ ಗೊತ್ತಾಗ್ತಾ ಇರುತ್ತದೆ. ಒಂದು ವೇಳೆ ಹಿಂದೂಸ್ತಾನದಲ್ಲಿ ಇರಬೇಕಾದರೆ ನಾನು ಹೇಳುತ್ತೇನೆ ಮೋದಿ ಹಾಗೂ ಯೋಗಿ ಮತ್ತು ನಿಮ್ಮ ಠಾಕ್ರೆ ಹೇಳಿದಂತೆ ಇರಬೇಕು) ಎಂದು ಹೇಳಿದ್ದಾನೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾನವ ಹಕ್ಕುಗಳ ಹೋರಾಟಗಾರ್ತಿ ರಾಣಾ ಅಯ್ಯೂಬ್, ಪ್ರಧಾನಿ ಮೋದಿಯವರೇ, ಇದು ನಿಮ್ಮ ಪಕ್ಷದ ನಾಯಕರ ಮುಸ್ಲಿಂ ವಿರೋಧಿ ದ್ವೇಷ ಭಾಷಣದ ಪರಿಣಾಮ. ಇಡೀ ಮುಸ್ಲಿಂ ಸಮುದಾಯವನ್ನು ರಾಕ್ಷಸರನ್ನಾಗಿ ತೋರಿಸುತ್ತಿರುವ ಗೋದಿ ಮಾಧ್ಯಮದ ರಕ್ತಪಿಪಾಸು ಟಿವಿ ನಿರೂಪಕರು ಕೂಡ ಇದಕ್ಕೆ ಕಾರಣ’ ಎಂದು ಟ್ವಿಟ್ಟರ್‌ನಲ್ಲಿ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...