ಭೂ ಅಕ್ರಮ | ರಾಜಕೀಯ ಸೇಡಿನಿಂದ ಜಮೀನು ಸರ್ವೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

Date:

ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಭಾಗ. ಇಷ್ಟು ದಿನ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದೂರಿದರು.

ಬೆಂಗಳೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ, “ಭೂಮಿಯನ್ನು ನಾನು ಖರೀದಿಸಿ 40 ವರ್ಷವಾಗಿದೆ. ಅಷ್ಟೂ ವರ್ಷಗಳಿಂದ ವಿಷಯ ಜೀವಂತವಾಗಿಟ್ಟು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. 1984ರಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದು. ಸಿನಿಮಾ ಹಂಚಿಕೆದಾರನಾಗಿ ದುಡಿದ ಹಣದಲ್ಲಿ ಭೂಮಿಯನ್ನು ಖರೀದಿ ಮಾಡಿದ್ದೇನೆ. ಅಂದಿನಿಂದಲೂ ಈ ಭೂಮಿಯ ಮೇಲೆ ಕೆಲವರ ಕಣ್ಣು ಬಿದ್ದಿದೆ. ನನ್ನನ್ನು ರಾಜಕೀಯವಾಗಿ ಎದುರಿಸಲಾಗದ ಅಸಹಾಯಕತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವೆ ಮೂಲಕ ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.

“1986ರಲ್ಲಿ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ರಾಮಚಂದ್ರ ಅವರುಗಳು ಇದೇ ಜಮೀನು ವಿಷಯದಲ್ಲಿ ಆಗಿನ ಪ್ರಧಾನಮಂತ್ರಿ, ಗೃಹ ಮಂತ್ರಿಯವರಿಗೆ ಪತ್ರ ಬರೆದಿದ್ದರು. ತಮ್ಮ ದೂರಿನಲ್ಲಿ ಅವರು ಕುಮಾರಸ್ವಾಮಿ ಅವರು ಜಮೀನು ಖರೀದಿಸಿದ್ದಾರೆ ಎಂದು ಹೇಳಿದ್ದಾರೆ ಹೊರತು ಕಬಳಿಸಿದ್ದಾರೆ ಎಂದು ಆರೋಪ ಮಾಡಿರಲಿಲ್ಲ. ನಾನು ಖರೀದಿ ಮಾಡಿರುವ ಆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದೇನೆಯೇ ಹೊರತು ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸಿಲ್ಲ. ನನ್ನ ಬಳಿ ಎಲ್ಲ ದಾಖಲೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಸಂಪತ್ತನ್ನು ರಕ್ಷಿಸುವವನ ರೀತಿ ವರ್ತಿಸುವ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಎನ್ನುವ ವ್ಯಕ್ತಿ ನನ್ನ ಜಮೀನು ವಿಷಯದ ಬಗ್ಗೆ ಆರೋಪ ಮಾಡಿದ್ದಾರೆ. ಆದರೆ, ರಾಜ್ಯ ಹೈಕೋರ್ಟ್ ನಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ.‌ ಈ ಸರಕಾರ ಕೆಲವರನ್ನು ಕರೆತಂದು ನನ್ನ ಮೇಲೆ ಆರೋಪ ಮಾಡಿಸುವ ಕೆಲಸ ಮಾಡುತ್ತಿದೆ. ಅವರೆಲ್ಲ ಈಗ ಎಲ್ಲಿಂದ ಉದ್ಭವ ಆದರು ಎಂದು ಗೊತ್ತಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಸಿಎಂ ಮೇಲೆ ವಾಗ್ದಾಳಿ

ಸಿಎಂ ಅವರು ದೇವೆಗೌಡರ ಬಗ್ಗೆ ಮಾತನಾಡುವ ಮುನ್ನ ಅವರು ತಮ್ಮ ಯೋಗ್ಯತೆ ಅರಿತುಕೊಂಡು ಮಾತನಾಡಲಿ. ರಾಜ್ಯದ ನೀರಾವರಿಗೆ ದೇವೇಗೌಡರು ಏನು ಮಾಡಿದ್ದಾರೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಸಿದ್ದರಾಮಯ್ಯ ಏನು ಮಾಡಿದ್ದಾರೆ ಎನ್ನುವುದು ಜನರಿಗೆ ಗೊತ್ತಿದೆ. ದೇವೇಗೌಡರು ನೀರಾವರಿ ಬಗ್ಗೆ, ರಾಜ್ಯದ ಜನತೆಯ ರಕ್ಷಣೆ ಮಾಡುವುದಕ್ಕೆ ಇವರಿಂದ ಹೇಳಿಸಿಕೊಳ್ಳಬೇಕಿಲ್ಲ. ಸಿದ್ದರಾಮಯ್ಯ ಅವರೇ, ಈ ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ನಿಮ್ಮ ಕೊಡುಗೆ ಏನು? ನೀರಾವರಿಗೆ ನಿಮ್ಮ ಕೊಡುಗೆ ಏನು” ಎಂದು ಪ್ರಶ್ನಿಸಿದರು.

ಡಿಕೆಶಿ ವಿರುದ್ದ ಸಚಿವರ ವಾಗ್ದಾಳಿ

“ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜ್ಯಕ್ಕೆ ಅವರ ಕೊಡುಗೆ ಏನು? ದುಡ್ಡು ಹೊಡೆದಿರುವುದೇ ಅವರ ಕೊಡುಗೆ. ಇನ್ನೊಂದು ವಾರ ನೋಡೋಣ‌. ಈ ಸರಕಾರ ಏನೇನು ಮಾಡುತ್ತದೆ ಎಂದು. ಆಮೇಲೆ ಮಾತನಾಡುತ್ತೇನೆ. ರಾಜ್ಯದ ಸಮಸ್ಯೆಗಳ ಬಗ್ಗೆ ಇವರ ಗಮನವೇ ಇಲ್ಲ” ಎಂದು ಟೀಕಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ ಸೂಚನೆಯಂತೆ ಸೋಮವಾರ ರಾಮನಗರ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿ ತೋಟದ ಸುತ್ತ ಕಂದಾಯ ಇಲಾಖೆಯಿಂದ ಸರ್ವೆ ಕಾರ್ಯ ಪೂರ್ಣಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...