ಅಕ್ರಮ ಆಸ್ತಿ ಪ್ರಕರಣ | ಬಿಜೆಪಿ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌

Date:

  • ತಮ್ಮ ಮೇಲೆ ದಾಖಲಾಗಿರುವ ದೂರು ರದ್ದುಪಡಿಸುವಂತೆ ಹೈಕೋರ್ಟ್ ಗೆ ಅರ್ಜಿ
  • 2015ರಲ್ಲಿ ಗುರುಪಾದಯ್ಯ ಮಠದ್ ಎಂಬುವರಿಂದ ಲೋಕಾಯುಕ್ತದಲ್ಲಿ ದೂರು

ಆದಾಯಕ್ಕಿಂತಲು ಹೆಚ್ಚಿನ ಆಸ್ತಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಮೇಲೆ ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರಿಂದ ದಾಖಲಾಗಿದ್ದ ಪ್ರಕರಣವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಶಾಸಕ ರೇಣುಕಾಚಾರ್ಯ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಮೂಲದ ಗುರುಪಾದಯ್ಯ ಮಠದ್ ಎಂಬುವರು ದೂರ ಸಲ್ಲಿಸಿದ್ದರು.

ತಮ್ಮ ದೂರಿನಲ್ಲಿ ರೇಣುಕಾಚಾರ್ಯ ಅವರು “ಹೊನ್ನಾಳಿಯಿಂದ ನಾಮಪತ್ರ ಸಲ್ಲಿಸಿದಾಗ ತಮ್ಮ ಬಳಿ 2004ರಲ್ಲಿ 26.07 ಲಕ್ಷ, 2008ರ ಚುನಾವಣೆಗೆ 73.97 ಲಕ್ಷ ರೂ. 2013ರಲ್ಲಿ ಅವರ ಆಸ್ತಿ 4.95 ಕೋಟಿ ರೂ. ಆಸ್ತಿ ಇದೆ ಎಂದು ಅಫಿಡೆವಿಟ್‌ ಸಲ್ಲಿಸಿದ್ದಾರೆ” ಎಂದು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದರನ್ವಯ ರೇಣುಕಾಚಾರ್ಯ ಸಚಿವರಾಗಿದ್ದ ವೇಳೆ ಆದಾಯ ಮತ್ತು ಆಸ್ತಿಯಲ್ಲಿ ಏರಿಕೆಯಾಗಿದೆ ಎಂದು ಆರೋಪಿಸಿ ಲೋಕಾಯುಕ್ತ ಪೊಲೀಸರಿಗೆ 2015ರ ಏಪ್ರಿಲ್‌ 28ರಂದು ಖಾಸಗಿ ದೂರು ಸಲ್ಲಿಸಿದ್ದರು.

ದೂರಿನ ಅನ್ವಯ ರೇಣುಕಾಚಾರ್ಯ ವಿರುದ್ಧ 2015ರಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ, ಅಂತಿಮ ವರದಿ ಸಿದ್ಧಪಡಿಸಿದ್ದರು.

ಆರೋಪಿಯು ಜನಪ್ರತಿನಿಧಿಯಾಗಿರುವುದರಿಂದ, ತಮ್ಮ ವರದಿ ಸಲ್ಲಿಸಲು ಸಮಕ್ಷ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕೆಂಬ ನಿಯಮವಿರುವುದರಿಂದ ಈ ಅನುಮತಿಗಾಗಿ ಕಾಯುತ್ತಿದ್ದರು.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

ಆದರೆ, ಶಾಸಕ ರೇಣುಕಾಚಾರ್ಯ ಅವರು ತಮ್ಮ ಮೇಲೆ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಕೆ ನಟರಾಜನ್ ಅವರ ಪೀಠವು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು.

ಪ್ರಕರಣದ ಆರೋಪಿಯಾಗಿರುವ ರೇಣುಕಾಚಾರ್ಯ ಜನಪ್ರತಿನಿಧಿಯಾಗಿರುವುದರಿಂದ, ಇವರ ವಿರುದ್ಧ ವರದಿ ಸಲ್ಲಿಸಲು ಸಮಕ್ಷ ಪ್ರಾಧಿಕಾರದ ಪೂರ್ವಾನುಮತಿ ಪಡೆಯಲುಯ ಲೋಕಾಯುಕ್ತ ಪೊಲೀಸರು ಪ್ರಾಧಿಕಾರ ಅನುಮತಿಗೆ ಅರ್ಜಿ ಸಲ್ಲಿಸಿದ್ದಾರೆ.

ಇದಕ್ಕೆ ಒಪ್ಪಿಗೆ ಸಿಕ್ಕ ಕೂಡಲೇ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ. ಇಂತಹ ಸಮಯದಲ್ಲಿ ಆರೋಪಿ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...