ಅಕ್ರಮ ಆಸ್ತಿ ಗಳಿಕೆ ಪ್ರಕರಣ | ಸಚಿವ ಜಮೀರ್‌ ಅ‌ಹಮದ್ ಖಾನ್‌ಗೆ ಲೋಕಾಯುಕ್ತ ನೋಟಿಸ್

Date:

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್‌ ಅ‌ಹಮದ್‌ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಕಚೇರಿ ನೋಟಿಸ್ ಜಾರಿಗೊಳಿಸಿದೆ.

ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್‌ ನೀಡಿದ್ದಾರೆ. ಇ.ಡಿ ದಾಳಿಯ ಬಳಿಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ.

ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ. ಯಾವುದೇ ಸಬೂಬು ಹೇಳದೆ ಖುದ್ದು ತಾವೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಜಮೀರ್‌ ಅವರಿಗೆ ಲೋಕಾಯುಕ್ತ ಪೊಲೀಸರು ಹೇಳಿರುವುದಾಗಿ ತಿಳಿದು ಬಂದಿದೆ. ಇದರೊಂದಿಗೆ ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಜಮೀ‌ಅವರಿಗೆ ಮತ್ತೆ ಪೊಲೀಸರ ತನಿಖೆ ಬಿಸಿ ಎದುರಾಗಿದ್ದು, ತಮ್ಮ ಹಣಕಾಸು ವ್ಯವಹಾರದ ಕುರಿತು ಲೆಕ್ಕವನ್ನು ಲೋಕಾಯುಕ್ತಕ್ಕೆ ಸಚಿವರು ಸಲ್ಲಿಸಬೇಕಿದೆ. ತಮ್ಮ ಮೇಲಿನ ಆದಾಯಕ್ಕೂ ಅಧಿಕ ಆಸ್ತಿ ಗಳಿಸಿದ ಆರೋಪದ ವಿಚಾರಣೆಗೆ ಪೂರಕ ದಾಖಲೆ ಸಮೇತ ಬರಲು ಸಚಿವರಿಗೆ ಕಾಲಾವಕಾಶ ನೀಡಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರದ ನಾಗಾ, ಕುಕಿಗಳೂ ಬುಡಕಟ್ಟು ಜನರು ಎಂದು ಪ್ರಧಾನಿಗೆ ನೆನಪಿಸಬೇಕಿದೆ

ಮೂರು ವಾರ ಸಮಯದಲ್ಲಿ ಅವರು ಪುರಾವೆ ಸಂಗ್ರಹಿಸಿ ಬರಲಿ. ವಿಚಾರಣೆ ವೇಳೆ ಅವರು ನೀಡುವ ಹೇಳಿಕೆ ಹಾಗೂ ಸಲ್ಲಿಸುವ ದಾಖಲೆಗಳನ್ನು ಪರಾಮರ್ಶಿಸಿ ಮುಂದಿನ ತನಿಖೆ ನಡೆಸಲಾಗುತ್ತದೆ. ತಪ್ಪು ಮಾಹಿತಿ ನೀಡಿದ್ದರೆ ಲೆಕ್ಕಪರಿಶೋಧನೆ ವೇಳೆ ಸತ್ಯಾಸತ್ಯತೆ ಗೊತ್ತಾಗಲಿದೆ.

ಈ ಹಿಂದೆ ಇದೇ ಪ್ರಕರಣ ವಿಚಾರವಾಗಿ ಜಮೀ‌ರ್ ಅವರನ್ನು ಎಸಿಬಿ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದರು. ಅಲ್ಲದೆ ಸಚಿವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ ಇನ್ನಿತರ ಸ್ಥಳಗಳ ಮೇಲೆ ಎಸಿಬಿ ದಾಳಿ ಸಹ ನಡೆಸಿ ದಾಖಲೆಗಳನ್ನು ಸಂಗ್ರಹಿಸಿತ್ತು. ತರುವಾಯ ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...