ನನ್ನನ್ನು ಕ್ಷಮಿಸಿ, ವಿಷಾದಿಸುತ್ತೇನೆ; ಮಣಿಪುರ ಹಿಂಸಾಚಾರದ ಬಗ್ಗೆ ಸಿಎಂ ಬಿರೇನ್ ಸಿಂಗ್ ಹೇಳಿಕೆ

Date:

ಮಣಿಪುರದಲ್ಲಿ ಕಳೆದ ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಗಳು ನಡೆಯುತ್ತಿದೆ. 200ಕ್ಕೂ ಅಧಿಕ ಮಂದಿ ಈ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಕಳೆದ ವರ್ಷ ಪ್ರಾರಂಭವಾಗಿ ಹಿಂಸಾಚಾರಕ್ಕೆ ಈ ವರ್ಷದ ಅಂತ್ಯದಲ್ಲಿ ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ಕ್ಷಮೆಯಾಚಿಸಿದ್ದಾರೆ.

“ನನ್ನನ್ನು ಕ್ಷಮಿಸಿ, ವಿಷಾದಿಸುತ್ತೇನೆ” ಎಂದು ಹೇಳಿರುವ ಮಣಿಪುರ ಸಿಎಂ, ಹೊಸ ವರ್ಷದಲ್ಲಿ ಎಲ್ಲವೂ ಸರಿಯಾಗುವ ಆಶಯ ವ್ಯಕ್ತಪಡಿಸಿದ್ದಾರೆ. 2025ರಲ್ಲಿ ರಾಜ್ಯವು ಸಹಜ ಸ್ಥಿತಿಗೆ ಮರಳುತ್ತದೆ ಎಂದು ಭರವಸೆ ಇದೆ ಎಂದಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ ಸಿಎಂ ನಿವಾಸಕ್ಕೆ ದಾಳಿ ಯತ್ನ; ಬಿರೇನ್ ಸಿಂಗ್‌ ಸರ್ಕಾರಕ್ಕೆ 24 ಗಂಟೆಗಳ ಅಂತಿಮ ಗಡುವು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಡೀ ವರ್ಷ ಅತ್ಯಂತ ದುರದೃಷ್ಟಕರವಾಗಿತ್ತು. ಕಳೆದ ಮೇ 3ರಿಂದ ಇಂದಿನವರೆಗೆ ಏನಾಗುತ್ತಿದೆಯೋ ಆ ವಿಚಾರದಲ್ಲಿ ನಾನು ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ. ಅನೇಕರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅನೇಕ ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ನನಗೆ ವಿಷಾದವಿದೆ, ನಾನು ಕ್ಷಮೆಯಾಚಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಕಳೆದ ಮೂರ್ನಾಲ್ಕು ತಿಂಗಳಲ್ಲಿ ರಾಜ್ಯವು ಶಾಂತಿಯತ್ತ ಸಾಗುತ್ತಿದೆ ಎಂದು ನಾನು ಭಾವಿಸುತ್ತೇನೆ. 2025ರ ವೇಳೆಗೆ ರಾಜ್ಯವು ಸಾಮಾನ್ಯ ಸ್ಥಿತಿಗೆ ಮರಳುತ್ತದೆ ಎಂದು ನಾನು ನಂಬುತ್ತೇನೆ” ಎಂದು ಮುಖ್ಯಮಂತ್ರಿ ಹೇಳಿದರು.

ಇದನ್ನು ಓದಿದ್ದೀರಾ? ಮಣಿಪುರ | ಮತ್ತೆ ಮತ್ತೆ ಭುಗಿಲೇಳುತ್ತಿರುವ ಹಿಂಸಾಚಾರ; 356 ವಿಧಿ ಜಾರಿ ಅನಿವಾರ್ಯ

“ಹಿಂದಿನ ತಪ್ಪುಗಳನ್ನು ಕ್ಷಮಿಸಬೇಕು, ಮರೆತುಬಿಡಬೇಕು ಎಂದು ರಾಜ್ಯದ ಎಲ್ಲಾ ಸಮುದಾಯಗಳಿಗೆ ನಾನು ಮನವಿ ಮಾಡಲು ಬಯಸುತ್ತೇನೆ. ನಾವು ಶಾಂತಿಯುತ ಮತ್ತು ಸಮೃದ್ಧ ಮಣಿಪುರದ ಕಡೆಗೆ ಹೊಸ ಜೀವನವನ್ನು ಪ್ರಾರಂಭಿಸಬೇಕು. ಮಣಿಪುರದ ಎಲ್ಲಾ 35 ಬುಡಕಟ್ಟು ಜನಾಂಗದವರು ಸಾಮರಸ್ಯದಿಂದ ಬದುಕಬೇಕು” ಎಂದು ಮನವಿ ಮಾಡಿದರು.

ಮಣಿಪುರದಲ್ಲಿ ಕಳೆದ ವರ್ಷ (2023) ಮೇ ತಿಂಗಳಿನಲ್ಲಿ ಹಿಂಸಾಚಾರ ಆರಂಭವಾಗಿದ್ದು 200ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಈವರೆಗೂ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಒಂದು ಬಾರಿಯೂ ಭೇಟಿ ನೀಡಿಲ್ಲ. ಇದರಿಂದಾಗಿ ನಿರಂತರವಾಗಿ ವಿಪಕ್ಷಗಳ ವಾಗ್ದಾಳಿಗೆ ಒಳಗಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...