ಟೌನ್‌ಶಿಪ್, ವಿಲ್ಲಾ ಯೋಜನೆಗೆ ತಕ್ಷಣವೇ ಜಮೀನು ಗುರುತಿಸಿ: ವಸತಿ ಸಚಿವ ಝಮೀರ್ ಅಹಮದ್

Date:

  • ಕಾಲಮಿತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳ ತಂಡ ರಚನೆ
  • ಕರ್ನಾಟಕ ಗೃಹಮಂಡಳಿಯ ಪ್ರಗತಿ ಪರಿಶೀಲನಾ ಸಭೆ

ಕರ್ನಾಟಕ ಗೃಹ ಮಂಡಳಿ ವತಿಯಿಂದ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿರುವ ಟೌನ್‌ಶಿಪ್ ಹಾಗೂ ವಿಲ್ಲಾ ಯೋಜನೆಗೆ ಅಗತ್ಯ ಜಮೀನು ಗುರುತಿಸುವ ಕಾರ್ಯ ತಕ್ಷಣವೇ ಆರಂಭಿಸುವಂತೆ ವಸತಿ ಸಚಿವ ಝಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಬುಧವಾರ ಕರ್ನಾಟಕ ಗೃಹಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಧಾನಿಯ ಐದು ಕಡೆ ತಲಾ ಎರಡು ಸಾವಿರ ಎಕರೆಯಲ್ಲಿ ಟೌನ್‌ಶಿಪ್ ಹಾಗೂ ತಲಾ 500 ಎಕರೆಯಲ್ಲಿ ನಾಲ್ಕು ಕಡೆ ವಿಲ್ಲಾ ಯೋಜನೆಗೆ ಜಮೀನು ಗುರುತಿಸಿ ಪ್ರಕ್ರಿಯೆ ಆರಂಭಿಸಬೇಕು. ಅದಕ್ಕಾಗಿ ಅಧಿಕಾರಿಗಳ ವಿಶೇಷ ತಂಡ ರಚಿಸಬೇಕು ಎಂದು ನಿರ್ದೇಶನ ನೀಡಿದರು.

ಟೌನ್‌ಶಿಪ್ ಹಾಗೂ ವಿಲ್ಲಾ ಯೋಜನೆ ಕಾಲ ಮಿತಿಯಲ್ಲಿ ಪೂರ್ಣಗೊಳ್ಳಬೇಕಾಗಿದೆ. ಹೀಗಾಗಿ ರೂಪುರೇಷೆ ಹಾಕಿಕೊಂಡು ಪ್ರತ್ಯೇಕ ವಿಭಾಗ ರಚನೆ ಮಾಡಿ, ಕಾರ್ಯ ಪ್ರವೃತ್ತರಾಗಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಧಾನಿಯ ನಾಲ್ಕು ಕಡೆ ಮೆಟ್ರೋ ಸೇರಿ ಸಾರಿಗೆ ಹಾಗೂ ಇತರೆ ಮೂಲ ಸೌಕರ್ಯ ವ್ಯವಸ್ಥೆ ಲಭ್ಯ ಇರುವ ಕಡೆ ಜಮೀನು ಗುರುತಿಸಿ 50:50 ಆಧಾರದಲ್ಲಿ ಜಮೀನು ಮಾಲೀಕರ ಜತೆ ಒಪ್ಪಂದ ಮಾಡಿಕೊಂಡು, ಬಡಾವಣೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕು ಎಂದು ಸೂಚಿಸಿದರು.

ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಹೊರತುಪಡಿಸಿ ಇತರೆ ಕಡೆ ಬಿಪಿಎಲ್ ಕುಟುಂಬಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಅಥವಾ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸಬೇಕು ಎಂಬ ಚಿಂತನೆ ಇದೆ. ಈ ಬಗ್ಗೆ ಎಲ್ಲ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ವರದಿ ಕೊಡಿ ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು.

ಸರ್ಕಾರದಿಂದ ಜಮೀನು ಪಡೆದು, ಬಡಾವಣೆ ಅಭಿವೃದ್ಧಿ ಅಥವಾ ನಾವೇ ಮಾಲೀಕರ ಜತೆ 50:50 ಒಪ್ಪಂದದಡಿ ಬಡಾವಣೆ ಅಭಿವೃದ್ಧಿಪಡಿಸಿ ಬಡ ಕುಟುಂಬಗಳಿಗೆ ಸೂರು ಕಲ್ಪಿಸಬಹುದೇ ಎಂಬ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಿ, ಆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಜಮೀನು ಸ್ವಾಧೀನ ಸೇರಿದಂತೆ ನ್ಯಾಯಾಲಯದಲ್ಲಿರುವ 122 ವ್ಯಾಜ್ಯ ಇತ್ಯರ್ಥಕ್ಕಾಗಿ ಅದಾಲತ್ ಮಾದರಿಯಲ್ಲಿ ಅರ್ಜಿದಾರರ ಜತೆ ಸಂಧಾನ ಸಭೆ ಏರ್ಪಡಿಸಲು ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ಗೃಹ ಮಂಡಳಿ ಯೋಜನೆಗಳು, ಅದರ ಸ್ಥಿತಿಗತಿ, ಲಭ್ಯವಿರುವ ಜಮೀನು, ನ್ಯಾಯಾಲಯದಲ್ಲಿರುವ ಪ್ರಕರಣ ಕುರಿತು ಸಮಗ್ರ ವರದಿ ನೀಡುವಂತೆ ತಿಳಿಸಿದರು.

ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳ ಸ್ಥಿತಿಗತಿ ಕುರಿತು ಇದೇ ವೇಳೆ ಮಾಹಿತಿ ಪಡೆದರು.

ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಗೃಹ ಮಂಡಳಿ ಆಯುಕ್ತರಾದ ಕವಿತಾ ಮನ್ನಿ ಕೇರಿ, ಪ್ರಧಾನ ಅಭಿಯಂತರ ಶರಣಪ್ಪ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...