ಅನೈತಿಕ ಪೊಲೀಸ್ ಗಿರಿ : ಪಶ್ವಿಮ ವಲಯ ಪೊಲೀಸರೊಂದಿಗೆ ಗೃಹ ಸಚಿವರ ಸಭೆ

Date:

  • ಸೋಮೇಶ್ವರ ಬೀಚ್‌ನಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣದ ಹಿನ್ನೆಲೆ
  • ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿರುವ ಗೃಹ ಸಚಿವ ಜಿ ಪರಮೇಶ್ವರ್

ಮಂಗಳೂರಿನ ಸೋಮೇಶ್ವರ ಬೀಚ್‌ನಲ್ಲಿ ನಡೆದ ಅನೈತಿಕ ಪೊಲೀಸ್‌ಗಿರಿಯಲ್ಲಿ ಆರಕ್ಷಕರ ವಿರುದ್ದವೇ ಸಂತ್ರಸ್ಥರು ದೂರು ದಾಖಲಿಸಿದ್ದಾರೆ. ಈ ವಿಚಾರದ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಇಂದು (ಜೂನ್ 6) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ.

ಗೃಹ ಸಚಿವರ ಭೇಟಿ ಈಗ ಕುತೂಹಲ ಕೆರಳಿಸಿದೆ. ಪೊಲೀಸ್ ಅಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಿದ ಡಾ.ಜಿ. ಪರಮೇಶ್ವರ್, ನಾಗರಿಕರೊಂದಿಗೆ ಪೊಲೀಸರು ಸೌಜನ್ಯ ಹಾಗೂ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದಿದ್ದರು. ಜನರಿಗೆ ಕೊಂಚ ತೊಂದರೆಯಾದರೂ ಸಹಿಸುವುದಿಲ್ಲ ಎಂದಿದ್ದ ಅವರು, ಹಾಗೆಯೇ ನಾಗರಿಕರೂ ಪೊಲೀಸ್ ಜೊತೆ ಸಹಕಾರಯುತವಾದ ಬಾಂಧವ್ಯ ಹೊಂದಬೇಕೆಂದು ಹೇಳಿದ್ದರು.

ಈಗ ಅವರದ್ದೇ ಇಲಾಖೆ ಅಧಿಕಾರಿಗಳ ಮೇಲೆ ದಾಖಲಾಗಿರುವ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಗೃಹ ಸಚಿವರು ಯಾವ ಪ್ರತಿಕ್ರಿಯೆ ನೀಡುತ್ತಾರೆನ್ನುವುದು ಈಗ ಕುತೂಹಲ ಹುಟ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿನ ತಮ್ಮ ಎರಡು ಜಿಲ್ಲಾ ಪ್ರವಾಸಗಳಲ್ಲಿ ಪಶ್ಚಿಮ ವಲಯದ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಪರಮೇಶ್ವರ್, ಇಲ್ಲಿನ ಕಾನೂನು ಸುವ್ಯವಸ್ಥೆ ವಿಚಾರವಾಗಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ಈ ಹಿಂದೆ ಜಿಲ್ಲೆಯಲ್ಲಿ ನಡೆದಿದ್ದ ಕೋಮು ಹತ್ಯೆಗಳ ಬಗ್ಗೆ ಮಾಹಿತಿ, ಹಾಗೂ ಹತ್ಯೆಗೀಡಾದ ಫಾಜಿಲ್, ಜಲೀಲ್, ಮಸೂದ್ ಹತ್ಯೆ ಮರು ತನಿಖೆಗೆ ಅವರ ಕುಟುಂಬ ವರ್ಗ ಸಿಎಂ ಅವರನ್ನು ಒತ್ತಾಯಿಸಿರುವುದು, ಗೃಹ ಸಚಿವರ ಭೇಟಿ ವೇಳೆ ಚರ್ಚೆಗೆ ಬರುವ ಸಾಧ್ಯತೆ ಇದೆ.

ಅನೈತಿಕ ಪೊಲೀಸ್‌ಗಿರಿ ಆರೋಪ

ಮಂಗಳೂರಿನ ಸೋಮೇಶ್ವರ್ ಬೀಚ್‌ನಲ್ಲಿ ಮೂವರು ಯುವತಿಯರು ಹಾಗೂ ಮೂವರು ಯುವಕರು ಜೊತೆಯಲ್ಲಿದ್ದ ಸಂದರ್ಭದಲ್ಲಿ ಸ್ಥಳೀಯ ಕೆಲ ಯುವಕರು ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿತ್ತು. ದೂರಿನನ್ವಯ ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಸುದ್ದಿ ಓದಿದ್ದೀರಾ?: ನೂತನ ದಾಖಲೆ ಹೊಸ್ತಿಲಿನಲ್ಲಿ ಸಿಎಂ ಸಿದ್ದರಾಮಯ್ಯ; ಜುಲೈ 3ರಿಂದ ಬಜೆಟ್ ಅಧಿವೇಶನ

ಆದರೆ ಇದಾದ ಕೆಲವೇ ದಿನಗಳಲ್ಲಿ ಸಂತ್ರಸ್ತ ಯುವಕರ ಮೇಲೆ ಪೊಲೀಸರೇ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಅವರಿಗೆ ಯುವಕನ ಸಂಬಂಧಿ ದೂರು ನೀಡಿದ್ದಾರೆ.

ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್, ಕಾನೂನು ಸುವ್ಯವಸ್ಥೆ ಡಿಸಿಪಿ ಅಂನ್ಶುಕುಮಾರ್ ಅವರಿಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿದ್ದಾರೆ. ಇತ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿರುವ ಗೃಹ ಸಚಿವರು, ನೈತಿಕ ಪೊಲೀಸ್ ಗಿರಿ ಕಡಿವಾಣ ಹಾಕುವ ನಿಟ್ಟಿನಲ್ಲೂ ಸೂಚನೆ ನೀಡುವ ಸಾಧ್ಯತೆ ಹೆಚ್ಚಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...