ಪರಪ್ಪನ ಅಗ್ರಹಾರ | ದುರುಪಯೋಗ ತಡೆಗಟ್ಟಲು ಹೈ ರೆಸಲ್ಯೂಷನ್ ಜಾಮರ್‌ ಅಳವಡಿಕೆ: ಸಚಿವ ಪರಮೇಶ್ವರ್

Date:

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸಲ್ಯೂಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧಾರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

“ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೈ ರೆಸಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್‌ನಿಂದ ಹೊರಗೂ ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು‌. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್‌ಗೆ ಇಳಿಸಲಾಗಿದೆ. ಜಾಮರ್‌ಗಳನ್ನು ತೆಗೆಯುವುದಿಲ್ಲ” ಎಂದು ತಿಳಿಸಿದರು‌.

“ಇಲಾಖೆಯಲ್ಲಿ ಬದಲಾವಣೆಯನ್ನು ತರಲು ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಸನ್ನಡತೆಯ ಬಿಡುಗಡೆ ಹೊಂದಿರುವ ಸತೀಶ್ ಎಂಬಾತ ‘ತಾನು ಕಾನೂನು ಡಿಪ್ಲೋಮಾ ಮುಗಿಸಿದ್ದೇನೆ. ಹೊರಗಡೆ ಹೋದಾಗ ಜೀವನಕ್ಕೆ ಉಪಯೋಗವಾಗುತ್ತದೆ’ ಎಂದು ಹೇಳಿದ್ದಾನೆ‌. ಬಹಳ ಜನ ಪರಿವರ್ತನೆ ಹೊಂದಲು ಇಂತಹ ಅವಕಾಶ ಕಲ್ಪಿಸಿಕೊಡುತ್ತೇವೆ. ಕಾರ್ಪೆಂಟರ್, ಎಲೆಕ್ಟ್ರಿಕ್ ಕೆಲಸ, ಕಂಪ್ಯೂಟರ್ ತರಬೇತಿ ಕಲಿಸಿಕೊಡುತ್ತೇವೆ. ಕೈದಿಗಳು ಬದಲಾವಣೆ ಹೊಂದಲು ಅವಕಾಶವಾಗುತ್ತದೆ” ಎಂದು ಹೇಳಿದರು‌.

ನಟ ದರ್ಶನ್‌ಗೆ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು‌, “ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಆತಿಥ್ಯ ನೀಡಿಲ್ಲ. ಜೈಲಿನಲ್ಲಿರುವ ಎಲ್ಲರಂತೆಯೇ ದರ್ಶನ್‌ಗೆ ವ್ಯವಸ್ಥೆ ಇದೆ. ಬಿರಿಯಾನಿ ಕೊಟ್ಟರು ಎಂದು ಕೆಲವರು ಆರೋಪಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ‌” ಎಂದು ಸ್ಪಷ್ಟಪಡಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...