ಜನರ ಸುರಕ್ಷತೆಗಾಗಿ ರಾಜಧಾನಿಯ 30 ಕಡೆಗಳಲ್ಲಿ ‘ಸೇಫ್ಟಿ ಐಲ್ಯಾಂಡ್’ ವ್ಯವಸ್ಥೆ ಜಾರಿ: ಸಚಿವ ಪರಮೇಶ್ವರ್​

Date:

ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಗೆ ನಗರದ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಜಾರಿ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಪರಮೇಶ್ವರ್​ ತಿಳಿಸಿದರು.

ವಿಧಾನಪರಿಷತ್​ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಅವರು, “ಬೆಂಗಳೂರಿನಲ್ಲಿ 7500 ಕ್ಯಾಮೆರಾಗಳು ಇವೆ. ನಗರದ ನಿಗದಿತ ಪ್ರದೇಶದಲ್ಲಿ ಅಲರಾಂ ಇರಲಿದೆ. ಇವುಗಳ ಮೇಲೆ 24 ಗಂಟೆ ನಿಗಾ ಇರಲಿದೆ” ಎಂದರು.

“ಸೇಫ್ಟಿ ಐಲ್ಯಾಂಡ್‌ಗಳು ಟಿಲಿಪೋನ್‌ ಬೂತ್‌ ಮಾದರಿಯಲ್ಲಿವೆ. ಅಲ್ಲಿರುವ ಬಟನ್ ಒತ್ತಿದರೆ 7 ನಿಮಿಷದೊಳಗೆ ತಕ್ಷಣ ಪೊಲೀಸರು ಸ್ಥಳಕ್ಕೆ ಬರುತ್ತಾರೆ. ಅಪರಾಧಿಗಳನ್ನು ಹಿಡಿಯಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಕೂಡ ಬಳಕೆ ಮಾಡುತ್ತಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇಫ್ಟಿ ಐಲ್ಯಾಂಡ್‌ಗಳ ಬಳಕೆ ಹೆಚ್ಚುತ್ತಿದೆ. ಮೊನ್ನೆ ಹೊರದೇಶದ ಪ್ರಜೆಯೊಬ್ಬರು ಪರ್ಸ್‌ ಕಳೆದುಕೊಂಡು ಸೇಫ್ಟಿ ಐಲ್ಯಾಂಡ್‌ ಬಳಸಿಕೊಂಡಿದ್ದರು. ಕೂಡಲೇ ಆ ಪರ್ಸ್‌ ಕದ್ದ ಕಳ್ಳ ಪೊಲೀಸರಿಗೆ ಸಿಕ್ಕಿಬಿದ್ದ” ಎಂದು ವಿವರಿಸಿದರು.

ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಹೇಗಿರಲಿದೆ?

ನೀಲಿ ಬಣ್ಣದಲ್ಲಿರುವ ಟೆಲಿಫೋನ್ ಬೂತ್‌ನಂತಹ ರಚನೆ ಹೊಂದಿರುವ ಸೇಫ್ಟಿ ಐಲ್ಯಾಂಡ್​​ ಯಾರಾದರೂ ಸಂಕಷ್ಟದಲ್ಲಿರುವಾಗ ಅಥವಾ ಅವರ ಮೊಬೈಲ್ ಫೋನ್‌ ಸಂಪರ್ಕ ಸಾಧ್ಯವಾಗದಿದ್ದಾಗ ಅವರು ಹತ್ತಿರದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಲು ಈ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಸಬಹುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ಪ್ರತಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಿ ಸಿಸಿಟಿವಿ ಹೊಂದಿದ್ದು, ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯ ಬಗ್ಗೆ ನೈಜ ಸಮಯದ ಮಾಹಿತಿ ನೀಡುತ್ತದೆ. ಬಳಕೆದಾರರು ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಿ ಬಂದು ಬಟನ್ ಒತ್ತಬೇಕು. ಇದು ಸಮೀಪದ ನಿಯಂತ್ರಣ ಕೊಠಡಿಗೆ ಸಂಪರ್ಕ ಕಲ್ಪಿಸುವುದರೊಂದಿಗೆ ಕರೆ ಮಾಡಿದ ವ್ಯಕ್ತಿಯ ಪರಿಸ್ಥಿತಿಯನ್ನು ತಿಳಿಸುತ್ತದೆ. ಪೊಲೀಸ್ ಸಿಬ್ಬಂದಿ ಸಾಧ್ಯವಾದಷ್ಟು ಬೇಗ ಸ್ಥಳಕ್ಕೆ ಆಗಮಿಸುತ್ತಾರೆ.

ಬೆಂಗಳೂರಿನಲ್ಲಿ ಎಲ್ಲಾ ರೀತಿಯ ತುರ್ತು ಪರಿಸ್ಥಿತಿಗಳಿಗಾಗಿ ನಗರ ಪೊಲೀಸರು ಈಗಾಗಲೇ ತುರ್ತು ಟೋಲ್ ಫ್ರೀ ಸಂಖ್ಯೆ 112 ಅನ್ನು ನಿರ್ವಹಿಸುತ್ತಿದ್ದಾರೆ. ಆದಾಗ್ಯೂ, ಐಟಿ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸಾರ್ವಜನಿಕರ ಸುರಕ್ಷತೆಗಾಗಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಹೆಚ್ಚುವರಿ ರಸ್ತೆ ಸಾಧನಗಳಾಗಿವೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...