ನಮ್ಮ ಅವಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Date:

  • ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು
  • ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ

ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಂದು ಭಾಗವಹಿಸಿ ಮಾತನಾಡಿದ ಅವರು ನಮ್ಮ ಅವಧಿಯಲ್ಲಿಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮುಕ್ತತೆ ಇದೆ ಎಂದರು.

ಸಾಹಿತಿಗಳೆಂದರೆ ಸಮಾಜವನ್ನು ತಿದ್ದುವಂತಹವರು, ಅವರ ವಿಚಾರದಲ್ಲಿ ನನಗೆ ಅಪಾರ ಗೌರವ ಇದೆ ಎಂದ ಸಿಎಂ, ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ಸಮಾಜ ನನಗೇನು ನೀಡಿದೆ ಎಂದು ಪ್ರಶ್ನಿಸುವ ಬದಲು ಸಮಾಜಕ್ಕೆ ನನ್ನ ಕೊಡುಗೆಯೇನು ಎಂದು ಪ್ರಶ್ನಿಸಿಕೊಂಡು, ಅದಕ್ಕೆ ಉತ್ತರ ಕಂಡುಕೊಳ್ಳುವ ಮೂಲಕ ನಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕೆಂದರು.ಸಿದ್ದರಾಮಯ್ಯ-ಸಾಹಿತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸಮಾನತೆ ಹೋಗಲಾಡಿಸಿದರೆ ಸಮಾಜ ಅಭಿವೃದ್ಧಿ

ಸಮಾಜದಲ್ಲಿ ಬದಲಾವಣೆಗಳಾಗಬೇಕು. ಜಾತಿ ಪದ್ಧತಿಯ ಕಾರಣ, ಬಹಳ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಉಂಟಾಗುತ್ತದೆ. ಈ ಅಸಮಾನತೆಯನ್ನು ಹೋಗಲಾಡಿಸಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುತ್ತದೆ. ಇದಾದರೆ ಅಭಿವೃದ್ಧಿ ಸಾಧ್ಯವಾಗುತ್ತದೆ. ನಮ್ಮ ಸಂವಿಧಾನದ ಉದ್ದೇಶವೂ ಇದೆ ಆಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? : ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ : ಸಿಎಂ ಸಿದ್ದರಾಮಯ್ಯ

ಜ್ಞಾನ ವೃದ್ಧಿಗಾಗಿ ಪುಸ್ತಕ ಓದಬೇಕು

ಜ್ಞಾನ ವೃದ್ಧಿಗಾಗಿ ಪುಸ್ತಕವನ್ನು ಓದಲೇಬೇಕು. ಕಲಿತಷ್ಟು ಜ್ಞಾನ ವಿಕಾಸಗೊಳ್ಳುತ್ತದೆ ಎಂದು ಸಿಎಂ ಹೇಳಿದರು. ಭಾರತದಲ್ಲಿ ಒಂದು ವ್ಯಕ್ತಿ, ಒಂದು ಮತ, ಒಂದು ಮೌಲ್ಯವೆಂದು ಗುರುತಿಸುವಂತೆ ನಮ್ಮ ಸಂವಿಧಾನ ತಿಳಿಸಿದ್ದರೂ, ಸಾಮಾಜಿಕವಾಗಿ ಆರ್ಥಿಕವಾಗಿ ವೈರುಧ್ಯಗಳು ನಮ್ಮ ಸಮಾಜದಲ್ಲಿದೆ.

ಅಸಮಾನತೆಗೆ ಒಳಗಾಗುವ ಜನರೇ ಭಾರತದ ಸ್ವಾತಂತ್ರ್ಯದ ಹಾಗೂ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸಗೊಳಿಸುವ ಸಾಧ್ಯತೆಯಿದೆ ಎಂದು ಡಾ. ಅಂಬೇಡ್ಕರ್ ಸಂವಿಧಾನ ಅಂಗೀಕೃತವಾದ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ತಿಳಿಸಿದ್ದರು. ಇದಕ್ಕಾಗಿ ನಾವು ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...