ಪ್ರಧಾನಿಯ ಸುದೀರ್ಘ ಭಾಷಣ | ಕೇಂದ್ರ ಸಚಿವರು, ಬಿಜೆಪಿ ಸಂಸದರ ಸಹಿತ ನಿದ್ದೆಗೆ ಜಾರಿದ ಸ್ಪೀಕರ್!

Date:

ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು(ಗುರುವಾರ) ಲೋಕಸಭೆಯಲ್ಲಿ ಸುಮಾರು ಎರಡು ಗಂಟೆ ಹತ್ತು ನಿಮಿಷ ಸುದೀಘವಾದ ಭಾಷಣಗೈದರು.

ವಿಪಕ್ಷಗಳು ಮಣಿಪುರ ಘಟನೆಯ ಬಗ್ಗೆ ಉಲ್ಲೇಖಿಸಿ ಮಾತನಾಡುವಂತೆ ಪಟ್ಟು ಹಿಡಿದಿದ್ದರೂ, ತಮ್ಮ ಇಡೀ ಭಾಷಣದ ಹೆಚ್ಚಿನ ಸಮಯವನ್ನು ತಮ್ಮ ಸರ್ಕಾರದ ಸಾಧನೆ ಹಾಗೂ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವನ್ನು ಜರೆಯಲು ಉಪಯೋಗಿಸಿದರು.

ಸುಮಾರು ಒಂದು ಮುಕ್ಕಾಲು ಗಂಟೆ ಕಾದರೂ ಕೂಡ ಮಣಿಪುರ ಬಗ್ಗೆ ಒಂದೇ ಒಂದು ಪದ ಮಾತನಾಡದಿದ್ದ ಹಿನ್ನೆಲೆಯಲ್ಲಿ ವಿಪಕ್ಷಗಳು ಸಭಾತ್ಯಾಗ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
sleeping

ಈ ಮಧ್ಯೆ ಪ್ರಧಾನಿಯವರ ಭಾಷಣವನ್ನು ಆಲಿಸಬೇಕಿದ್ದ ಬಿಜೆಪಿ ಸಂಸದರ ಸಹಿತ ಹಲವು ಮಂದಿ ಕೇಂದ್ರ ಸಚಿವರುಗಳೇ ನಿದ್ದೆಗೆ ಜಾರಿರುವ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ಅಲ್ಲದೇ, ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಕೂಡ ಕೆಲ ಸೆಕೆಂಡುಗಳ ಕಾಲ ನಿದ್ದೆಗೆ ಜಾರುತ್ತಿರುವ ದೃಶ್ಯಗಳನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.

‘ಜನರು ನಿದ್ರಿಸಬೇಕಾದರೆ ಇಂತಹ ಭಾಷಣವನ್ನು ನೀಡಿ’ ಎಂಬ ಶೀರ್ಪಿಕೆಯೊಂದಿಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರಧಾನಿ ಮೋದಿಯವರ ಭಾಷಣವನ್ನು ಟ್ರೋಲ್ ಮಾಡಿದೆ.

ವಿಡಿಯೋ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಕಾಂಗ್ರೆಸ್ ಐಟಿ ಸೆಲ್, ಕೇಂದ್ರ ಸಚಿವರಾದ ಜೈಶಂಕರ್, ಜ್ಯೋತಿರಾದಿತ್ಯ ಸಿಂಧ್ಯಾ, ನಿತಿನ್ ಗಡ್ಕರಿ ಸಹಿತ ಕೆಲ ಬಿಜೆಪಿ ಸಂಸದರು ನಿದ್ದೆಗೆ ಜಾರಿರುವುದನ್ನು ಹಂಚಿಕೊಂಡಿದೆ.

ಇದಕ್ಕೆ ಸಾಥ್ ನೀಡಿರುವ ಹಲವು ನೆಟ್ಟಿಗರು, ಅಮಿತ್ ಶಾ, ತೇಜಸ್ವಿ ಸೂರ್ಯ ಸೇರಿದಂತೆ ಹಲವರ ದೃಶ್ಯಗಳನ್ನು ಹಂಚಿಕೊಂಡು ಟ್ರೋಲ್ ಮಾಡಿದ್ದಾರೆ.

ಜೊತೆಗೆ, ‘ಸಂಸದ್ ಟಿವಿ’ ಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಯಾಮರಾಮೆನ್ ಹಾಗೂ ವಿಡಿಯೋ ಪ್ರಸಾರದ ಸಿಬ್ಬಂದಿಯ ನೌಕರಿಯಿಂದ ನಾಳೆ ಹೋಗದಿದ್ದರೆ ಸಾಕು’ ಎಂದು ಕೆಲವರು ಆತಂಕ ವ್ಯಕ್ತಪಡಿಸಿ, ವ್ಯಂಗ್ಯವಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...