ದೇಶಕ್ಕೆ ಹೊರಗಿನಿಂದಲ್ಲ, ಒಳಗಿನಿಂದಲೇ ಬೆದರಿಕೆಯಿದೆ: ಫಾರೂಕ್ ಅಬ್ದುಲ್ಲಾ

Date:

ದೇಶಕ್ಕೆ ಹೊರಗಿನಿಂದ ಬೆದರಿಕೆ ಇರುವುದಲ್ಲ, ದೇಶದೊಳಗೆಯೇ ಬೆದರಿಕೆಯಿದೆ ಎಂದು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫೆರೆನ್ಸ್ ಅಧ್ಯಕ್ಷ ಡಾ ಫಾರೂಕ್ ಅಬ್ದುಲ್ಲಾ ಬುಧವಾರ ಹೇಳಿದ್ದಾರೆ. ಹಾಗೆಯೇ ಭಾರತದ ಭವಿಷ್ಯವನ್ನು ಭದ್ರಪಡಿಸಬೇಕಾದರೆ ಒಗ್ಗಟ್ಟಿನಿಂದ ಇರಬೇಕಾದ, ಒಡಕು ಹುಟ್ಟಿಸುವ ಹೇಳಿಕೆಗಳನ್ನು ವಿರೋಧಿಸಬೇಕಾದ ಅಗತ್ಯವನ್ನು ಫಾರೂಕ್ ಅಬ್ದುಲ್ಲಾ ಒತ್ತಿ ಹೇಳಿದ್ದಾರೆ.

ನ್ಯಾಷನಲ್ ಕಾನ್ಫೆರೆನ್ಸ್ ಮುಖ್ಯಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಫಾರೂಕ್ ಅಬ್ದುಲ್ಲಾ, “ದೇಶ ಉಳಿಯಬೇಕಾದರೆ ಇಂದಿಗೂ ಬಲಿದಾನದ ಅಗತ್ಯವಿದೆ. ದೇಶಕ್ಕೆ ಹೊರಗಿನಿಂದಲ್ಲ, ಒಳಗಿನಿಂದಲೇ ಬೆದರಿಕೆಯಿದೆ. ದೇಶದೊಳಗೆ ಇರುವವರೇ ದೇಶವನ್ನು ನಾಶ ಮಾಡಬಹುದು. ನಮ್ಮ ದೇಶವನ್ನು ಗಟ್ಟಿಗೊಳಿಸಬೇಕಾದರೆ, ನಾವು ನಮ್ಮ ಸಹೋದರ- ಸಹೋದರಿಯರನ್ನು ಪ್ರಬಲರನ್ನಾಗಿಸಬೇಕು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಭಯೋತ್ಪಾದಕ ದಾಳಿ | ಕಾಶ್ಮೀರ ಎಂದಿಗೂ ಪಾಕಿಸ್ತಾನವಾಗಲ್ಲ: ಫಾರೂಕ್ ಅಬ್ದುಲ್ಲಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ದೇಶಗಳು ಹಿಂದೂಗಳು ಅಪಾಯದಲ್ಲಿದ್ದಾರೆ ಎಂಬ ಸುಳ್ಳು ಪ್ರಚಾರವನ್ನು ಕೂಡಾ ಅಬ್ದುಲ್ಲಾ ಅವರು ಟೀಕಿಸಿದರು. “ನಮ್ಮ ದೇಶದಲ್ಲಿ ಶೇಕಡ 80ರಷ್ಟು ಹಿಂದೂಗಳು ಇದ್ದಾರೆ. ಹಾಗಿದ್ದಾಗ ಅಪಾಯ ಯಾರದ್ದು? ಜನರಲ್ಲಿ ಆತಂಕ ಹುಟ್ಟುಹಾಕುವ ನಿಟ್ಟಿನಲ್ಲಿ ಈ ರೀತಿ ಪ್ರಚಾರ ಮಾಡಲಾಗುತ್ತದೆ. ಇದು ಸುಳ್ಳು ಎಂಬುದನ್ನು ಎಲ್ಲರಿಗೂ ತಿಳಿಸುವುದು ಎಲ್ಲರ ಕರ್ತವ್ಯ” ಎಂದು ಕರೆ ನೀಡಿದರು.

ಇನ್ನು ತನ್ನ ಅಧಿಕಾರವಧಿಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ವಿಚಾರದಲ್ಲಿ ಪಾಕಿಸ್ತಾನದೊಂದಿಗೆ ಒಪ್ಪಂದ ಮಾಡಲಾಗಿದೆ ಎಂಬ ಆರೋಪದ ಬಗ್ಗೆಯೂ ಫಾರೂಕ್ ಪ್ರತಿಕ್ರಿಯೆ ನೀಡಿದರು. “ಪಾಕಿಸ್ತಾನದವರು ಬಂದು ನಿಮ್ಮ ಭೂಮಿಯನ್ನು ಕಿತ್ತುಕೊಳ್ಳುತ್ತಾರೆ ಎಂದು ಸುಳ್ಳು ಮಾಹಿತಿಯನ್ನು ಹರಡಲಾಯಿತು. ಕೇಂದ್ರ ಗೃಹ ಸಚಿವಾಲಯ ಹೊರತುಪಡಿಸಿ ಬೇರೆ ಯಾರೂ ಕೂಡಾ ಇತರೆ ದೇಶದೊಂದಿಗೆ ಒಪ್ಪಂದಕ್ಕೆ ಬರಲು ಸಾಧ್ಯವಿಲ್ಲವೆಂದು ನಾನು ಹೇಳಿದೆ. ಆದರೆ ಯಾರೂ ನನ್ನ ಮಾತನ್ನು ಕೇಳಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ: ಫಾರೂಕ್ ಅಬ್ದುಲ್ಲಾ ಘೋಷಣೆ

370 ವಿಧಿ ರದ್ಧತಿ ಬಗ್ಗೆ ಮಾತನಾಡಿದ ಫಾರೂಕ್, “370 ವಿಧಿ ರದ್ಧತಿಯನ್ನು ನೀವು ಸಂಭ್ರಮಿಸಿದಿರಿ, ಆದರೆ ಈಗ ಸ್ಥಳೀಯ ಉದ್ಯೋಗಗಳು ಕೂಡಾ ಹೊರಗಿನವರ ಪಾಳಾಗುತ್ತಿದೆ. ಕಾರ್ಮಿಕರನ್ನು ಹೊರಗಿನಿಂದ ಕರೆತರಲಾಗುತ್ತಿದೆ. ಇದರಿಂದ ನಿಮಗೆ ಏನು ಲಾಭವಾಯಿತು ಎಂದು ಒಮ್ಮೆ ಆಲೋಚಿಸಿ” ಎಂದರು.

“ನಾನು ಮುಸ್ಲಿಂ ಮತ್ತು ಭಾರತೀಯ ಮುಸ್ಲಿಂ. ನಾನು ಚೀನಾದವನೂ ಅಲ್ಲ ಪಾಕಿಸ್ತಾನಿಯೂ ಅಲ್ಲ. ಆದರೆ ನ್ಯಾಷನಲ್ ಕಾನ್ಫೆರೆನ್ಸ್‌ನ ಹಿಂದೂಗಳನ್ನೂ ಕೂಡಾ ಪಾಕಿಸ್ತಾನಿಗಳೆಂದು ಒಮ್ಮೆ ಬಿಂಬಿಸಲಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...