ಫೆಡರಲ್ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ, ಕೆನಡಾ ಗುಪ್ತಚರರ ಆರೋಪ

Date:

ಕೆನಡಾದ ಭದ್ರತಾ ಗುಪ್ತಚರ ಸೇವೆ (ಸಿಎಸ್‌ಐಎಸ್‌) ಸಿದ್ಧಪಡಿಸಿದ ವರದಿಯಲ್ಲಿ ಚೀನಾ ಅತಿದೊಡ್ಡ ಕಳವಳವಾಗಿದ್ದರೂ, ಫೆಡರಲ್ ಚುನಾವಣೆಗಳಲ್ಲಿ ಭಾರತ ಹಸ್ತಕ್ಷೇಪ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಒಂದು ಕಾಲದಲ್ಲಿ ಸ್ನೇಹಪರ ದೇಶವೆಂದೇ ಪರಿಗಣಿಸಲಾಗಿದ್ದ ಕೆನಡಾ ಇದೀಗ ನಿಧಾನವಾಗಿ ಭಾರತದ ಆಪ್ತವಲಯದಿಂದ ಹೊರಹೋಗುತ್ತಿದೆ. ಕೆನಡಾದ ಭದ್ರತಾ ಗುಪ್ತಚರ ಸೇವೆ (ಸಿಎಸ್‌ಐಎಸ್‌) ಸಿದ್ಧಪಡಿಸಿದ ವರದಿಯಲ್ಲಿ ಚೀನಾ ತಮ್ಮ ದೇಶದ ಅತಿದೊಡ್ಡ ಕಳವಳವಾಗಿರುವುದು ನಿಜವಾಗಿದ್ದರೂ, ಫೆಡರಲ್ ಚುನಾವಣೆಗಳಲ್ಲಿ ಭಾರತ ಹಸ್ತಕ್ಷೇಪ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟಿದೆ.

ಕೆನಡಾ ಮತ್ತು ಭಾರತದ ನಡುವೆ ಖಾಲಿಸ್ತಾನಿ ಉಗ್ರರಿಗೆ ಸಂಬಂಧಿಸಿದ ಘರ್ಷಣೆಯ ನಂತರ ಮಾತುಕತೆಯ ನಡುವೆ ಸಮಸ್ಯೆ ಪರಿಹಾರದ ಪ್ರಯತ್ನವಾಗುತ್ತಿದ್ದರೂ ಬಿಗುವಿನ ವಾತಾವರಣವಿದೆ. ಅದರ ನಡುವೆಯೇ ಇತ್ತೀಚೆಗೆ ಬಹಿರಂಗವಾಗಿರುವ ದಾಖಲೆಯೊಂದರಲ್ಲಿ ಸಿಎಸ್‌ಐಎಸ್‌ ವಿದೇಶಿ ಹಸ್ತಕ್ಷೇಪದ ಬಗ್ಗೆ ಡೆಮಾಕ್ರೆಟಿಕ್ ಇನ್‌ಸ್ಟಿಟ್ಯೂಷನ್ಸ್ ಸಚಿವರಿಗೆ ನೀಡಿದ ವರದಿಯಲ್ಲಿ ಭಾರತದ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ. “ಭಾರತ ವಿದೇಶಿ ಹಸ್ತಕ್ಷೇಪದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ” ಎಂದು ತಿಳಿಸಿದೆ. ಈ ವಾಕ್ಯದ ವಿವರಣೆಯಲ್ಲಿ ಭಾರತದ ಹಸ್ತಕ್ಷೇಪದ ಮಾಹಿತಿಯನ್ನು ಹೇಗೆ ನೀಡಲಾಗಿದೆ ಎಂಬ ಬಗ್ಗೆ ಬಹಿರಂಗವಾಗಿಲ್ಲ.

ಭಾರತೀಯ ರಾಜತಾಂತ್ರಿಕರು ಇತ್ತೀಚೆಗೆ ನೀಡಿದ ಮಾಧ್ಯಮ ಹೇಳಿಕೆಗಳಲ್ಲಿ ಕೆನಡಾದ ಸಾವ್ರತ್ರಿಕ ಚುನಾವಣೆಗಳಲ್ಲಿ ಹಸ್ತಕ್ಷೇಪ ಮಾಡುವ ಆರೋಪವನ್ನು ನಿರಾಕರಿಸಿದ್ದಾರೆ. “ಪ್ರಜಾಸತ್ತತ್ಮಕ ರಾಷ್ಟ್ರವಾಗಿ ನಾವು ಇತರ ಪ್ರಜಾಪ್ರಭುತ್ವಗಳ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ವಿದೇಶಾಂಗ ವ್ಯಹಾರಗಳ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಬಗ್ಗೆ ಕೆನಡಾ ಕಳವಳ ವ್ಯಕ್ತಪಡಿಸಿದ್ದರೂ, ಮುಖ್ಯವಾಗಿ 2019 ಮತ್ತು 2021ರ ಸಾರ್ವತ್ರಿಕ ಚುನಾವಣೆಗಳಲ್ಲಿ ಚೀನಾ ಹಸ್ತಕ್ಷೇಪ ಮಾಡಿರುವುದು ಕೆನಡಾದಲ್ಲಿ ನ್ಯಾಯಾಂಗ ವಿಚಾರಣೆ ಎದುರಿಸಿದೆ. ನ್ಯಾಯಮೂರ್ತಿ ಮೇರಿ ಜೋಸ್ ಹೋಗ್ ನೇತೃತ್ವದಲ್ಲಿ ಫೆಡರಲ್ ಚುನಾವಣೆ ಪ್ರಕ್ರಿಯೆಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಬಗ್ಗೆ ಸಾರ್ವಜನಿಕ ತನಿಖೆಗೆ ಆದೇಶಿಸಲಾಗಿತ್ತು. ಈ ವಾರ ನ್ಯಾಯಪೀಠ ವಿಚಾರಣೆ ಆರಂಭಿಸಿದ್ದು, 2024 ಮೇನಲ್ಲಿ ಮಧ್ಯಂತರ ವರದಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಮುಂಬರುವ ಡಿಸೆಂಬರ್ ನಲ್ಲಿ ಅಂತಿಮ ವರದಿ ಸಿದ್ಧವಾಗಲಿದೆ.

ಈವರೆಗೂ ಕೆನಡಾದ ಆಂತರಿಕ ರಾಜಕೀಯದಲ್ಲಿ ಚೀನಾ ಹಸ್ತಕ್ಷೇಪದ ಬಗ್ಗೆ ಮಾತ್ರ ಗುಪ್ತಚರ ಸಂಸ್ಥೆಗಳು ಕಣ್ಣಿಟ್ಟಿದ್ದವು. ಆದರೆ ಕಳೆದ ಸೆಪ್ಟೆಂಬರ್ 18ರಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೋ ಭಾರತೀಯ ಗುಪ್ತಚರರು ಖಾಲಿಸ್ತಾನ ಪರ ಉಗ್ರ ಹರ್ ದೀಪ್ ಸಿಂಗ್ ನಿಜ್ಜಾರ್ ನನ್ನು ಕೊಲೆಗೈದಿದ್ದಾರೆ ಎನ್ನುವ ವಿಶ್ವಾಸಾರ್ಹ ಆರೋಪಗಳಿವೆ ಎಂದು ಸಂಸತ್ತಿನಲ್ಲಿ ತಿಳಿಸಿದ ನಂತರ ಭಾರತ ಮತ್ತು ಕೆನಡಾ ನಡುವೆ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಎರಡೂ ದೇಶಗಳು ಪರಸ್ಪರರ ರಾಜತಾಂತ್ರಿಕರನ್ನು ದೇಶ ತೊರೆಯುವಂತೆ ಸೂಚಿಸಲಾಗಿತ್ತು. ಭಾರತ ಕೆನಡಾ ಪ್ರಜೆಗಳಿಗೆ ವೀಸಾ ನೀಡುವುದನ್ನು ತಡೆಹಿಡಿದಿತ್ತು. ಕೆನಡಾದ ಆರೋಪ ನಿರಾಕರಿಸಿ, ಆ ದೇಶದ ಆಂತರಿಕ ವ್ಯವಹಾರಗಳಲ್ಲಿ ಭಾರತ ಹೇಗೆ ಹಸ್ತಕ್ಷೇಪ ಮಾಡುತ್ತಿದೆ ಎನ್ನುವ ಸಾಕ್ಷ್ಯಗಳನ್ನು ನೀಡುವಂತೆ ಭಾರತ ಕೆನಡಾಗೆ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...