I-N-D-I-A ಮುಂದಿನ ಸಭೆ ಮುಂಬೈನಲ್ಲಿ : ಮಲ್ಲಿಕಾರ್ಜುನ ಖರ್ಗೆ

Date:

26 ವಿಪಕ್ಷಗಳ ಒಕ್ಕೂಟಕ್ಕೆ ನೂತನ ಹೆಸರಾಗಿ ‘ಇಂಡಿಯಾ(I-N-D-I-A)’ ಎಂದು ಇಡಲಾಗಿದ್ದು ಮುಂದಿನ ಸಭೆಯು ಮಹಾರಾಷ್ಟ್ರದ ಮುಂಬೈನಲ್ಲಿ ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಎರಡು ದಿನ ನಡೆದ ಸಭೆಯ ಬಳಿಕ ನಡೆಸಲಾದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಟ್ನಾದಲ್ಲಿ ನಡೆದ ಮೊದಲ ಸಭೆಯಲ್ಲಿ 16 ಪಕ್ಷಗಳು ಭಾಗಿಯಾಗಿದ್ದವು. ಬೆಂಗಳೂರಿನಲ್ಲಿ ನಡೆದ ಎರಡನೇ ಸಭೆಯಲ್ಲಿ 26 ಪಕ್ಷಗಳು ಭಾಗವಹಿಸಿವೆ. 11 ಜನರ ಕಮಿಟಿಯನ್ನು ಕೂಡ ರಚಿಸಲು ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮುಂದಿನ ಆಗುಹೋಗುಗಳ ಬಗ್ಗೆ ತೀರ್ಮಾನ ಮಾಡಲು ಮುಂಬೈನಲ್ಲಿ ಮುಂದಿನ ಸಭೆ ನಡೆಯಲಿದೆ’ ಎಂದರು.

ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, “ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನ ವಿರೋಧಿ ನಡೆಗಳನ್ನು ಅನುಸರಿಸುತ್ತಿದೆ. ಕೇಂದ್ರದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದಬ್ಬಾಳಿಕೆ ನಡೆಸುತ್ತಿದೆ. ಭಾರತದ ಸಾರ್ವಭೌಮತ್ವದ ಪರವಾಗಿ ನಾವು ಕೆಲಸ ಮಾಡುತ್ತೇವೆ. ವಿಪಕ್ಷಗಳು ಸಭೆ ಮಾಡುವುದನ್ನು ನೋಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಯ ಉಂಟಾಗಿದೆ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...