ಭಾರತ-ಪಾಕ್ ಸಂಘ‍ರ್ಷ | ‘ಟೂರ್ಸ್‌ ಆ್ಯಂಡ್‌ ಟ್ರಾವೆಲ್ಸ್‌’ ಕಂಪನಿ ತೆರೆಯುತ್ತಿದೆ ಮೋದಿ ಸರ್ಕಾರ: ಸಂಜಯ್ ರಾವತ್

Date:

ಪಾಕಿಸ್ತಾನ ವಿರುದ್ದ ನಡೆದ ಆಪರೇಷನ್‌ ಸಿಂಧೂರ ಮತ್ತು ಭಯೋತ್ಪಾದನೆ ವಿರೋಧಿ ನಿಲುವಿನ ಹೆಸರಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ‘ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್‌’ ಕಂಪನಿ ತೆರೆಯಲು ಮುಂದಾಗಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯಸಭಾ ಸದಸ್ಯ ರಾವತ್, “ಭಯೋತ್ಪಾದನೆ ವಿರುದ್ದವಾಗಿ ಭಾರತದ ನಿಲುವನ್ನು ಮಿತ್ರ ರಾಷ್ಟ್ರಗಳಿಗೆ ತಿಳಿಸಲು ಕೇಂದ್ರ ಸರ್ಕಾರವು ನಿಯೋಗಗಳನ್ನು ಕಳಿಸುತ್ತಿದೆ. ಆ ಮೂಲಕ, ಸರ್ಕಾರವು ಸರ್ವಪಕ್ಷಗಳ ಸದಸ್ಯರನ್ನು ಪ್ರವಾಸಕ್ಕೆ ಕಳಿಸಿದೆ” ಎಂದು ಟೀಕಿಸಿದ್ದಾರೆ.

“ಕಾಶ್ಮೀರ ಸಮಸ್ಯೆಯ ಕುರಿತು ಸರ್ಕಾರವು ವಿಶೇಷ ಅಧಿವೇಶನ ಕರೆದು, ಗಂಭೀರವಾಗಿ ಚರ್ಚೆ ನಡಸಬೇಕಿತ್ತು. ಆದರೆ, ವಿಶೇಷ ಅಧಿವೇಶನ ಕರೆಯದೆ, ವಿದೇಶಗಳಿಗೆ ನಿಯೋಗಗಳನ್ನು ಕಳಿಸುವ ಮೂಲಕ ಸಮಸ್ಯೆಯನ್ನು ಅಂತಾರಾಷ್ರೀಯಗೊಳಿಸಲು ಬಿಜೆಪಿ ಮುಂದಾಗಿದೆ. ಮೊದಲು ವಿಶೇಷ ಅಧಿವೇಶನ ನಡೆಸಿ, ಬಳಿಕ ಅಗತ್ಯವಿದ್ದರೆ ನಿಯೋಗಗಳನ್ನು ಕಳಿಸಬಹುದಿತ್ತು” ಎಂದು ರಾವತ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಘರ್ಷದಲ್ಲಿರುವ ಇಸ್ರೇಲ್, ಉಕ್ರೇನ್‌ನ ಪ್ರಧಾನಿಗಳು ವಿದೇಶಗಳಿಗೆ ನಿಯೋಗ ಕಳಿಸಿದ್ದಾರೆಯೇ. ಭಾರತದ ಸಂಸದರು ವಿದೇಶಗಳಿಗೆ ಹೋಗಿ ಏನು ಮಾಡುತ್ತಾರೆ. ಮೋದಿ ಅವರು 11 ವರ್ಷಗಳಲ್ಲಿ ಎಷ್ಟು ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಆದರೆ, ಅವರ ಪ್ರವಾಸಗಳು ಯಾವುದೇ ಫಲಿತಾಂಶ ನೀಡಿಲ್ಲ” ಎಂದಿದ್ದಾರೆ.

“ಲೋಕಸಭೆಯಲ್ಲಿ ಶಿವಸೇನೆ (ಯುಟಿಬಿ)ಯ 9 ಸಂಸದರಿದ್ದಾರೆ. ಆದರೂ, ಸರ್ವಪಕ್ಷ ನಿಯೋಗದ ವಿಚಾರವಾಗಿ ನಮ್ಮ ಪಕ್ಷವನ್ನು ಸಂಪರ್ಕಿಸಿಲ್ಲ. ಟಿಎಂಸಿ, ಸಮಾಜವಾದಿ ಪಕ್ಷ ಹಾಗೂ ಆರ್‌ಜೆಡಿ ಪಕ್ಷದ ಯಾವುದೇ ಸಂಸದರನ್ನು ನಿಯೋಗದಲ್ಲಿ ಸೇರಿಸಿಕೊಂಡಿಲ್ಲ. ನಿಯೋಗದ ವಿಚಾರದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ. ವಿಪಕ್ಷಗಳೊಳಗೆ ಒಡಕು ಮೂಡಿಸಲು ಯತ್ನಿಸುತ್ತಿದೆ” ಎಂದು ರಾವತ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...