ಐಎನ್​ಡಿಐಎ ಒಕ್ಕೂಟ ಎಂಬುದು ಫೋಟೋ ಶೂಟ್‌ಗೆ ಅಷ್ಟೇ ಸೀಮಿತ: ಪ್ರಲ್ಹಾದ್‌ ಜೋಶಿ ಟೀಕೆ

Date:

ಐಎನ್​ಡಿಐಎ ಒಕ್ಕೂಟ ಎಂಬುದು ಒಂದು ಫೋಟೋ ಶೂಟ್ ಅಷ್ಟೇ ಸೀಮಿತ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು ಯಾವುದೂ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದರು.

ಐಎನ್​ಡಿಐಎ ಮೈತ್ರಿಕೂಟದ ಪಕ್ಷಗಳ ನಡುವೆ ಬಿರುಕು ಮೂಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು. ಹಾಗಾಗಿ ಐಎನ್​ಡಿಐಎ ಒಕ್ಕೂಟ ಸಾಯುತ್ತಿದೆ” ಎಂದರು.

ನಿತೀಶ್ ಕುಮಾರ್ ಬಿಜೆಪಿಗೆ ಸೇರುವ ಬಗ್ಗೆ ಪ್ರತಿಕ್ರಿಯಿಸಿ, ” ನಾನು ಆ ಬಗ್ಗೆ ಏನೂ ಮಾತಾಡಲ್ಲ. ಅವರು ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಮಾತಾಡಲು ನಾನು ಸೂಕ್ತವೂ ಅಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ವೇಳೆ ಪ್ರಲ್ಹಾದ್ ಜೋಶಿ ಗೈರು ವಿಚಾರವಾಗಿ ಮಾತನಾಡಿ, “ಉಪರಾಷ್ಟ್ರಪತಿ ಜೊತೆ ಸಭೆಯಲ್ಲಿದ್ದ ಕಾರಣ ಭಾಗಿಯಾಗಿಲ್ಲ. ಶೆಟ್ಟರ್ ಪಕ್ಷ ಸೇರ್ಪಡೆ ವೇಳೆ ಇನ್ನೊಂದು ಅರ್ಧ ಗಂಟೆಯಲ್ಲಿ ಸೇರ್ಪಡೆ ಆಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನನಗೆ ಕರೆ ಮಾಡಿ ಹೇಳಿದ್ದರು. ಜಗದೀಶ್​ ಶೆಟ್ಟರ್ ಅವರು ಬಿಜೆಪಿಯಲ್ಲೇ ಇದ್ದವರು. ಶೆಟ್ಟರ್ ವಾಪಸ್​​ ಬಂದಿದ್ದು ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಶೆಟ್ಟರ್ ಅವರು ಬಂದಿದ್ದು ಬಿಜೆಪಿಗೆ ಅನುಕೂಲ ಆಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

“ಯಾರು ನಮ್ಮ ಪಕ್ಷದ ಸಿದ್ಧಾಂತ, ಮೋದಿ ನಾಯಕತ್ವ ಒಪ್ಪಿ ಬರುತ್ತಾರೋ ಸ್ವಾಗತ ಕೋರುತ್ತೇವೆ. ಅವರೆಲ್ಲರನ್ನೂ ಹಂತಹಂತವಾಗಿ ವಾಪಸ್ ಕರೆತರುವ ಬಗ್ಗೆ ರಾಷ್ಟ್ರೀಯ ಘಟಕ, ರಾಜ್ಯ ಘಟಕಗಳಲ್ಲಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

ರಾಘವೇಂದ್ರರನ್ನು ಹೊಗಳಿಕೆ ಬಿಜೆಪಿಗೆ ಆಶೀರ್ವಾದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನು ಹೊಗಳಿದ್ದು ಬಿಜೆಪಿಗೆ ಆಶೀರ್ವಾದ ಎಂದು ಜೋಶಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...