‘ಇಂಡಿಯಾ’ ಗೆಲ್ಲದಿದ್ದರೆ ಮಣಿಪುರ, ಹರಿಯಾಣದಂತೆ ದೇಶ ಬದಲು: ಎಂ ಕೆ ಸ್ಟಾಲಿನ್

Date:

ಇಡೀ ಭಾರತವು ಮಣಿಪುರ ಮತ್ತು ಹರಿಯಾಣದಂತಾಗುವುದನ್ನು ತಡೆಯಲು ‘ಇಂಡಿಯಾ’ ಮೈತ್ರಿಕೂಟ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದರು.

ಕನ್ನಡ, ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಸೇರಿದಂತೆ ಐದು ಭಾಷೆಗಳ ಆವೃತ್ತಿಯಲ್ಲಿ ಬಿಡುಗಡೆಯಾಗಿರುವ ತಮ್ಮ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಮಾತನಾಡಿರುವ ಎಂ ಕೆ ಸ್ಟಾಲಿನ್, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ತಾನು ಚುನಾವಣೆಗೂ ಮುಂಚೆ ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕುರಿತ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

2002ರಲ್ಲಿನ ಗುಜರಾತ್ ಗಲಭೆಗಳನ್ನೂ ಉಲ್ಲೇಖಿಸಿರುವ ಡಿಎಂಕೆ ಮುಖ್ಯಸ್ಥರೂ ಆದ ಎಂ ಕೆ ಸ್ಟಾಲಿನ್, 2002ರಲ್ಲಿ ಗುಜರಾತ್‌ನಲ್ಲಿ ಬಿತ್ತಿದ ದ್ವೇಷವು, 2023ರಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಹರಿಯಾಣದಲ್ಲಿನ ಕೋಮು ಸಂಘರ್ಷವಾಗಿ ಫಲ ನೀಡಿದೆ” ಎಂದು ಕಟುವಾಗಿ ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದಂತೆ ಎಲ್ಲ ನಾಗರಿಕರ ಬ್ಯಾಂಕ್‌ ಖಾತೆಗಳಿಗೆ ತಲಾ 15 ಲಕ್ಷ ರೂ. ಜಮಾ ಮಾಡಿಲ್ಲ. ರೈತರ ಆದಾಯ ದ್ವಿಗುಣಗೊಂಡಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರೂ ಅದೂ ಆಗಲಿಲ್ಲ” ಎಂದು ಕೇಂದ್ರ ಸರ್ಕಾರದ ವಿರುದ್ಧ ಎಂ ಕೆ ಸ್ಟಾಲಿನ್‌ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಸೆ.5ರಂದು ‘ಇಂಡಿಯಾ’ ಸಂಸದರ ಸಭೆ ಕರೆದ ಖರ್ಗೆ; ಒಂದು ಚುನಾವಣೆಯ ಬಗ್ಗೆ ವಾಗ್ದಾಳಿ

ಬಹುಸಂಸ್ಕೃತಿ ಹಾಗೂ ವೈವಿಧ್ಯಮಯ ಭಾರತವನ್ನು ನಿರ್ಮಿಸುವಂತೆ ಜನತೆಗೆ ಕರೆ ನೀಡಿರುವ ಸ್ಟಾಲಿನ್, ಸಾರ್ವಜನಿಕ ವಲಯದ ಉದ್ಯಮಗಳನ್ನು ಹಾಳುಗೆಡವಿ, ಅವುಗಳನ್ನು ಕಾರ್ಪೊರೇಟ್ ಉದ್ಯಮಿಗಳಿಗೆ ಹಸ್ತಾಂತರಿಸುತ್ತಿರುವ ವಿಷಯವನ್ನು ಮರೆಮಾಚಲು ಬಿಜೆಪಿಯು ಕೋಮುವಾದವನ್ನು ಮುನ್ನೆಲೆಗೆ ತರುತ್ತಿದೆ ಎಂದು ತಿಳಿಸಿದರು.

ಸಾಮಾಜಿಕ ನ್ಯಾಯ, ಸಾಮಾಜಿಕ ಸಾಮರಸ್ಯ, ಒಕ್ಕೂಟ ವ್ಯವಸ್ಥೆ, ಜಾತ್ಯತೀತ ರಾಜಕೀಯ ಮತ್ತು ಸಮಾಜವಾದವನ್ನು ಪುನಃಸ್ಥಾಪಿಸಲು ‘ಇಂಡಿಯಾ’ ಒಕ್ಕೂಟವನ್ನು ರಚಿಸಲಾಗಿದೆ. ದೇಶದಲ್ಲಿನ ದ್ವೇಷ ವಾತಾವರಣವನ್ನು ನಿಲ್ಲಿಸಲು ಸಾಧ್ಯವಾಗದಿದ್ದರೆ ಯಾರೂ ಭಾರತವನ್ನು ಉಳಿಸಲು ಸಾಧ್ಯವಿಲ್ಲ” ಎಂದು ಸ್ಟಾಲಿನ್ ಎಚ್ಚರಿಕೆ ನೀಡಿದರು.

“ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದಾಗಲೆಲ್ಲಾ ಡಿಎಂಕೆ ಯಾವಾಗಲೂ ಮುಂಚೂಣಿಯಲ್ಲಿದೆ” ಎಂದು ಸ್ಟಾಲಿನ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...